![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಮುಂಬಯಿ: Rape ಪ್ರತಿಭಟನೆ ಮೆರವಣಿಗೆಯಲ್ಲೇ ಲೈಂಗಿಕ ಕಿರುಕುಳ; arrest
Team Udayavani, Apr 16, 2018, 12:08 PM IST
![Mumbai-rape-march-700.jpg](https://www.udayavani.com/wp-content/uploads/2018/04/16/Mumbai-rape-march-700-620x348.jpg)
ಮುಂಬಯಿ : ಉನ್ನಾವೋ ಮತ್ತು ಕಥುವಾ ರೇಪ್ ಪ್ರಕರಣಗಳನ್ನು ವಿರೋಧಿಸಿ ಮುಂಬಯಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದ ವೇಳೆ ಕಾಮುಕನೊಬ್ಬ ಮಹಿಳೆಯೊಬ್ಬರನ್ನು ಅಟ್ಟಾಡಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮುಂಬಯಿಯ ಕಾರ್ಟರ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಕಾಮುಕನು ಮಹಿಳೆಯನ್ನು ದುರುಗುಟ್ಟಿ ಅಶ್ಲೀಲ ಸಂಜ್ಞೆಗಳನ್ನು ಮಾಡಿದ್ದಲ್ಲದೆ ಆಕೆಯನ್ನು ಬೆನ್ನಟ್ಟಿ ಲೈಂಗಿಕ ಕಿರುಕುಳ ನೀಡಿದಾಗ ಮಹಿಳೆಯು ಆತನಿಂದ ಅದೃಷ್ಟವಶಾತ್ ತಪ್ಪಿಸಿಕೊಂಡು ಪಾರಾಗುವಲ್ಲಿ ಯಶಸ್ವಿಯಾದಳು ಎಂದು ವರದಿಗಳು ತಿಳಿಸಿವೆ.
ಪೊಲೀಸರಿಂದ ಬಂಧಿತನಾಗಿರುವ ಆರೋಪಿ ಕಾಮುಕನನ್ನು ರಾಜು ಜಾಧವ್ ಎಂದು ಗುರುತಿಸಲಾಗಿದ್ದು ಈತನು ಕೂಲಿ ಕಾರ್ಮಿಕನಾಗಿ ದುಡಿಯುತ್ತಿರುವ ವ್ಯಕ್ತಿ ಎಂದು ತನಿಖೆಯಿಂದ ಗೊತ್ತಾಗಿದೆ.
ಮುಂಬಯಿಯ ಬಾಂದ್ರಾ ಮತ್ತು ಜುಹುವಿನಲ್ಲಿ ನಿನ್ನೆ ಭಾನುವಾರ ಜಮ್ಮು ಕಾಶ್ಮೀರದ ಕಥವಾ ರೇಪ್ ಆ್ಯಂಡ್ ಮರ್ಡರ್ ಮತ್ತು ಉನ್ನಾವೋ ಗ್ಯಾಂಗ್ ರೇಪ್ ಪ್ರಕರಣಗಳನ್ನು ವಿರೋಧಿಸಿ ಭಾರೀ ದೊಡ್ಡ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಗಿತ್ತು. ಬಾಂದ್ರಾದಲ್ಲಿನ ಪ್ರತಿಭಟನಾ ಮೆರವಣಿಗೆಯನ್ನು ಆಮ್ ಆದ್ಮಿ ಪಕ್ಷ ಸಂಯೋಜಿಸಿತ್ತಾದರರೆ ಜುಹು ಬೀಚ್ನಲ್ಲಿನ ಕ್ಯಾಂಡಲ್ ಲೈಟ್ ಜಾಥಾವನ್ನು ಕಾಂಗ್ರೆಸ್ ಪಕ್ಷ ಸಂಘಟಿಸಿತ್ತು.
ಎರಡು ದಿನಗಳ ಹಿಂದಷ್ಟೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ದಿಲ್ಲಿಯಲ್ಲಿ ಕಥುವಾ – ಉನ್ನಾವೋ ಪ್ರಕರಣಗಳ ವಿರುದ್ಧ ಮಧ್ಯರಾತ್ರಿಯ ಕ್ಯಾಂಡಲ್ ಲೈಟ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದ ಸಂದರ್ಭದಲ್ಲಿ ರಾಹುಲ್ ಸಹೋದರಿ ಪ್ರಿಯಾಂಕಾ ವಾದ್ರಾ ವಿರುದ್ಧ ತಳ್ಳಾಟ ನಡೆದಿತ್ತು.
ಕಿಕ್ಕಿರಿದ ಜನಸಮೂಹದಲ್ಲಿ ಲೈಂಗಿಕ ಉದ್ದೇಶದಿಂದ ಮಹಿಳೆಯರನ್ನು ತಳ್ಳಾಡುವ ಧೂರ್ತರು ಎಲ್ಲೆಡೆ ಸಾಮಾನ್ಯವಾಗಿ ದುಷ್ಕೃತ್ಯದಲ್ಲಿ ತೊಡಗಿರುತ್ತಾರೆ. ಮಹಿಳೆಯರ ಮೇಲಿನ ದೌರ್ಜನ್ಯ, ರೇಪ್ ವಿರೋಧಿಸಿ ನಡೆಸುವ ಪ್ರತಿಭಟನೆಯಲ್ಲೇ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ನಡೆಯುವುದು ವಿಪರ್ಯಾಸದ ಸತ್ಯಸಂಗತಿಯಾಗಿರುವುದು ದುರದೃಷ್ಟಕರ ಎಂದು ಜನರು ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.