ಹೌದು, ಶಶಿಕಲಾ ಕೈಲಿದೆ ರಿಮೋಟ್‌!


Team Udayavani, Aug 24, 2017, 6:40 AM IST

Yes,-Sasikala.jpg

ಪುದುಚೇರಿ: ತಮಿಳುನಾಡಿನ ಸಿಎಂ ಪಳನಿಸ್ವಾಮಿ ಸರಕಾರದ ಪರಿಸ್ಥಿತಿ ಇದೀಗ ಡೋಲಾಯಮಾನವಾಗಿದ್ದು, ಬಂಡಾಯ ಎದ್ದ ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್‌ ಬಣ ಶಾಸಕರ ರೆಸಾರ್ಟ್‌ ವಾಸ ಮುಂದುವರಿದಿದೆ.

“ಪಳನಿಸ್ವಾಮಿ ಅವರು ಕೂಡಲೇ ಹುದ್ದೆಗೆ ರಾಜೀನಾಮೆ ನೀಡಬೇಕು. ನಮ್ಮ ಬಣದ ಕುರಿತ ಮುಂದಿನ ತೀರ್ಮಾನದ ರಿಮೋಟ್‌, ಜೈಲು ಸೇರಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಮತ್ತು ದಿನಕರನ್‌ ಅವರ ಕೈಲಿದೆ’ ಎಂದು ಶಾಸಕರು ಬಹಿರಂಗವಾಗಿ ಹೇಳಿದ್ದಾರೆ.  

ಪುದುಚೇರಿಯ ವಿಂಡ್‌ಪ್ಲೋರ್‌ ರೆಸಾರ್ಟ್‌ ಸ್ಪಾದಲ್ಲಿ ದಿನಕರನ್‌ ಬಣದ 19 ಶಾಸಕರು ಬೀಡುಬಿಟ್ಟಿದ್ದು, ನಂಬರ್‌ ಗೇಮ್‌ ಆರಂಭಗೊಂಡಿದೆ. ಬಹುಮತಕ್ಕೆ ಬೇಕಾಗಿರುವ 117 ಶಾಸಕರ ಬೆಂಬಲಕ್ಕಾಗಿ ಪಳನಿಸ್ವಾಮಿ ಅವರೂ ಶತಾಯಗತಾಯ ಯತ್ನ ನಡೆಸುತ್ತಿದ್ದಾರೆ.

ಪಳನಿಸ್ವಾಮಿ ಅವರು ಪಕ್ಷದವರೊಂದಿಗೆ ಸಹಕರಿಸುತ್ತಿಲ್ಲ. ಆದ್ದರಿಂದ ಅವರನ್ನು ಕೂಡಲೇ ಬದಲಾಯಿಸಬೇಕಾಗಿದೆ ಎಂದು ಎಐಎಡಿಎಂಕೆ ವಕ್ತಾರೆ ಸಿ.ಆರ್‌.ಸರಸ್ವತಿ ಹೇಳಿದ್ದಾರೆ. ದಿನಕರನ್‌ ಬೆಂಬಲಿತ ಶಾಸಕರು, ಪನ್ನೀರ್‌ಸೆಲ್ವಂ, ಪಳನಿಸ್ವಾಮಿ ಬಣ ವಿಲೀನ ಅಕ್ರಮ ಎಂದಿದ್ದು, ಶಶಿಕಲಾ ಉಚ್ಛಾಟನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಪಕ್ಷದ ಹುದ್ದೆಯಿಂದ 4 ಸಚಿವರಿಗೆ ಕೊಕ್‌
ಇದೇ ವೇಳೆ ದಿನಕರನ್‌ ಅವರು ಪಕ್ಷದ ಹುದ್ದೆಯಿಂದ ನಾಲ್ವರು ಸಚಿವರನ್ನು ವಜಾಗೊಳಿಸಿದ್ದಾರೆ. ಅವರ ಬದಲಿಗೆ ತಮ್ಮ ನಿಷ್ಠರಾದ ಶಾಸಕರನ್ನು ಹುದ್ದೆಗಳಿಗೆ ಮರುನೇಮಕ ಮಾಡಿದ್ದಾರೆ. ಈ ಬಗ್ಗೆ ಪ್ರತ್ಯೇಕ ಪ್ರಕಟಣೆ ಹೊರಡಿಸಲಾಗಿದ್ದು ಶಶಿಕಲಾ ಮತ್ತು ದಿನಕರನ್‌ ಒಪ್ಪಿಗೆ ಮೇರೆಗೆ ಮಾಡಲಾಗಿದೆ ಎನ್ನಲಾಗಿದೆ.  

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.