ಪಾಕ್ ಸೇನೆ ಕಿರುಕುಳ ಕೊಟ್ಟರೂ ಶತ್ರುಸೇನೆಗೆ ಮಾಹಿತಿ ಕೊಡದ ಅಭಿನಂದನ್!
Team Udayavani, Feb 28, 2019, 9:11 AM IST
ನವದೆಹಲಿ: ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ಅವರನ್ನು ಪಾಕಿಸ್ತಾನ ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ. ಪಾಕ್ ಸೇನೆಯ ವರ್ತನೆ ಜಿನೇವಾ ಒಪ್ಪಂದದ ಉಲ್ಲಂಘನೆಯಾಗಿದೆ. ಶೀಘ್ರವೇ ನಮ್ಮ ಪೈಲಟ್ ಅನ್ನು ಕೂಡಲೇ ಭಾರತಕ್ಕೆ ಕಳುಹಿಸಿ, ಇಲ್ಲವೇ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಭಾರತ ಗುರುವಾರ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಭಾರತ ಕಠಿಣ ನಿರ್ಧಾರಕ್ಕೆ ಮುಂದಾಗಲಿದೆ ಎಂಬ ಭಯದ ಬೆನ್ನಲ್ಲೇ ಪಾಕ್ ವಿದೇಶಾಂಗ ಸಚಿವಾಲಯ ಇದೀಗ ಭಾರತದ ಪೈಲಟ್ ಅಭಿನಂದನ್ ಅವರನ್ನು ಭಾರತಕ್ಕೆ ವಾಪಸ್ ಕಳುಹಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಅಲ್ಲದೇ ಯುದ್ಧ ಕೈದಿ ಸ್ಥಾನ ಮಾನದ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದೆ.
ರಹಸ್ಯ ಮಾಹಿತಿ ಪಾಕಿಸ್ತಾನ ಸೇನೆಗೆ ಸಿಗದಂತೆ ಮಾಡಲು ಅಭಿನಂದನ್ ಅವರು ನೀರಿಗೆ ಹಾರಿ ತನ್ನ ಬಳಿ ಇದ್ದ ಮಾಹಿತಿಯ ಮ್ಯಾಪ್, ಪತ್ರಗಳನ್ನು ನೀರಿಗೆ ಹಾಕಿದ್ದರು ಎಂದು ಮಾಧ್ಯಮದ ವರದಿ ತಿಳಿಸಿದೆ. ಅಷ್ಟೇ ಅಲ್ಲ ತನ್ನ ಬಳಿ ಉಳಿದಿದ್ದ ಮಾಹಿತಿಯ ದಾಖಲೆಗಳನ್ನು ನುಂಗಿ ನೀರು ಕುಡಿದಿರುವುದಾಗಿ ವರದಿ ವಿವರಿಸಿದೆ. ಈ ಮೂಲಕ ಅಭಿನಂದನ್ ಶತ್ರು ದೇಶಕ್ಕೆ ಯಾವ ಮಾಹಿತಿಯ ಸುಳಿವು ಸಿಗದಂತೆ ಮಾಡಿದ್ದಾರೆನ್ನಲಾಗಿದೆ.
ಒಂದೆಡೆ ಶಾಂತಿ ಮಾತುಕತೆಯ ನಾಟಕವಾಡುತ್ತಿರುವ ಪಾಕಿಸ್ತಾನ ಮತ್ತೊಂದೆಡೆ ಗುರುವಾರ ಮಧ್ಯಾಹ್ನದ ವೇಳೆ ಪಾಕಿಸ್ತಾನದ ಎರಡು ಜೆಟ್ ವಿಮಾನ ಭಾರತದ ವಾಯುಸೀಮೆಯನ್ನು ಉಲ್ಲಂಘಿಸಿ ಒಳಬರಲು ಪ್ರಯತ್ನಿಸಿದ್ದು ಈ ವೇಳೆ ಭಾರತೀಯ ವಾಯುಪಡೆ ಯುದ್ಧ ವಿಮಾನ ಹಿಮ್ಮೆಟ್ಟಿಸಿರುವುದಾಗಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?