ದಿಲ್ಲಿ ಮೊದಲ ಕೊರೊನಾ ರೋಗಿ 14 ದಿನಗಳ ಚಿಕಿತ್ಸೆ ನಂತರ ಗುಣಮುಖ…ಕುತೂಹಲದ ಪ್ರಶ್ನೆಗೆ ಉತ್ತರ!

ಸಫ್ದರ್ ಜಂಗ್ ಆಸ್ಪತ್ರೆಯಿಂದ ಮನೆಗೆ ತೆರಳಿದ್ದು ಕೊರೊನಾ ಬಗ್ಗೆ, ಅದರ ಚಿಕಿತ್ಸೆ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Team Udayavani, Mar 16, 2020, 1:29 PM IST

ದಿಲ್ಲಿ ಮೊದಲ ಕೊರೊನಾ ರೋಗಿ 14 ದಿನಗಳ ಚಿಕಿತ್ಸೆ ನಂತರ ಗುಣಮುಖ…ಕುತೂಹಲದ ಪ್ರಶ್ನೆಗೆ ಉತ್ತರ

Representative Image

ನವದೆಹಲಿ: ಕೊರೊನಾ ವೈರಸ್ ಗೆ ಜಗತ್ತೇ ಬೆಚ್ಚಿ ಬಿದ್ದಿದೆ. ಸಾವಿನ ಹಾಗೂ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಏತನ್ಮಧ್ಯೆ ಕೊರೊನಾ ವೈರಸ್ ಗೆ ತುತ್ತಾಗಿದ್ದ ದೆಹಲಿಯ ರೋಗಿ ಇದೀಗ 14 ದಿನಗಳ ಚಿಕಿತ್ಸೆ ನಂತರ ಗುಣಮುಖರಾಗಿದ್ದು ಶನಿವಾರ ಸಂಜೆ ದಿಲ್ಲಿಯ ಸಫ್ದರ್ ಜಂಗ್ ಆಸ್ಪತ್ರೆಯಿಂದ ಮನೆಗೆ ತೆರಳಿದ್ದು ಕೊರೊನಾ ಬಗ್ಗೆ, ಅದರ ಚಿಕಿತ್ಸೆ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಪೂರ್ವ ದೆಹಲಿಯ 45 ವರ್ಷದ ಈ ವ್ಯಕ್ತಿ ಇಟಲಿಯಲ್ಲಿ ನಡೆದ ರಫ್ತು ಮೇಳದಲ್ಲಿ ಭಾಗವಹಿಸಿದ್ದು ನಂತರ ಮಿಲಾನ್, ಬುಡಾಪೆಸ್ಟ್ ಹಾಗೂ ವಿಯೆನ್ನಾಕ್ಕೆ ತನ್ನಿಬ್ಬರು ಸಹೋದರ ಜತೆ ಭೇಟಿ ನೀಡಿದ್ದರು. ಭಾರತಕ್ಕೆ ಆಗಮಿಸಿದ ವೇಳೆ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್ ಎಂಬ ವರದಿ ಬಂದಿತ್ತು.

14 ದಿನಗಳ ನಂತರ ಕುಟುಂಬದ ಸದಸ್ಯರ ಭೇಟಿ!

14 ದಿನಗಳ ಚಿಕಿತ್ಸೆ ನಂತರ ಈ ವ್ಯಕ್ತಿ ಮನೆಗೆ ಭೇಟಿ ನೀಡಿದ್ದರು. ಕೊರೊನಾ ಪಾಸಿಟಿವ್ ಎಂದು ವರದಿ ಬಂದು ಮಗ ಆಸ್ಪತ್ರೆಗೆ ಹೊರಟ ವೇಳೆ 65ವರ್ಷದ ತಾಯಿ ಕಣ್ಣೀರು ಹಾಕಿದ್ದರು. ಇಂದು ನನಗೆ ಭಾವನಾತ್ಮಕ, ಸಂತಸದ ದಿನವಾಗಿದೆ. ನಾನು ಎಲ್ಲರನ್ನೂ ಭೇಟಿಯಾಗಿದ್ದೇನೆ. ಇಡೀ ಕುಟುಂಬವೇ ನನಗಾಗಿ ಕಾಯುತ್ತಿತ್ತು ಎಂದು ದ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಭಾನುವಾರ ಗೆಳೆಯರು, ಆಪ್ತರು ಸೇರಿದಂತೆ ಬಿಡುವಿಲ್ಲದಷ್ಟು ಮೊಬೈಲ್ ಕರೆಗಳನ್ನು ಸ್ವೀಕರಿಸಿದ್ದಾರಂತೆ..ಎಲ್ಲರೂ ರೋಗ ಲಕ್ಷಣ, ವೈದ್ಯಕೀಯ ಸೇವೆ ಹಾಗೂ ಪರೀಕ್ಷೆಗಳ ಕುರಿತು ಪ್ರಶ್ನೆಗಳ ಸುರಿಮಳೆಗೆರೆದಿದ್ದರು ಎಂದು ವರದಿ ವಿವರಿಸಿದೆ.

ಕೊರೊನಾ ಕುರಿತು ಕುತೂಹಲದ ಪ್ರಶ್ನೆಗಳು!

ಆಪ್ತ ಗೆಳೆಯನೊಬ್ಬ ಮಾಡಿರುವ ಕರೆ ಬಗ್ಗೆ ಮೆಲುಕು ಹಾಕಿರುವ ದೆಹಲಿ ವ್ಯಕ್ತಿ, ಒಂದು ವೇಳೆ ಕೊರೊನಾ ವೈರಸ್ ಪತ್ತೆ ಹಚ್ಚಲು ನಡೆಸುವ ಪರೀಕ್ಷೆ ನೋವು ತರುತ್ತದೆಯಾ ಎಂದು ಪ್ರಶ್ನಿಸಿದ್ದರಂತೆ. ನಾನು ಪರೀಕ್ಷೆ ನಡೆಸುವ ವಿಧಾನ ಮತ್ತು ಮುನ್ನೆಚ್ಚರಿಕೆ ಬಗ್ಗೆ ವಿವರಿಸಿದ್ದೆ. ಇದರಿಂದಾಗಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಹೊರಡುವಾಗ ನನ್ನ ಮನಸ್ಸಿನಲ್ಲಿ ಇದ್ದಿದ್ದು ಕೊರೊನಾ ಬಗ್ಗೆ ಅರಿವು ಮೂಡಿಸುವುದು. ಅಷ್ಟೇ ಅಲ್ಲ ಭಾರತದಲ್ಲಿ ಅತ್ಯುತ್ತಮ ವ್ಯವಸ್ಥೆಯ ಚಿಕಿತ್ಸೆಯ ಸೌಲಭ್ಯ ನನಗೆ ದೊರಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಐಸೋಲೇಶನ್ ವಾರ್ಡ್ ಭಯ ಬೇಡ:

ಈ ವ್ಯಕ್ತಿ ಐಸೋಲೇಶನ್ (ಪ್ರತ್ಯೇಕ) ವಾರ್ಡ್ ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆ ನಿಟ್ಟಿನಲ್ಲಿ ಪ್ರತ್ಯೇಕ ಕೊಠಡಿ ಬಗ್ಗೆ ಹಬ್ಬಿರುವ ಆತಂಕದ ಬಗ್ಗೆಯೂ ಮಾತನಾಡಿದ್ದಾರೆ. ಜನರು ಐಸೋಲೇಶನ್ ವಾರ್ಡ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ರೋಗಿಗಳಿಗಾಗಿ ಪ್ರತ್ಯೇಕವಾಗಿರಿಸುವ ಈ ಕೋಣೆ ಸಿಂಗಲ್ ಬೆಡ್ ರೂಂ ರೀತಿ ಇರಲಿದೆ. ಇಲ್ಲಿ ಉತ್ತಮ ಗುಣಮಟ್ಟದ ಗೈಡ್ ಲೈನ್ಸ್ ಪ್ರಕಾರ ಇರಿಸಲಾಗುತ್ತದೆ. ಒಂದು ವೇಳೆ ನಿಮಗೆ ವೈದ್ಯಕೀಯ ಸಹಾಯದಿಂದಲೇ ವೈರಸ್ ಗುಣಮುಖವಾಗಬೇಕು ಅಂತ ಇದ್ದಾಗ ಐಸೋಲೇಶನ್ ವಾರ್ಡ್ ಮುಖ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.