ಬರುತ್ತಿದೆ ಹೊಸ ಕಾನೂನು : ಇನ್ನು ಸೋಷಿಯಲ್ ಮೀಡಿಯಾದಲ್ಲಿ ಅನಾಮಿಕತೆಗೆ ಅವಕಾಶವಿಲ್ಲ!


Team Udayavani, Feb 13, 2020, 9:22 PM IST

Social-Media-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ವಿಶ್ವಾದ್ಯಂತ ಹಲವಾರು ದೇಶಗಳು ಸಾಮಾಜಿಕ ಜಾಲತಾಣ ವೇದಿಕೆಗಳ ಮೇಲೆ ನಿಯಂತ್ರಣ ಸಾಧಿಸಲು ಹೊಸ ಕಾನೂನುಗಳನ್ನು ಪರಿಚಯಿಸುತ್ತಿವೆ. ಈ ಹೊಸ ಕಾನೂನುಗಳಲ್ಲಿ ಸಾಮಾಜಿಕ ಜಾಲತಾಣ ಬಳಕೆದಾರರು ತಮ್ಮ ಅನಾಮಿಕತೆಯನ್ನು ಕಾಪಾಡಿಕೊಳ್ಳಲು ಅವಕಾಶವಿರುವುದಿಲ್ಲ.

ಅದೇ ರೀತಿ ಭಾರತ ಸರಕಾರವೂ ಸಹ ಫೇಸ್ಬುಕ್, ವಾಟ್ಸ್ಯಾಪ್, ಟ್ವಿಟ್ಟರ್, ಟಿಕ್ ಟಾಕ್, ಇನ್ ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮಾಹಿತಿ ಹಂಚಿಕೆಯ ಕುರಿತಾದಂತೆ ಕಾನೂನನ್ನು ರೂಪಿಸುತ್ತಿದೆ. ಈ ಕಾನೂನಿಕ ಪ್ರಕಾರ ಅವಶ್ಯಕ ಸಂದರ್ಭಗಳಲ್ಲಿ ಸರಕಾರದ ಏಜೆನ್ಸಿಗಳು ಬಳಕೆದಾರರ ಮಾಹಿತಿಗಳನ್ನು ಕೇಳಿದರೆ ಈ ಸಾಮಾಜಿಕ ಜಾಲತಾಣ ಕಂಪೆನಿಗಳು ಮಾಹಿತಿಗಳನ್ನು ನೀಡವುದು ಕಡ್ಡಾಯವಾಗಿರುತ್ತದೆ.

ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಹರಿದಾಡುಮ ಮಾಹಿತಿಗಳನ್ನು ಹೆಚ್ಚೆಚ್ಚು ಜವಾಬ್ದಾರಿಯುತಗೊಳಿಸುವ ನಿಟ್ಟಿನಲ್ಲಿ ಸರಕಾರ ಈ ಕಾನೂನನ್ನು ರೂಪಿಸುತ್ತಿದೆಯಾದರೂ ಇಲ್ಲಿ ಕೋಟ್ಯಂತರ ಬಳಕೆದಾರರ ಮಾಹಿತಿಗಳ ಗೌಪ್ಯತೆ ಮತ್ತುಅನಾಮಿಕತೆ ಉಳಿಯುವುದಿಲ್ಲ ಎನ್ನುವ ವಾದವೂ ಕೇಳಿಬರುತ್ತಿದೆ.

ಸುಳ್ಳು ಸುದ್ದಿಗಳು, ಮಕ್ಕಳ ಆಶ್ಲೀಲ ಚಿತ್ರಗಳು, ಜನಾಂಗ ನಿಂದನೆ ಸಂಬಂ‍ಧಿತ ವಿಷಯಗಳು ಅಥವಾ ಭಯೋತ್ಪಾದಕತೆಗೆ ಕುಮ್ಮಕ್ಕು ನೀಡುವ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ವಿಚಾರದಲ್ಲಿ ಸಾಮಾಜಿಕ ಜಾಲತಾಣ ಮಾಧ್ಯಮ ಸಂಸ್ಥೆಗಳನ್ನು ಇನ್ನಷ್ಟು ಜವಾಬ್ದಾರಿಯುತಗೊಳಿಸುವ ಉದ್ದೇಶವನ್ನು ಈ ಕಾನೂನು ಹೊಂದಿದೆ.

2018ರ ಡಿಸೆಂಬರ್ ತಿಂಗಳಿನಲ್ಲಿ ಭಾರತ ಸರಕಾರವು ಈ ಹೊಸ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿ ಸಾರ್ವಜನಿಕ ಅಭಿಪ್ರಾಯಕ್ಕಾಗಿ ಹೊರಹಾಕಿತ್ತು.

ಆದರೆ ಇದಕ್ಕೆ ಪ್ರತಿಕ್ರಿಯಿಸಿದ್ದ ಭಾರತೀಯ ಇಂಟರ್ನೆಟ್ ಮತ್ತು ಮೊಬೈಲ್ ಸಂಘಟನೆ ಹಾಗೂ ಫೇಸ್ಬುಕ್, ಅಮೆಝಾನ್.ಕಾಂ ಮತ್ತು ಗೂಗಲ್ ನ ಮಾತೃಸಂಸ್ಥೆಆಲ್ಫಾಬೆಟ್ ಗಳು ಸದಸ್ಯರಾಗಿರುವ ವ್ಯವಹಾರ ಸಮೂಹಗಳು ಈ ನೂತನ ಕಾನೂನು ‘ಸುಪ್ರೀಂಕೋರ್ಟ್ ಗುರುತಿಸಿರುವ ಖಾಸಗಿ ಹಕ್ಕುಗಳ ಸ್ಪಷ್ಟ ಉಲ್ಲಂಘನೆ’ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದವು.

ಆದರೆ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಈ ಹೊಸ ಕಾನೂನನ್ನು ಹೆಚ್ಚಿನ ಬದಲಾವಣೆಗಳಿಲ್ಲದೇ ಈ ತಿಂಗಳ ಕೊನೆಯೊಳಗೆ ಪ್ರಕಟಿಸುವ ನಿರೀಕ್ಷೆ ಇದೆ.

ಮೂಲ ಕರಡು ಪ್ರತಿಯಲ್ಲಿ ಇರುವಂತೆ, ಯೂಟ್ಯೂಬ್, ಟಿಕ್ ಟಾಕ್, ವಾಟ್ಸ್ಯಾಪ್ ನಂತಹ ಸಾಮಾಜಿಕ ಜಾಲತಾಣ ಮಾಧ್ಯಮಗಳು ತಮ್ಮ ಮೂಲಕ ಮಾಡಲಾದ ಪೋಸ್ಟ್ ಗಳ ಮೂಲವನ್ನು 72 ಗಂಟೆಗಳೊಳಗಾಗಿ ಪತ್ತೆ ಮಾಡಲು ಸರಕಾರಕ್ಕೆ ಸಹಾಯಮಾಡಬೇಕು.

ಮತ್ತು ಸರಕಾರದ ಉದ್ದೇಶಿತ ತನಿಖೆಗಳಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಕಂಪೆನಿಗಳು ತಮ್ಮಲ್ಲಿರುವ ಈ ಮಾಹಿತಿ ದಾಖಲೆಗಳನ್ನು 180 ದಿನಗಳವರೆಗೆ ತಮ್ಮಲ್ಲಿ ಕಾಯ್ದಿರಿಸಿಕೊಳ್ಳಬೆಕು. ಈ ಎಲ್ಲಾ ಅಂಶಗಳನ್ನು ಒಳಗೊಂಡಿರುವ ಕಾಯ್ದೆಯ ಭಾಷೆ ಹಾಗೂ ವಿಷಯಗಳನ್ನು ಸಚಿವಾಲಯವು ಇನ್ನೂ ಅಂತಿಮಗೊಳಿಸುತ್ತಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.