ಭಾರೀ ಉದ್ಯೋಗ ಸೃಷ್ಟಿಗೆ ತೊಡಗಿಕೊಂಡ ಆದಿತ್ಯನಾಥ್ ಸರಕಾರ
Team Udayavani, Jul 22, 2017, 5:33 PM IST
ಲಕ್ನೋ : ದೇಶಕ್ಕೀಗ ನಾಲ್ಕರಿಂದ ಐದು ಲಕ್ಷ ನುರಿತ ವಾಹನ ಚಾಲಕರು ಬೇಕಾಗಿದ್ದು ಉತ್ತರ ಪ್ರದೇಶದಿಂದ ಗರಿಷ್ಠ ಸಂಖ್ಯೆಯ ವಾಹನ ಚಾಲಕರನ್ನು ತಯಾರುಗೊಳಿಸಿ ರಾಜ್ಯದಲ್ಲಿನ ನಿರುದ್ಯೋಗ ಸಮಸ್ಯೆಯನ್ನು ತಕ್ಕ ಮಟ್ಟಿಗೆ ನಿವಾರಿಸುವ ಪ್ರಯತ್ನದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೊಡಗಿಕೊಂಡಿದ್ದಾರೆ.
ಉತ್ತರ ಪ್ರದೇಶದ ವಿವಿಧೆಡೆ ಒಟ್ಟು 18 ವಾಹನ ಚಾಲನೆ ತರಬೇತಿ ಕೇಂದ್ರ ಗಳನ್ನು ಸ್ಥಾಪಿಸಲು ಆದಿತ್ಯನಾಥ್ ಸರಕಾರ ಅಗತ್ಯವಿರುವ ಭೂಮಿಯನ್ನು ನೀಡಿದೆ. ವಾಹನ ಚಾಲಕರಾಗುವ ಆಸಕ್ತಿ ಹೊಂದಿರುವ ಯಾರು ಬೇಕಾದರೂ ಇಲ್ಲಿಗೆ ಬಂದು ತರಬೇತಿ ಪಡೆದು ಸ್ವಾವಲಂಬಿಗಳಾಗಬಹುದೆಂದು ಆದಿತ್ಯನಾಥ್ ಹೇಳಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಆದಿತ್ಯನಾಥ್ ಅವರು ರಾಜ್ಯದಲ್ಲಿನ ಕೈಗಾರಿಕಾ ತರಬೇತಿ ಕೇಂದ್ರಗಳಲ್ಲಿನ ತರಬೇತಿ ಪ್ರಕ್ರಿಯೆಗಳನ್ನು ತ್ವರಿತಗೊಳಿಸಲು ಅವುಗಳನ್ನು ಆನ್ಲೈನ್ಗೆ ತರಲು ನಿರ್ಧರಿಸಿದ್ದಾರೆ.
ರಾಜ್ಯದಲ್ಲಿ ಅಧಿಕ ಸಂಖ್ಯೆಯ ಯುವಕ-ಯುವತಿಯರಿಗೆ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆಯ ತರಬೇತಿಯನ್ನು ನೀಡುವ ನಿಟ್ಟಿನಲ್ಲಿ ಆದಿತ್ಯನಾಥ್ ಅವರು ಇಂದು ಶನಿವಾರ ಕೇಂದ್ರ ಸಹಾಯಕ ಸಚಿವ ರಾಜೀವ್ ಪ್ರತಾಪ್ ರೂಡಿ ಅವರೊಡನೆ ಸಭೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ