Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ


Team Udayavani, May 24, 2024, 2:51 PM IST

Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ

ಕೋಲ್ಕತ್ತಾ: ವೈದ್ಯಕೀಯ ಚಿಕಿತ್ಸೆಗಾಗಿ ಮೇ 12 ರಂದು ಕೋಲ್ಕತ್ತಾಗೆ ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಅನಾರ್ ಅವರು ಕೊಲೆಯಾಗಿದ್ದಾರೆ. ಕೋಲ್ಕತ್ತಾಗೆ ಬಂದ ಕೆಲವು ದಿನಗಳ ಕಾಲ ಅವರು ಸ್ನೇಹಿತ ಗೋಪಾಲ್ ಬಿಸ್ವಾಸ್ ಅವರೊಂದಿಗೆ ವಾಸಿಸುತ್ತಿದ್ದರು. ಬಳಿಕ ಕಾಣೆಯಾಗಿದ್ದರು. ಅವರು ಕೊನೆಯದಾಗಿ ಕೋಲ್ಕತ್ತಾದ ಹೊರವಲಯದಲ್ಲಿರುವ ಉನ್ನತ-ಮಟ್ಟದ ಅಪಾರ್ಟ್‌ಮೆಂಟ್ ಸಂಕೀರ್ಣದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲಿ ಅವರನ್ನು ಕೊಲೆ ಮಾಡಿ ಅವರ ದೇಹವನ್ನು ಚರ್ಮ ಸುಲಿದು, ಕತ್ತರಿಸಿ ಮತ್ತು ತುಂಡುಗಳನ್ನು ಪ್ಲಾಸ್ಟಿಕ್ ಪ್ಯಾಕೆಟ್‌ಗಳಲ್ಲಿ ತುಂಬಿ ನಗರದಾದ್ಯಂತ ಎಸೆಯಲಾಗಿದೆ.

ಇದೀಗ ಸಂಸದ ಅನ್ವರುಲ್ ಅಜೀಂ ಅನ್ವರ್ ಕೋಲ್ಕತ್ತಾದಲ್ಲಿ ಹತ್ಯೆಯಾಗುವ ಮೊದಲು ಅವರನ್ನು ಹನಿ ಟ್ರ್ಯಾಪ್ ಮಾಡಲು ಬಳಸಿದ್ದ ಮಹಿಳೆಯನ್ನು ಢಾಕಾದಲ್ಲಿ ಬಂಧಿಸಲಾಗಿದೆ. ಶಿಲಾಂತಿ ರಹಮಾನ್ ಎಂದು ಗುರುತಿಸಲಾದ ಮಹಿಳೆ ಬಾಂಗ್ಲಾದೇಶಿ ಪ್ರಜೆ ಮತ್ತು ಪ್ರಮುಖ ಆರೋಪಿ ಅಖ್ತರುಝಾಮಾನ್ ಶಾಹಿನ್ ನ ಗೆಳತಿ ಎಂದು ಬಾಂಗ್ಲಾದೇಶ ಪೊಲೀಸ್ ಮೂಲಗಳು ತಿಳಿಸಿವೆ.

ಅಮೆರಿಕದ ಪ್ರಜೆಯಾಗಿರುವ ಅಖ್ತರುಜ್ಜಮಾನ್ ಅವರು ಅವಾಮಿ ಲೀಗ್ ಸಂಸದರ ಸ್ನೇಹಿತರಾಗಿದ್ದರು. ಕೋಲ್ಕತ್ತಾದ ನ್ಯೂ ಟೌನ್ ಪ್ರದೇಶದಲ್ಲಿ ಅಖ್ತರುಝಾಮಾನ್ ಅವರ ಬಾಡಿಗೆ ನಿವಾಸದಲ್ಲಿ ಸಂಸದರನ್ನು ಹತ್ಯೆ ಮಾಡಲಾಗಿದೆ.

ಅನ್ವರುಲ್ ಹತ್ಯೆಯಾದಾಗ ಶಿಲಾಂತಿ ಕೋಲ್ಕತ್ತಾದಲ್ಲಿ ಇದ್ದಳು ಮತ್ತು ಮೇ 15 ರಂದು ಮುಖ್ಯ ಶಂಕಿತ ಕೊಲೆಗಾರ ಅಮಾನುಲ್ಲಾ ಅಮನ್ ಜೊತೆಗೆ ಢಾಕಾಗೆ ಮರಳಿದಳು. ಅನ್ವರುಲ್ ನನ್ನು ಬಾಂಗ್ಲಾದೇಶದಿಂದ ಕೋಲ್ಕತ್ತಾಗೆ ಕರೆತರಲು ಶಿಲಾಂತಿಯನ್ನು ಅಖ್ತರುಜ್ಜಮಾನ್ ಹನಿ ಟ್ರ್ಯಾಪ್ ಆಗಿ ಬಳಸಿಕೊಂಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೊಲೆಗೆ ನಿಖರ ಕಾರಣ ಯಾವುದು ಎಂದು ಪೊಲೀಸರು ಇದುವರೆಗೂ ಖಚಿತಪಡಿಸಿಲ್ಲ. ಆದರೆ ಹಣಕಾಸಿನ ವಿಚಾರದ ಗಲಾಟೆಯು ಕೊಲೆಗೆ ಕಾರಣವಾಗಿದೆ ಎನ್ನಲಾಗಿದೆ. ಕೃತ್ಯದಲ್ಲಿ ಭಾಗಿಯಾದವರಿಗೆ ಅಖ್ತರುಜ್ಜಮಾನ್ ಸುಮಾರು 5 ಕೋಟಿ ರೂ ಪಾವತಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮುಂಬೈನಿಂದ ಶಂಕಿತನನ್ನು ಬಂಧಿಸಿದ ನಂತರ ಪ್ರಕರಣದ ತನಿಖೆಯು ಪ್ರಗತಿ ಪಡೆಯಿತು. ಶಂಕಿತ ಆರೋಪಿ ಜಿಹಾದ್ ಹವ್ಲಾದಾರ್, ನ್ಯೂ ಟೌನ್ ಫ್ಲಾಟ್‌ ನಲ್ಲಿ ಇತರ ನಾಲ್ವರು ಜೊತೆಗೂಡಿ ಬಾಂಗ್ಲಾದೇಶಿ ಸಂಸದನನ್ನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ವಿಚಾರಣೆಯ ಸಮಯದಲ್ಲಿ, ಅಖ್ತರುಝಾಮಾನ್ ಅವರ ಆದೇಶದ ಮೇರೆಗೆ ಕೊಲೆ ನಡೆಸಲಾಗಿದೆ ಎಂದು ಹವ್ಲಾದರ್ ಹೇಳಿದ್ದಾರೆ.

ಟಾಪ್ ನ್ಯೂಸ್

1-sadsdad

Delhi ನೀರಿಗಾಗಿ ಕೋಲಾಹಲ: ಮಡಕೆಗಳಿಂದಲೇ ಜಲಮಂಡಳಿ ಕಚೇರಿ ಧ್ವಂಸ

police crime

Thane; ವಧೆಗಾಗಿ ತಂದ ಮೇಕೆಯ ಮೇಲೆ ದೇವರ ಹೆಸರು: ಆಕ್ರೋಶ

ಏಳನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

June ಅಂತ್ಯದೊಳಗೆ 7ನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

15

Road mishap: ಕುಂಬ್ರ ಸಮೀಪದ ಶೇಖಮಲೆ ಬಳಿ ಕಾರುಗಳ ನಡುವೆ ಢಿಕ್ಕಿ; ಇಬ್ಬರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsdad

Delhi ನೀರಿಗಾಗಿ ಕೋಲಾಹಲ: ಮಡಕೆಗಳಿಂದಲೇ ಜಲಮಂಡಳಿ ಕಚೇರಿ ಧ್ವಂಸ

police crime

Thane; ವಧೆಗಾಗಿ ತಂದ ಮೇಕೆಯ ಮೇಲೆ ದೇವರ ಹೆಸರು: ಆಕ್ರೋಶ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

1-aaaa

Bihar:ಗಂಗಾ ನದಿಯಲ್ಲಿ ಮುಳುಗಿದ 17 ಭಕ್ತರಿದ್ದ ದೋಣಿ,6 ಮಂದಿ ನಾಪತ್ತೆ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-sadsdad

Delhi ನೀರಿಗಾಗಿ ಕೋಲಾಹಲ: ಮಡಕೆಗಳಿಂದಲೇ ಜಲಮಂಡಳಿ ಕಚೇರಿ ಧ್ವಂಸ

police crime

Thane; ವಧೆಗಾಗಿ ತಂದ ಮೇಕೆಯ ಮೇಲೆ ದೇವರ ಹೆಸರು: ಆಕ್ರೋಶ

ಏಳನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

June ಅಂತ್ಯದೊಳಗೆ 7ನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.