ಭದ್ರತಾ ವಿಚಾರದಲ್ಲಿ ಬೇಧ ಸಲ್ಲದು: ಸಚಿವ ಎಸ್.ಜೈಶಂಕರ್
Team Udayavani, Mar 26, 2023, 6:50 AM IST
ನವದೆಹಲಿ: ಲಂಡನ್ನಲ್ಲಿ ಇರುವ ಭಾರತದ ಹೈಮಿಕಷನ್ ಕಚೇರಿ ಮೇಲೆ ಖಲಿಸ್ತಾನಿ ಬೆಂಬಲಿಗರ ದಾಳಿ ವೇಳೆ ಯು.ಕೆ. ಸರ್ಕಾರ ಸೂಕ್ತ ಭದ್ರತೆ ನೀಡಿಲ್ಲ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಆರೋಪಿಸಿದ್ದಾರೆ.
ಈ ವಿಚಾರದಲ್ಲಿ ಆ ದೇಶದ ಸರ್ಕಾರ ಕೈ ಕಟ್ಟಿ ಕುಳಿತಿದೆ. ಜತೆಗೆ ಭದ್ರತೆ ವಿಚಾರದಲ್ಲಿ ಪಕ್ಷಪಾತ ಧೋರಣೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಇಂಥ ಮನಸ್ಥಿತಿಯನ್ನು ಒಪ್ಪಿಕೊಳ್ಳುವುದು ಅಸಾಧ್ಯ. ಇತರ ದೇಶಗಳ ರಾಯಭಾರ ಅಥವಾ ಹೈಕಮಿಷನ್ ಕಚೇರಿಗಳಿಗೆ ಭದ್ರತೆ ನೀಡುವ ಅಂಶವನ್ನು ಆಯಾ ದೇಶದ ಸರ್ಕಾರಗಳೇ ಖಾತರಿಪಡಿಸಬೇಕು ಎಂದರು. ಭದ್ರತೆಯಲ್ಲಿ ನಮ್ಮ ದೇಶದವರಿಗೆ ಮೊದಲ ಆದ್ಯತೆ, ನಂತರ ಬೇರೆ ದೇಶದ ರಾಯಭಾರಿಗಳಿಗೆ ಎನ್ನುವಂಥ ಮನಸ್ಥಿತಿ ಇರ ಕೂಡದು. ಈ ನಿಟ್ಟಿನಲ್ಲಿ ಯು.ಕೆ. ಸರ್ಕಾರದ ಜತೆಗೆ ಮಾತುಕತೆ ನಡೆಸಲಾಗುತ್ತಿದೆ ಎಂದರು
ಇದೇ ವೇಳೆ, ಅಮೆರಿಕದ ಸ್ಯಾನ್ಫ್ರಾನ್ಸಿಸ್ಕೋದಲ್ಲಿನ ಭಾರತದ ದೂತಾವಾಸ ಕಚೇರಿ ಮೇಲೆ ಖಲಿಸ್ತಾನಿಗಳು ದಾಳಿ ಖಂಡಿಸಿ ಭಾರತೀಯ ಅಮೆರಿಕನ್ ಸಮುದಾಯದವರು ಮೆರವಣಿಗೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ