73ನೇ ಸ್ವಾತಂತ್ರ್ಯೋತ್ಸವ;ವಿಂಗ್ ಕಮಾಂಡರ್ ಅಭಿನಂದನ್ ಗೆ ‘ವೀರ ಚಕ್ರ’ ಗೌರವ


Team Udayavani, Aug 14, 2019, 10:59 AM IST

Abhinandan-Varthaman-726

ನವದೆಹಲಿ: ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ‘ವೀರ ಚಕ್ರ’ ಪುರಸ್ಕಾರ ನೀಡಿ ಗೌರವಿಸಲಾಗುವುದು.

ಕಳೆದ ಮಾರ್ಚ್ ತಿಂಗಳಲ್ಲಿ ಪಾಕಿಸ್ಥಾನದಿಂದ ಭಾರತಕ್ಕೆ ಹಸ್ತಾಂತರಗೊಂಡ ಬಳಿಕ ಅಭಿನಂದನ್ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ ಹಾಗೂ ಅವರನ್ನು ವಿಸ್ತೃತ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅಭಿನಂದನ್ ಅವರು ಎಲ್ಲಾ ವೈದ್ಯಕೀಯ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರುವುದಾಗಿ ತಿಳಿದುಬಂದಿದೆ. ಮತ್ತು ಅವರು ವಾಯುಪಡೆಯ ಸೇವೆಗೆ ಮರಳಲು ಸಿದ್ಧರಾಗಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ಕಳೆದ ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವೆ ಯುದ್ಧದ ಸ್ಥಿತಿ ನಿರ್ಮಾಣವಾಗಿದ್ದ ಸಂದರ್ಭದಲ್ಲಿ ಎರಡೂ ದೇಶಗಳ ವಾಯುಪಡೆಗಳ ನಡುವೆ ಆಗಸದಲ್ಲಿ ಯುದ್ಧವಿಮಾನಗಳ ಮೇಲಾಟ ನಡೆದಿತ್ತು. ಈ ಸಂದರ್ಭದಲ್ಲಿ ಅಭಿನಂದನ್ ವರ್ತಮಾನ್ ಅವರು ಪಾಕಿಸ್ಥಾನದ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದರು.

ಈ ಮೂಲಕ ಪುಲ್ವಾಮ ದಾಳಿಗೆ ಪ್ರತಿಯಾಗಿ ಭಾರತ ಬಾಲಾಕೋಟ್ ವಾಯುದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಪಾಕಿಸ್ಥಾನ ನಡೆಸಲು ಉದ್ದೇಶಿಸಿದ್ದ ಪ್ರತೀಕಾರ ಕ್ರಮವನ್ನು ನಮ್ಮ ವಾಯುಪಡೆ ಯಶಸ್ವಿಯಾಗಿ ಹಿಮ್ಮೆಟ್ಟಿಸಿತ್ತು. ಆದರೆ ಈ ಘಟನೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಭಾಗದೊಳಗೆ ಅಭಿನಂದನ್ ಚಲಾಯಿಸುತ್ತಿದ್ದ ಮಿಗ್ -21 ಯುದ್ಧ ವಿಮಾನ ಪತನಗೊಂಡಿತ್ತು. ಅಭಿನಂದನ್ ಅವರು ತನ್ನ ವಿಮಾನದಿಂದ ಜಿಗಿದು ಭಾರತದ ನೆಲದೆಡೆಗೆ ಹಿಂತಿರು ಬರುವ ಯತ್ನದಲ್ಲಿದ್ದಾಗ ಸ್ಥಳಿಯರು ಅವರನ್ನು ಹಿಡಿದು ಪಾಕಿಸ್ಥಾನ ಸೇನೆಯ ವಶಕ್ಕೆ ಒಪ್ಪಿಸಿದ್ದರು.

ಪಾಕಿಸ್ಥಾನ ಸೇನೆಯ ಅಧಿಕಾರಿಗಳು ಅಭಿನಂದನ್ ಅವರ ಕಣ್ಣಿಗೆ ಬಟ್ಟೆಯನ್ನು ಕಟ್ಟಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ವರ್ತಮಾನ್ ಅವರು ತನ್ನ ಪರಿಚಯವನ್ನು ಹೊರತುಪಡಿಸಿ ಸೇನೆಗೆ ಸಂಬಂಧಿಸಿದ ಇನ್ನುಳಿದ ಯಾವ ಮಾಹಿತಿಯನ್ನೂ ನೀಡದೆ ದಿಟ್ಟತನವನ್ನು ಮೆರೆದಿದ್ದರು.

ಅಭಿನಂದನ್ ಅವರನ್ನು ಬಂಧಿಸಿ ಬಳಿಕ ಅವರನ್ನು ವಿಚಾರಣೆ ನಡೆಸುವ ವಿಡಿಯೋ ಪಾಕಿಸ್ಥಾನ ಕಡೆಯಿಂದ ಎಲ್ಲೆಡೆ ವೈರಲ್ ಗೊಂಡ ಬಳಿಕ ಭಾರತ ತನ್ನ ಚತುರ ರಾಜತಾಂತ್ರಿಕ ನಡೆಯ ಮೂಲಕ ಪಾಕಿಸ್ಥಾನ ಸರಕಾರದ ಮೇಲೆ ವಿಶ್ವಸಂಸ್ಥೆ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡವನ್ನು ಹೇರಿ ಅಭಿನಂದನ್ ಅವರನ್ನು ಎರಡೇ ದಿನಗಳಲ್ಲಿ ಭಾರತಕ್ಕೆ ವಾಪಾಸು ಕರೆಯಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು.

ಈ ಎಲ್ಲಾ ಬೆಳವಣಿಗೆಗಳಿಂದಾಗಿ ಫೆಬ್ರವರಿ 27ರಂದು ಪಾಕಿಗಳ ಕೈಯಲ್ಲಿ ಸೆರೆಯಾದ ಅಭಿನಂದನ್ ಮಾರ್ಚ್ 01ರಂದು ವಾಘಾ-ಅಟ್ಟಾರಿ ಗಡಿ ಮೂಲಕ ಪಾಕಿಸ್ಥಾನ ಅಧಿಕಾರಿಗಳಿಂದ ಭಾರತಕ್ಕೆ ಹಸ್ತಾಂತರಿಸಲ್ಪಟ್ಟಿದ್ದರು. ಅಂದಿನಿಂದ ಅಭಿನಂದನ್ ವರ್ತಮಾನ್ ಅವರು ಭಾರತೀಯರ ಕಣ್ಮಣಿಯಾಗಿ ರೂಪುಗೊಂಡಿದ್ದರು.

ಅತ್ತ ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಅವರೂ ಸಹ ಎರಡು ರಾಷ್ಟ್ರಗಳ ನಡುವೆ ಉಂಟಾಗಿರುವ ಬಿಗುವಿನ ವಾತಾವರಣವನ್ನು ತಿಳಿಗೊಳಿಸುವ ಸೌಹಾರ್ಧತೆಯ ಸಂಕೇತವಾಗಿ ಅಭಿನಂದನ್ ಅವರನ್ನು ಬಿಡುಗಡೆಗೊಳಿಸುತ್ತಿರುವುದಾಗಿ ಹೇಳಿಕೊಂಡಿದ್ದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.