Odisha Train ದುರಂತ; ಪತಿ ಮೃತಪಟ್ಟಿದ್ದಾನೆ ಎಂದು ಸುಳ್ಳು ಕಥೆ ಕಟ್ಟಿದ ಮಹಿಳೆ!
ಪರಿಹಾರದ ಮೊತ್ತಕ್ಕಾಗಿ ನಾಟಕ ಮಾಡಿ ಸಂಕಷ್ಟಕ್ಕೆ ಸಿಲುಕಿದಳು
Team Udayavani, Jun 7, 2023, 3:24 PM IST
ಹೊಸದಿಲ್ಲಿ: ಬಾಲಸೋರ್ ಘೋರ ರೈಲು ಅಪಘಾತದಲ್ಲಿ ತನ್ನ ಪತಿ ಸಾವನ್ನಪ್ಪಿದ್ದಾನೆ ಎಂದು ರಾಜ್ಯ ಸರ್ಕಾರ ಮತ್ತು ರೈಲ್ವೆ ಘೋಷಿಸಿದ ಪರಿಹಾರದ ಹಣಕ್ಕಾಗಿ ಸುಳ್ಳು ಸೃಷ್ಟಿ ಮಾಡಲು ಪ್ರಯತ್ನಿಸಿದ ಮಹಿಳೆ ಸಂಕಷ್ಟಕ್ಕೆ ಸಿಲುಕಿದ್ದಾಳೆ.
ಕಟಕ್ ಜಿಲ್ಲೆಯ ಮಣಿಬಂಡಾದ ಗೀತಾಂಜಲಿ ದತ್ತಾ ಜೂನ್ 2 ರಂದು ನಡೆದ ಅಪಘಾತದಲ್ಲಿ ತನ್ನ ಪತಿ ಬಿಜಯ್ ದತ್ತಾ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದ್ದಳು ಮತ್ತು ಮೃತದೇಹವನ್ನು ತನ್ನ ಗಂಡನದೇ ಎಂದು ಗುರುತಿಸಿದ್ದಳು. ಆದರೆ, ದಾಖಲೆಗಳ ಪರಿಶೀಲನೆಯ ನಂತರ ಆಕೆ ಹೇಳಿದ್ದು ಸುಳ್ಳು ಎಂದು ತಿಳಿದುಬಂದಿದೆ.
ಪೊಲೀಸರು ಎಚ್ಚರಿಕೆ ನೀಡಿ ಆಕೆಯನ್ನು ಬಿಟ್ಟಿದ್ದಾರಾದರೂ, ಪತಿ ಮಣಿಯಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಸಂಕಷ್ಟ ಶುರುವಾಗಿದೆ. ಬಂಧನದ ಭೀತಿಯಿಂದ ಮಹಿಳೆ ಈಗ ತಲೆಮರೆಸಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 13 ವರ್ಷಗಳಿಂದ ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕರ ಹಣವನ್ನು ದೋಚಲು ಯತ್ನಿಸಿದ ಗೀತಾಂಜಲಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜಯ್ ಒತ್ತಾಯಿಸಿದ್ದಾರೆ.
ದುರಂತದ ಬಳಿಕ ರೈಲ್ವೆ ಸಚಿವಾಲಯ 10 ಲಕ್ಷ ರೂಪಾಯಿ ಪರಿಹಾರ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರು 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ