ರಾಜಸ್ಥಾನದಲ್ಲಿ ಗೆದ್ದ ಕೈ; ಕೈಗೆ 3, ಬಿಜೆಪಿಗೆ ಒಂದು ಸ್ಥಾನ; ಸೋತ ಸುಭಾಷ್‌ ಚಂದ್ರ


Team Udayavani, Jun 11, 2022, 2:00 AM IST

ರಾಜಸ್ಥಾನದಲ್ಲಿ ಗೆದ್ದ ಕೈ; ಕೈಗೆ 3, ಬಿಜೆಪಿಗೆ ಒಂದು ಸ್ಥಾನ; ಸೋತ ಸುಭಾಷ್‌ ಚಂದ್ರ

ಜೈಪುರ: ರಾಜಸ್ಥಾನದಿಂದ ತೆರವಾಗಿದ್ದ ನಾಲ್ಕು ರಾಜ್ಯಸಭಾ ಸ್ಥಾನಗಳಿಗಾಗಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮೂರು ಸ್ಥಾನಗಳನ್ನು ಗೆದ್ದುಕೊಳ್ಳುವಲ್ಲಿ ಸಫ‌ಲವಾಗಿದೆ. ನಾಲ್ಕರಲ್ಲಿ ಎರಡು ಸ್ಥಾನಗಳಲ್ಲಿ ಕಾಂಗ್ರೆಸ್‌, ಒಂದು ಸ್ಥಾನದಲ್ಲಿ ಬಿಜೆಪಿ ಜಯಗಳಿಸುವುದು ಪಕ್ಕಾ ಆಗಿತ್ತು. ಆದರೆ ನಾಲ್ಕನೇ ಸ್ಥಾನಕ್ಕಾಗಿ ಕಾಂಗ್ರೆಸ್‌, ಬಿಜೆಪಿ ನಡುವೆ ಹಗ್ಗಜಗ್ಗಾಟ ಶುರುವಾಗಿತ್ತು.

ಇದೇ ವೇಳೆ ರಾಜ್ಯಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಧ್ಯಮ ಲೋಕದ ದೈತ್ಯ ಉದ್ಯಮಿ ಸುಭಾಷ್‌ ಚಂದ್ರ ಅವರಿಗೆ ಬಿಜೆಪಿ, ಆರ್‌ಎಲ್‌ಪಿ ಪಕ್ಷಗಳು ಬೆಂಬಲ ಘೋಷಿಸಿದ್ದವು. ಅದರ ಹೊರತಾಗಿಯೂ, ಸುಭಾಷ್‌ ಚಂದ್ರ ಅವರಿಗೆ ಗೆಲುವು ಪಡೆಯಲು 8 ಮತಗಳ ಆವಶ್ಯಕತೆಯಿತ್ತು.

ಕಳೆದ ಬಾರಿ ಹರಿಯಾಣದಲ್ಲಿ ಅಡ್ಡಮತ ಪಡೆಯಲು ಯಶಸ್ವಿಯಾಗಿದ್ದ ಸುಭಾಷ್‌ ಚಂದ್ರ ರಾಜಸ್ಥಾನದಲ್ಲಿ ಸೋತಿದ್ದಾರೆ. ಆಗ ಅಧಿಕೃತ ಅಭ್ಯರ್ಥಿಯನ್ನೇ ಅವರು ಸೋಲಿಸಿದ್ದರು. ಈ ಬಾರಿ ಕಾಂಗ್ರೆಸ್‌ನವರು ತಮ್ಮ ಶಾಸಕರನ್ನುರೆಸಾರ್ಟ್‌ನಲ್ಲೇ ಹಿಡಿದಿಟ್ಟುಕೊಂಡ ಪರಿಣಾಮ, ಅಡ್ಡಮತಕ್ಕೆ ಅವಕಾಶ ಸಿಕ್ಕಿಲ್ಲ. ಇದೇ ವೇಳೆ, ಕಾಂಗ್ರೆಸ್‌ನಿಂದ ಗೆದ್ದಿರುವ ಮುಕುಲ್‌ ವಾಸ್ನಿಕ್‌, ರಣದೀಪ್‌ ಸುಜೇìವಾಲಾಗೆ ಸಿಗಬೇಕಿದ್ದ ಮತಗಳಿಗಿಂತ ಎರಡು ಮತಗಳು ಹೆಚ್ಚಿಗೆ ಸಿಕ್ಕಿವೆ.

ಹಾಗೆಯೇ, ಬಿಜೆಪಿಯಿಂದ ಗೆದ್ದಿರುವ ಘನಶ್ಯಾಂ ತಿವಾರಿಯವರಿಗೂ ಎರಡು ಮತಗಳು ಹೆಚ್ಚಿಗೆ ಬಂದಿವೆ. ಒಂದು ಮತ ತಿರಸ್ಕೃತಗೊಂಡಿದೆ.

ರಾಣಿ ಕುಶ್ವಾಹ ವಿರುದ್ಧ “ಅಡ್ಡ ಮತ’ ಆರೋಪ: ರಾಜಸ್ಥಾನದಲ್ಲಿ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಅವುಗಳಲ್ಲಿ ಎರಡಲ್ಲಿ ಆಡಳಿತಾರೂಢ ಕಾಂಗ್ರೆಸ್‌, ಒಂದರಲ್ಲಿ ಬಿಜೆಪಿ ಜಯಗಳಿಸುವುದು ನಿಚ್ಚಳವಾಗಿತ್ತು. ಆದರೆ, ನಾಲ್ಕನೇ ರಾಜ್ಯಸಭಾ ಸ್ಥಾನಕ್ಕೆ ಎರಡೂ ಪಕ್ಷಗಳ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಇದರ ನಡುವೆಯೇ, ಬಿಜೆಪಿಯ ಶಾಸಕಿ ಶೋಭಾ ರಾಣಿ ಕುಶ್ವಾಹ ಅವರು, ಕಾಂಗ್ರೆಸ್‌ ಅಭ್ಯರ್ಥಿಯ ಪರವಾಗಿ ಮತ ಹಾಕಿರುವ ಆರೋಪಗಳು ಕೇಳಿಬಂದಿವೆ. ಇದು ಬಿಜೆಪಿಗೆ ಇರುಸು ಮುರುಸು ತಂದಿದೆ.

ಮತದಾನದ ವೇಳೆ ಬಿಎಸ್‌ಪಿಯಿಂದ ಶಾಸಕ ರಾಗಿ ಆಯ್ಕೆಯಾಗಿ 2019ರಲ್ಲಿ ಕಾಂಗ್ರೆಸ್‌ ಸೇರ್ಪಡೆ ಗೊಂಡಿದ್ದ ನಾಲ್ವರು ಶಾಸಕರು ಕಾಂಗ್ರೆಸಿಗೆ ಮತ ಚಲಾಯಿಸಿದರು. ಇವರೊಂದಿಗೆ ಗುರುತಿಸಿಕೊಂಡಿ ರುವ ಇನ್ನಿಬ್ಬರು ಬಿಎಸ್‌ಪಿ ಶಾಸಕರೂ ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಮತ ಹಾಕಿದರು.

ಮತದಾನದಿಂದ ದೂರ ಉಳಿದ ಬಲರಾಜ್‌ ಕುಂದು: ಹರಿಯಾಣದಿಂದ ಎರಡು ರಾಜ್ಯಸಭಾ ಸ್ಥಾನಗಳಿಗೆ ಆಯ್ಕೆಗಳು ನಡೆಯಬೇಕಿತ್ತು. ಬಿಜೆಪಿ ಯಿಂದ ಕ್ರಿಶನ್‌ ಲಾಲ್‌ ಪನ್ವಾರ್‌, ಕಾಂಗ್ರೆಸ್‌ನಿಂದ ಅಜಯ್‌ ಮಾಕನ್‌ ಕಣದಲ್ಲಿದ್ದರೆ, ಕಾರ್ತಿಕೇಯ ಶರ್ಮಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ನಿರ್ಣಾಯಕ ಎನಿಸಿದ್ದ ಹರಿಯಾಣ ವಿಧಾನಸಭೆಯ ಏಳು ಪಕ್ಷೇತರ ಶಾಸಕರಲ್ಲಿ ಆರು ಮತಗಳು ಬಿಜೆಪಿಗೆ ಹರಿದು ಬಂದಿವೆ ಎಂದು ಬಿಜೆಪಿ ನಾಯಕ ರಣಬೀರ್‌ ಸಿಂಗ್‌ ತಿಳಿಸಿದರು. ಮತ್ತೊಬ್ಬ ಪಕ್ಷೇತರ ಶಾಸಕ ಬಲರಾಜ್‌ ಕುಂದು ಅವರು ಮತದಾನದಿಂದ ದೂರ ಉಳಿದಿದ್ದರು.

ಹರಿಯಾಣ, ಮಹಾರಾಷ್ಟ್ರದಲ್ಲಿ ಎಣಿಕೆ ವಿಳಂಬ
ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮೂವರು ಶಾಸಕರು, ಹರಿಯಾಣದ ಇಬ್ಬರು ಕಾಂಗ್ರೆಸ್‌ ಶಾಸಕರು, ತಮ್ಮ ಮತಪತ್ರಗಳನ್ನು ಬಹಿರಂಗವಾಗಿ ಪ್ರದರ್ಶಿಸುವ ಮೂಲಕ ಮತದಾನದ ನಿಯಮಗ ಳನ್ನು ಗಾಳಿಗೆ ತೂರಿದ್ದಾರೆಂದು ಬಿಜೆಪಿ ಆರೋಪಿ ಸಿತು. ಈ ಗೊಂದಲದಲ್ಲಿ ಈ ಎರಡೂ ರಾಜ್ಯಗಳಲ್ಲಿ ಮತ ಎಣಿಕೆ ಗೊಂದಲ ಮುಂದುವರಿದಿತ್ತು.

ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಹೊತ್ತಿಗೆ ಚುನಾವಣ ಆಯುಕ್ತರನ್ನು ಭೇಟಿ ಮಾಡಿದ ಬಿಜೆಪಿಯ ಕೇಂದ್ರ ಸಚಿವ ಮುಕ್ತಾರ್‌ ಅಬ್ಟಾಸ್‌ ನಖೀÌ, ಗಜೇಂದ್ರ ಸಿಂಗ್‌ ಶೆಖಾವತ್‌, ಜಿತೇಂದ್ರ ಸಿಂಗ್‌ ಹಾಗೂ ಅರ್ಜುನ್‌ ರಾಮ್‌ ಮೇಘವಾಲ್‌ ಅವರ ನಿಯೋಗ, ತಮ್ಮ ಆರೋಪವನ್ನು ಆಯು ಕ್ತರ ಗಮನಕ್ಕೆ ತಂದಿತಲ್ಲದೆ, ನಿಯಮ ಮೀರಿದ ಶಾಸಕರ ಮತಗಳನ್ನು ಅಸಿಂಧುಗೊಳಿಸಬೇಕೆಂದು ಮನವಿ ಮಾಡಿದರು. ಹರಿಯಾಣ ಕಾಂಗ್ರೆಸ್‌ ಶಾಸಕರ ಪರವಾಗಿ ಮನವಿ ಸಲ್ಲಿಸಿದ ಕಾಂಗ್ರೆಸ್‌ ನಾಯಕ ಅಜಯ್‌ ಮಾಕನ್‌, ಬಿಜೆಪಿ ಆರೋಪದಲ್ಲಿ ಹುರುಳಿಲ್ಲ ಎಂದು ಆಯೋಗಕ್ಕೆ ಮನವರಿಕೆ ಮಾಡಲು ಯತ್ನಿಸಿದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.