ಸೋಂಕು ತಾಗಿ ಆಸ್ಪತ್ರೆ ಸೇರಿದ್ದ ಪತಿಗೆ ಪತ್ನಿಯಿಂದ ಮದ್ಯ ಸಪ್ಲೈ!: ಆಸ್ಪತ್ರೆಯಲ್ಲಿ ರಂಪಾಟ
Team Udayavani, Aug 17, 2020, 2:34 PM IST
ಚೆನ್ನೈ: ಕೋವಿಡ್-19 ಸೋಂಕು ಪೀಡಿತನಾಗಿ ಆಸ್ಪತ್ರೆಗೆ ದಾಖಲಾಗಿರುವ ಪತಿಗೆ ಕದ್ದುಮುಚ್ಚಿ ಮದ್ಯ ಸರಬರಾಜು ಮಾಡಿದ್ದ ಮಹಿಳೆಯೊಬ್ಬರು ಸಿಕ್ಕಿಬಿದ್ದಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ಇತ್ತೀಚೆಗೆ ನಡೆದಿದೆ.
ತಮಿಳುನಾಡಿನ ಕುದ್ದಲೂರಿನ ರಾಜಾ ಮುತ್ತಯ್ಯ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ಇತ್ತೀಚೆಗೆ ನಡೆದಿದೆ. ಕುಡಿದ ಮತ್ತಿನಲ್ಲಿ ಪತಿ ಆಸ್ಪತ್ರೆಯಲ್ಲಿ ಗಲಾಟೆ ನಡೆಸಿದ್ದರಿಂದ ಮದ್ಯದ ವಿಷಯ ಬೆಳಕಿಗೆ ಬಂದಿದೆ.
ಟಿ. ಮುತ್ತು ಕುಮಾರ್ (48) ಎಂಬಾತ ವಾರದ ಹಿಂದೆ ಕೋವಿಡ್ ಸೋಂಕು ದೃಢವಾಗಿ ಆಸ್ಪತ್ರೆ ಸೇರಿದ್ದ. ಆತನ ಪತ್ನಿ ಎಂ. ಕಲೈಮಂಗೈ ಆಸ್ಪತ್ರೆಗೆ ಊಟದ ಬ್ಯಾಹ್ ತಂದು ಕೊಟ್ಟಿದ್ದಳು. ಆದರೆ ಊಟದ ಮಾಡಿದ ನಂತರ ಈತ ಮದ್ಯದ ಅಮಲಿನಲ್ಲಿ ಆಸ್ಪತ್ರೆಯಲ್ಲಿ ರಂಪಾಟ ನಡೆಸಿದ್ದ.
ಇದನ್ನೂ ಓದಿ: ವಾಟ್ಸಾಪ್ ಮೂಲಕ ಗಲಭೆಗೆ ಜನ ಸೇರಿಸಿದ್ದ ಟಿಪ್ಪು ಟೈಗರ್ ಅಲ್ಫತ್ ಟ್ರಸ್ಟ್ ಅಧ್ಯಕ್ಷನ ಬಂಧನ
ಚಿದಂಬರಂ ಅಣ್ಣಾಮಲೈ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಮುತ್ತುಕುಮಾರನ್ ಮತ್ತು ಪತ್ನಿ ವಿರುದ್ಧ ಐಪಿಸಿ ಸೆಕ್ಷನ್ 269(ಸೋಂಕು ಹರಡುವ ಕುರಿತು ನಿರ್ಲಕ್ಷ್ಯ), 271(ಕ್ವಾರಂಟೈನ್ ನಿಯಮ ಉಲ್ಲಂಘನೆ) ಹಾಗೂ 294ಬಿ(ಅಸಭ್ಯ ವರ್ತನೆ) ಅಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಕುರಿತು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್