ಯೋಗಿ ಸಂಪುಟದ ಮೊದಲ ಸಭೆ: ರೈತರ 1 ಲಕ್ಷ ರೂ.ಕೃಷಿ ಸಾಲ ಮನ್ನಾ
Team Udayavani, Apr 4, 2017, 7:39 PM IST
ಲಕ್ನೋ : ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎರಡು ವಾರಗಳ ತರುವಾಯ ಇಂದು ಮಂಗಳವಾರ ಪ್ರಥಮ ಸಂಪುಟ ಸಭೆಯನ್ನು ನಡೆಸಿದ ಯೋಗಿ ಆದಿತ್ಯನಾಥ್ ಅವರು ಒಂದು ಲಕ್ಷ ರೂ. ವರೆಗಿನ ಸಣ್ಣ ರೈತರ ಕೃಷಿ ಸಾಲವನ್ನು ಮನ್ನಾ ಮಾಡಿದ್ದಾರೆ. ಇದರಿಂದ ರಾಜ್ಯದ ಸುಮಾರು 2.5 ಕೋಟಿ ಸಣ್ಣ ಹಾಗೂ ಅತೀ ಸಣ್ಣ ರೈತರಿಗೆ ಪ್ರಯೋಜನವಾಗಲಿದೆ.
ಕೃಷಿ ಸಾಲ ಮನ್ನಾಗೆ ಹಣ ಒದಗಿಸುವ ನಿಟ್ಟಿನಲ್ಲಿ ಯೋಗಿ ಆದಿತ್ಯನಾಥ್ ಸರಕಾರ 36,000 ಕೋಟಿ ರೂ.ಗಳನ್ನು ಖರ್ಚು ಮಾಡಲಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಇದೇ ಸಂಪುಟ ಸಭೆಯಲ್ಲಿ ಕಾನೂನುಬಾಹಿರ ವಧಾಗೃಹಗಳಿಗೆ ನಿಷೇಧ ಹೇರುವ ಅಧ್ಯಾದೇಶಕ್ಕೆ ಹಾಗೂ ರೋಮಿಯೋ ನಿಗ್ರಹ ದಳ ರಚನೆಗೆ ಅನುಮೋದನೆ ನೀಡಲಾಗಿದೆ.
ಅಲ್ಲದೇ ರಾಜ್ಯಾದ್ಯಂತ ರೈತರ ಶೇ.100 ಗೋಧಿ ಬೆಳೆಯನ್ನು ಖರೀದಿಸುವ ಪ್ರಸ್ತಾವಕ್ಕೆ ಸಂಪುಟವು ಅನುಮೋದನೆ ನೀಡಿದೆ.
ಬುಂದೇಲ್ಖಂಡ್ ಪ್ರಾಂತ್ಯಕ್ಕಾಗಿ ಮೊನ್ನೆ ಭಾನುವಾರದಂದೇ ಸಿಎಂ ಆದಿತ್ಯನಾಥ್ ಅವರು 47 ಕೋಟಿ ರೂ.ಗಳನ್ನು ಪ್ರಕಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ