ಯೋಗಿ ಸರ್ಕಾರದಲ್ಲಿ ಒಡಕು! ರಾಜೀನಾಮೆಯ ಬೆದರಿಕೆ ಹಾಕಿದ ಜಲಶಕ್ತಿ ಸಚಿವ
Team Udayavani, Jul 20, 2022, 8:31 PM IST
ಲಕ್ನೋ: ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರದಲ್ಲಿ ಒಡಕು ಮೂಡಿದೆ. ಒಬ್ಬೊಬ್ಬರೇ ಸಚಿವರು ಸರ್ಕಾರದ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸತೊಡಗಿದ್ದಾರೆ.
ಉಪಮುಖ್ಯಮಂತ್ರಿ ಬೃಜೇಶ್ ಪಾಠಕ್ ಅಸಮಾಧಾನ ಮತ್ತು ಜಿತಿನ್ ಪ್ರಸಾದ್ ಅವರ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳ ಅಮಾನತು ಪ್ರಕರಣಗಳ ಬೆನ್ನಲ್ಲೇ ಬುಧವಾರ ಸಿಎಂ ಯೋಗಿಗೆ ಹೊಸ ತಲೆನೋವು ಎದುರಾಗಿದೆ. ಜಲಶಕ್ತಿ ಸಚಿವ ದಿನೇಶ್ ಖಾತಿಕ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ರಾಜೀನಾಮೆಯ ಇಂಗಿತ ವ್ಯಕ್ತಪಡಿಸಿದ್ದಾರೆ.
ನಾನು ದಲಿತ ಎಂಬ ಕಾರಣಕ್ಕೆ ನನ್ನ ಇಲಾಖೆಯ ಅಧಿಕಾರಿಗಳೇ ನನಗೆ ಗೌರವ ನೀಡುತ್ತಿಲ್ಲ. ನನ್ನದೇ ಇಲಾಖೆಯಲ್ಲಿ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಆದರೆ, ಅದರ ಬಗ್ಗೆ ವಿವರಣೆ ಕೇಳಿದರೆ ಯಾರೂ ಕೊಡುತ್ತಿಲ್ಲ ಎಂದೂ ಸಚಿವ ದಿನೇಶ್ ಆರೋಪಿಸಿದ್ದಾರೆ.
ಇನ್ನೊಂದೆಡೆ, ಅಸೆಂಬ್ಲಿ ಚುನಾವಣೆಗೆ ಮುನ್ನ ಕಾಂಗ್ರೆಸ್ನಿಂದ ಬಿಜೆಪಿಗೆ ಸೇರಿದ್ದ ಸಚಿವ ಜಿತಿನ್ ಪ್ರಸಾದ ಅವರೂ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜು.18ರಂದು ವರ್ಗಾವಣೆಯಲ್ಲಿ ಅವ್ಯವಹಾರ ಆರೋಪ ಸಂಬಂಧ ಅವರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಅನಿಲ್ ಕುಮಾರ್ ಪಾಂಡೆಯನ್ನು ಹುದ್ದೆಯಿಂದ ವಜಾಗೊಳಿಸಿದ್ದರಿಂದ ಅವರು ಸಿಟ್ಟಾಗಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ತಳ್ಳಿಹಾಕಿರುವ ಪ್ರಸಾದ, ನನಗೆ ಯೋಗಿ ಸರ್ಕಾರದ ಬಗ್ಗೆ ಅಸಮಾಧಾನವಿಲ್ಲ. ಕೇಂದ್ರ ನಾಯಕರನ್ನು ಭೇಟಿಯಾಗುವ ಯೋಜನೆಯನ್ನೂ ಹಾಕಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ