ದಾಳಿ ಸಾಧ್ಯತೆ; ಕೇರಳದ ಐವರು ಆರ್ ಎಸ್ಎಸ್ ನಾಯಕರಿಗೆ ‘ವೈ’ ಕೆಟಗರಿ ಭದ್ರತೆ
Team Udayavani, Oct 1, 2022, 10:33 AM IST
ಮುಂಬೈ: ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಿಂದ (ಪಿಎಫ್ಐ) ಸಂಭವನೀಯ ಬೆದರಿಕೆಯ ಕುರಿತು ಕೇಂದ್ರ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ ನಂತರ ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ಎ) ಶನಿವಾರ ಕೇರಳದ ಐವರು ಆರ್ಎಸ್ಎಸ್ ನಾಯಕರಿಗೆ “ವೈ” ವರ್ಗದ ಭದ್ರತೆಯನ್ನು ನೀಡಿದೆ.
ಕೇಂದ್ರ ಸರ್ಕಾರವು ಪಿಎಫ್ಐ ಸಂಘಟನೆಯನ್ನು ಐದು ವರ್ಷಗಳ ಕಾಲ ಬ್ಯಾನ್ ಮಾಡಿದ ಬಳಿಕ ಕೇರಳದ ಆರ್ ಎಸ್ಎಸ್ ನಾಯಕರ ಮೇಲೆ ಸಂಭವನೀಯ ದಾಳಿಯ ಕುರಿತು ಗೃಹ ಸಚಿವಾಲಯಕ್ಕೆ ಎನ್ಐಎ ಮಾಹಿತಿ ನೀಡಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ಎನ್ಐಎ ಮತ್ತು ಗುಪ್ತಚರ ಇಲಾಖೆ ನೀಡಿದ ಮಾಹಿತಿಯನ್ನು ಆಧರಿಸಿ ಗೃಹ ಸಚಿವಾಲಯವು ಕೇರಳದ ಐದು ಆರ್ ಎಸ್ಎಸ್ ನಾಯಕರಿಗೆ ವೈ ಕೆಟಗರಿ ಭದ್ರತೆ ನೀಡಲು ನಿರ್ಧರಿಸಿದೆ. ಆರ್ಎಸ್ಎಸ್ ನಾಯಕರ ಭದ್ರತೆಗೆ ಅರೆಸೇನಾ ಪಡೆಗಳ ಕಮಾಂಡೋಗಳನ್ನು ನಿಯೋಜಿಸಲಾಗುವುದು. ಭದ್ರತೆಯನ್ನು ಒದಗಿಸಲು ಒಟ್ಟು 11 ಸಿಬ್ಬಂದಿಗಳು ಪಾಳಿಗಳಲ್ಲಿ ಕೆಲಸ ಮಾಡುತ್ತಾರೆ.
ಇದನ್ನೂ ಓದಿ:ರ್ಯಾಲಿಗೆ ತೆರಳಿಯೂ ಭಾಷಣ ಮಾಡದ ಪ್ರಧಾನಿ ಮೋದಿ; ಜನರ ಬಳಿ ಕ್ಷಮೆ ಕೇಳಿದ್ದೇಕೆ?
ಎನ್ ಐಎ ತನ್ನ ದಾಳಿಯ ಸಮಯದಲ್ಲಿ ಕೇರಳದ ಪಿಎಫ್ ಐ ಸದಸ್ಯ ಮೊಹಮ್ಮದ್ ಬಶೀರ್ ಅವರ ಮನೆಯಿಂದ ಪಿಎಫ್ ಐ ರಾಡಾರ್ ನಲ್ಲಿ ಐವರು ಆರ್ ಎಸ್ಎಸ್ ಮುಖಂಡರ ಹೆಸರನ್ನು ಹೊಂದಿರುವ ಪಟ್ಟಿಯನ್ನು ಪತ್ತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ