ಪಾಕ್ ಅಪ್ರಚೋದಿತ ದಾಳಿಗೆ ಮಹಿಳೆ ಬಲಿ
Team Udayavani, Mar 1, 2019, 12:30 AM IST
ಒಂದು ಕಡೆ ಶಾಂತಿ ಮಂತ್ರ ಪಠಿಸುತ್ತಲೇ, ಮತ್ತೂಂದು ಕಡೆಯಿಂದ ಪಾಕಿಸ್ಥಾನವು ಹೇಡಿಯಂತೆ ಅಪ್ರಚೋದಿತ ದಾಳಿ ನಡೆಸುವುದನ್ನು ಮುಂದುವರಿಸಿದೆ.
ಗುರುವಾರ ಜಮ್ಮು ಮತ್ತು ಕಾಶ್ಮೀರದ ಪೂಂಛ್ ಮತ್ತು ರಜೌರಿ ಜಿಲ್ಲೆಯಲ್ಲಿ ಬರುವ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಸುಮಾರು 6 ವಲಯಗಳ ಮೇಲೆ ಪಾಕಿಸ್ಥಾನವು ಗುಂಡಿನ ದಾಳಿ ನಡೆಸಿದೆ. ನಾಗರಿಕ ಪ್ರದೇಶಗಳು ಮತ್ತು ಮುಂಚೂಣಿ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರೀ ಪ್ರಮಾಣದಲ್ಲಿ ದಾಳಿ ನಡೆಸಲಾಗಿದೆ. ಪರಿಣಾಮ ಗಡಿ ಗ್ರಾಮದ ಮಹಿಳೆಯೊಬ್ಬರು ಮೃತಪಟ್ಟು, ಯೋಧರೊಬ್ಬರು ಗಾಯಗೊಂಡಿದ್ದಾರೆ.
ಪಾಕಿಸ್ಥಾನದ ದಾಳಿಗೆ ಭಾರತೀಯ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಪಾಕ್ ಸೇನೆಯು ಸುಂದರ್ಬನಿ, ಮಾನ್ಕೋಟ್, ಖಾರಿ ಖರ್ಮಾರಾ, ದೇಗ್ವಾರ್ ವಲಯಗಳಲ್ಲಿ ಕದನ ವಿರಾಮ ಉಲ್ಲಂಘಿ ಸಿದೆ. ಬೆಳಗ್ಗೆ 6ರಿಂದಲೇ ನಿರಂತರ ದಾಳಿ ನಡೆಯುತ್ತಿದೆ ಎಂದು ವಕ್ತಾರರು ಹೇಳಿದ್ದಾರೆ.
ಶಾಲೆಗಳಿಗೆ ರಜೆ: ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಗಡಿ ಗ್ರಾಮಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಎಲ್ಒಸಿಯಿಂದ 5 ಕಿ.ಮೀ. ವ್ಯಾಪ್ತಿಯೊಳಗೆ ಬರುವ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಗ್ರಾಮಸ್ಥರಿಗೆ ಮನೆಗಳಿಂದ ಹೊರಬರದಂತೆ ಆದೇಶಿಸಲಾಗಿದೆ. ಇದೇ ವೇಳೆ, ನಿರಂತರವಾಗಿ ಕೇಳಿಬರುತ್ತಿರುವ ಶೆಲ್ ದಾಳಿಯ ಸದ್ದು ಗಡಿ ಗ್ರಾಮಸ್ಥರನ್ನು ಆತಂಕಕ್ಕೀಡುಮಾಡಿದ್ದು, ಎಲ್ಲರೂ ಭೀತಿಯಿಂದಲೇ ದಿನ ದೂಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ