ಸರ್ಕಾರಿ ನೌಕರರಿಗೆ ಸಿಗಲಿದೆ ವಿರಾಮ: ಕಚೇರಿಯಲ್ಲಿ 5 ನಿಮಿಷ ಯೋಗ ಬ್ರೇಕ್‌!


Team Udayavani, Sep 5, 2021, 8:48 AM IST

yoga break in govt office

ನವದೆಹಲಿ: ಊಟದ ಸಮಯವಾಗುತ್ತಲೇ ಕಚೇರಿಯಲ್ಲಿ “ಲಂಚ್‌ ಬ್ರೇಕ್‌’ ಇರುವುದು ನೋಡಿದ್ದೀರಿ. ಇನ್ನು ಮುಂದೆ ಇದೇ ರೀತಿ 5 ನಿಮಿಷಗಳ “ಯೋಗ ಬ್ರೇಕ್‌’ ಕೂಡ ಸಿಗಲಿದೆ! ಆ ಐದು ನಿಮಿಷಗಳಲ್ಲಿ ಸರಳ ಯೋಗಾಸನ ಮಾಡುವ ಮೂಲಕ ರಿಲ್ಯಾಕ್ಸ್‌ ಆಗಬಹುದು.

ಕೇಂದ್ರ ಸರ್ಕಾರವೇ ಇಂಥದ್ದೊಂದು ಆದೇಶ ಹೊರಡಿಸಿದೆ. ಅದರಂತೆ, ಇನ್ನು ಮುಂದೆ ಎಲ್ಲ ಸರ್ಕಾರಿ ನೌಕರರಿಗೂ ಕೆಲಸದ ಮಧ್ಯೆ 5 ನಿಮಿಷಗಳ ಯೋಗ ಬ್ರೇಕ್‌ ತೆಗೆದುಕೊಳ್ಳಲು ಅವಕಾಶಕಲ್ಪಿಸಲಾಗಿದೆ. ಕೇಂದ್ರ ಆಯುಷ್‌ ಸಚಿವಾಲಯ ಅಭಿವೃದ್ಧಿಪಡಿಸಿರುವ ‘Y break’ (ವೈ-ಬ್ರೇಕ್‌) ಎಂಬ ಆ್ಯಪ್‌ ಡೌನ್‌ ಲೋಡ್‌ ಮಾಡಿಕೊಂಡರೆಸಾಕು. ಕೆಲಸದ ಸಮಯದಲ್ಲಿ 5 ನಿಮಿಷ ವಿರಾಮ ಪಡೆದುಕೊಂಡು, ಈ ಆ್ಯಪ್‌ ನಲ್ಲಿರುವ ಸರಳ ಯೋಗಾಸನಗಳನ್ನು ಮಾಡಿ, ವಾಪಸಾದರೆ ಆಯ್ತು.

ಉದ್ಯೋಗಿಗಳಿಗೆ ಕಚೇರಿಯಲ್ಲಿ ಕೂತಲ್ಲೇ ಕೂತು ಕುತ್ತಿಗೆ, ಬೆನ್ನು ನೋವು ಶುರುವಾಗುವುದು, ಏಕಾಗ್ರತೆ, ದಕ್ಷತೆ ಕಡಿಮೆಯಾಗುವುದು ಸಾಮಾನ್ಯ. ಅಂಥವರಿಗೆ ಇದು ನೆರವಾಗಲಿದೆ. ಸ್ವಲ್ಪ ಹೊತ್ತು ಯೋಗಾಸನದಲ್ಲಿ ನಿರತರಾದರೆ ಮಾನಸಿಕ ಒತ್ತಡ ಕಡಿಮೆಯಾಗುವುದಲ್ಲದೇ, ಉಲ್ಲಾಸದಿಂದ ಕೆಲಸ ಮಾಡಲೂ ಸಾಧ್ಯವಾಗುತ್ತದೆ ಎನ್ನುವುದು ಆಯುಷ್‌ ಸಚಿವಾಲಯದ ವಾದ.

ಯೋಗ-ಬ್ರೇಕ್‌ ಆ್ಯಪ್‌: ಕೆಲಸದ ಸ್ಥಳದಲ್ಲಿನ ಒತ್ತಡ ತಗ್ಗಿಸಲು ಮತ್ತು ಮನೋಲ್ಲಾಸ ಪಡೆಯಲು ಕೇಂದ್ರ ಆಯುಷ್‌ ಸಚಿವ ಸರ್ಬಾನಂದ ಸೊನೊವಾಲ್‌ “ಯೋಗ-ಬ್ರೇಕ್‌’ ಆ್ಯಪ್‌ ಅನ್ನು ಅನಾವರಣಗೊಳಿಸಿದ್ದಾರೆ. ವೃತ್ತಿಪರರಿಗಾಗಿಯೇ ಇದನ್ನು ಅಭಿವೃದ್ಧಿಪಡಿಸಲಾಗಿದ್ದು, 5 ನಿಮಿಷಗಳ ಅಭ್ಯಾಸವು ಆಸನಗಳು, ಪ್ರಾಣಾಯಾಮ, ಧ್ಯಾನವನ್ನು ಒಳಗೊಂಡಿರಲಿದೆ.

ಆ್ಯಪ್‌ನಲ್ಲೇನಿದೆ?: ಐದು ಸರಳವಾದ ಯೋಗಾಸನಗಳನ್ನು ಈ ಆ್ಯಪ್‌ನಲ್ಲಿ ಪರಿಚಯಿಸಲಾಗಿದೆ. ಅವೆಂದರೆ, ತಾಡಾಸನ, ಸ್ಕಂಧ ಚಕ್ರ, ಅರ್ಧ ಚಕ್ರಾಸನ, ನಾಡಿಶೋಧನ ಪ್ರಾಣಾಯಾಮ ಮತ್ತು ಭ್ರಮರಿ ಪ್ರಾಣಾಯಾಮ-ಧ್ಯಾನ. ಕೇವಲ 5 ನಿಮಿಷಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ

ಬೆಂಗಳೂರಲ್ಲೂ ಪ್ರಯೋಗ: ಕಳೆದ ವರ್ಷದ ಜನವರಿಯಲ್ಲೇ ಈ ಆ್ಯಪ್‌ ಅನಾವರಣ ಮಾಡಲಾಗಿತ್ತು. ಬೆಂಗಳೂರು ಸೇರಿ 6 ಮೆಟ್ರೋ ನಗರಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಲಾಗಿತ್ತು. ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯು ದೇಶದ 6 ಪ್ರಮುಖ ಯೋಗ ಕೇಂದ್ರಗಳ ಸಹಭಾಗಿತ್ವದೊಂದಿಗೆ 15 ದಿನಗಳ ಪ್ರಯೋಗವನ್ನು ನಡೆಸಿತ್ತು.

ವಿಶೇಷವಾಗಿ ವೃತ್ತಿಪರರಿಗೆಂದೇ ಈ ಆ್ಯಪ್‌ ಅಭಿವೃದ್ಧಿಪಡಿಸಿದ್ದೇವೆ. ಒತ್ತಡ ತಗ್ಗಿಸಲು, ರಿಫ್ರೆಶ್‌ ಆಗಲು ಮತ್ತು ಕೆಲಸದ ಮೇಲೆ ಗಮನ ಕೇಂದ್ರೀಕರಿಸಲು 5 ನಿಮಿಷಗಳ ಯೋಗಾಸನ ನೆರವಾಗಲಿದೆ. ಅಲ್ಲದೇ ಉತ್ಪಾದಕತೆಯೂ ಹೆಚ್ಚಲಿದೆ.

-ಸರ್ಬಾನಂದ ಸೊನೊವಾಲ್‌, ಆಯುಷ್‌ ಸಚಿವ

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.