ಜ್ಯುವೆಲ್ಲರಿ ಅಂಗಡಿ ಮುಂಭಾಗ 20 ಗಂಟೆ ಲೇಖಕಿ ಪ್ರತಿಭಟನೆ: ಕೊನೆಗೂ ಕ್ಷಮೆ ಕೇಳಿದ ಮಾಲೀಕ!
ಸಂಜೆಯಿಂದ ಜ್ಯುವೆಲ್ಲರಿ ಶಾಪ್ ನ ಹೊರಭಾಗದ ಫೂಟ್ ಪಾತ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದರು.
Team Udayavani, Oct 9, 2020, 4:52 PM IST
ಮುಂಬೈ: ಮರಾಠಿ ಲೇಖಕಿ ಶೋಭಾ ದೇಶ್ ಪಾಂಡೆ ಅವರು ಮುಂಬೈನ ಜ್ಯುವೆಲ್ಲರಿ ಅಂಗಡಿ ಮುಂಭಾಗದಲ್ಲಿ ಸುಮಾರು 20 ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ್ದ ಘಟನೆ ನಡೆದಿತ್ತು. ಇದಕ್ಕೆ ಕಾರಣ ಜ್ಯುವೆಲ್ಲರಿ ಶಾಪ್ ಮಾಲೀಕ ಮರಾಠಿಯಲ್ಲಿ ಮಾತನಾಡುವುದಕ್ಕೆ ನಿರಾಕರಿಸಿದ್ದು!
ಶೋಭಾ ದೇಶ್ ಪಾಂಡೆ ಕಿವಿಯೋಲೆ ಖರೀದಿಸಲು ಚಿನ್ನದ ಅಂಗಡಿಗೆ ಭೇಟಿ ನೀಡಿದ್ದರು. ಆದರೆ ಈ ವೇಳೆ ಮಾಲೀಕ ಹಿಂದಿಯಲ್ಲಿ ಮಾತನಾಡಿದ್ದರು. ಏತನ್ಮಧ್ಯೆ ಮರಾಠಿಯಲ್ಲಿ ಮಾತನಾಡುವಂತೆ ಶೋಭಾ ತಾಕೀತು ಮಾಡಿದಾಗ ಶಾಪ್ ನಿಂದ ಹೊರನಡೆಯುವಂತೆ ಸೂಚಿಸಿದ್ದು ಜಟಾಪಟಿಗೆ ಕಾರಣವಾಗಿರುವುದಾಗಿ ವರದಿ ತಿಳಿಸಿದೆ.
ಇದರಿಂದ ಆಕ್ರೋಶಗೊಂಡ ಶೋಭಾ ದೇಶ್ ಪಾಂಡೆ ಗುರುವಾರ ಸಂಜೆಯಿಂದ ಜ್ಯುವೆಲ್ಲರಿ ಶಾಪ್ ನ ಹೊರಭಾಗದ ಫೂಟ್ ಪಾತ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದರು. ನಂತರ ಶುಕ್ರವಾರ ಜ್ಯುವೆಲ್ಲರ್ ಶಾಪ್ ಮಾಲೀಕ ಶಂಕರ್ ಲಾಲ್ ಜೈನ್ ಶೋಭಾ ದೇಶ್ ಪಾಂಡೆ ಜತೆ ಕ್ಷಮೆಯಾಚಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ: ಮಂಗಳೂರು: ಹೆಬ್ಬಾವು ಕಚ್ಚಿದರೂ ಅಳುಕದೆ ಅದರ ತಲೆಮೇಲೆ ಕಾಲಿಟ್ಟು ಸೆರೆಹಿಡಿದ 10ರ ಪೋರ !
ಶೋಭಾ ದೇಶಪಾಂಡೆ ಪ್ರತಿಭಟನೆಗೆ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ್ ಸೇನಾ(ಎಂಎನ್ ಎಸ್) ಬೆಂಬಲ ಸೂಚಿಸಿತ್ತು. ಅಷ್ಟೇ ಅಲ್ಲ ಕ್ಷಮೆ ಕೇಳದಿದ್ದರೆ ಶಂಕರ್ ಲಾಲ್ ಜೈನ್ ಮರಾಠಿ ಕಲಿಯುವವರೆಗೂ ಜ್ಯುವೆಲ್ಲರಿ ಅಂಗಡಿ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು