ಯುಪಿ ಬಿಜೆಪಿ ಜಯಭೇರಿ


Team Udayavani, Dec 2, 2017, 6:00 AM IST

Yogi-Adityanath-win.jpg

ಲಖನೌ: ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದ ಉತ್ತರ ಪ್ರದೇಶ ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಸಿಎಂ ಯೋಗಿ ಆದಿತ್ಯನಾಥ್‌ ಅವರು ತಮಗೆದುರಾದ ಮೊದಲ ಪರೀಕ್ಷೆಯಲ್ಲೇ ಭರ್ಜರಿ ಅಂಕ ಗಳಿಸಿದ್ದಾರೆ. ಆದರೆ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದ ಕಾಂಗ್ರೆಸ್‌ ಸ್ಥಳೀಯ ಚುನಾವಣೆಯಲ್ಲೂ ಮುಖಭಂಗ ಅನುಭವಿಸಿದೆ. 

ತನ್ನ ಭದ್ರಕೋಟೆ ಅಮೇಥಿಯಲ್ಲೇ ಬಿಜೆಪಿ ಜಯ ಸಾಧಿಸಿರುವುದು ಕಾಂಗ್ರೆಸ್‌ ನಾಯಕರ ಬೆವರಿಳಿಸುವಂತೆ ಮಾಡಿದೆ. ಬಿಜೆಪಿಗೆ ಅತ್ಯಂತ ಪ್ರಮುಖವಾಗಿದ್ದ ಅಯೋಧ್ಯೆ ಮತ್ತು ವಾರಾಣಸಿಯಲ್ಲೂ ಬಿಜೆಪಿ ಗೆಲುವು ಸಾಧಿಸಿದ್ದು, 16 ನಗರಗಳ ಪೈಕಿ 14ರಲ್ಲಿ ಜಯ ಸಾಧಿಸಿದೆ.

ಪಕ್ಷದ ಪರ ತೀವ್ರವಾಗಿ ಪ್ರಚಾರ ನಡೆಸಿದ್ದ ಸಿಎಂ ಯೋಗಿ ಆದಿತ್ಯನಾಥ್‌ ಈ ಬಗ್ಗೆ ಪ್ರತಿಕ್ರಿಯಿಸಿ, “2019ರ ಚುನಾವಣೆಯಲ್ಲಿ ಬಿಜೆಪಿ ಶೇ.100ರಷ್ಟು ಜಯ ಸಾಧಿಸುವ ಮುನ್ಸೂಚನೆ ಇದಾಗಿದೆ. ಅಮೇಥಿಯೇ ಕೈತಪ್ಪಿರುವುದು ನೆಹರೂ ಕುಟುಂಬದ ಚಿಂತೆಗೆ ಕಾರಣವಾಗಿದೆ’ ಎಂದಿದ್ದಾರೆ.

ಅಯೋಧ್ಯೆಯಲ್ಲಿ ಬಿಜೆಪಿಯ ರಿಷಿಕೇಶ್‌ ಉಪಾಧ್ಯಾಯ 44,642 ಮತಗಳನ್ನು ಪಡೆದು, ಸಮಾಜವಾದಿ ಪಕ್ಷದ ಗುಲÒನ್‌ ಬಿಂದುರನ್ನು 3601 ಮತಗಳಿಂದ ಸೋಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಕ್ಷೇತ್ರ ವಾರಾಣಸಿಯಲ್ಲಿ ಬಿಜೆಪಿಯ ಮೃದುಲಾ ಜೈಸ್ವಾಲ್‌ ಗೆಲುವು ಸಾಧಿಸಿದ್ದು, ಕಾಂಗ್ರೆಸ್‌ ಶಾಲಿನಿಯವರನ್ನು 78,843 ಮತಗಳ ಭಾರಿ ಅಂತರದಿಂದ ಸೋಲಿಸಿದ್ದಾರೆ.

ಬಿಎಸ್‌ಪಿ ಚೇತರಿಕೆ:
ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ನೆಲಕಚ್ಚಿದ್ದ ಮಾಜಿ ಸಿಎಂ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ(ಬಿಎಸ್ಪಿ) ಚೇತರಿಸಿಕೊಳ್ಳುತ್ತಿದ್ದು, ಮೀರತ್‌ ಮತ್ತು ಅಲಿಗಢದಲ್ಲಿ ಅಧಿಕಾರಕ್ಕೇರಿದೆ. ಅಲಿಗಢದಲ್ಲಿ ಮಹಮ್ಮದ್‌ ಫ‌ುರ್ಕಾನ್‌ ಮೇಯರ್‌ ಆಗಲಿದ್ದು, ಬಿಜೆಪಿಯ ಅಭ್ಯರ್ಥಿ ರಾಜೀವ್‌ ಅಗರ್ವಾಲ್‌ ಸೋಲು ಅನುಭವಿಸಿದ್ದಾರೆ.

ಲಖನೌಗೆ ಮೊದಲ ಮಹಿಳಾ ಮೇಯರ್‌:
ಲಖನೌನಲ್ಲಿ ಇದೇ ಮೊದಲ ಬಾರಿಗೆ ಮಹಿಳೆ ಮೇಯರ್‌ ಆಗಲಿದ್ದಾರೆ. ಮಹಿಳೆಯರಿಗೆ ಈ ಕ್ಷೇತ್ರವನ್ನು ಮೀಸಲಿಡಲಾಗಿದ್ದು, ಬಿಜೆಪಿ ಸಂಯುಕ್ತಾ ಭಾಟಿಯಾ, ಸಮಾಜವಾದಿ ಪಕ್ಷದ ಮೀರಾ ವರ್ಧನ್‌ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಯೋಗಿ ಪ್ರಚಾರ: ಉತ್ತರ ಪ್ರದೇಶದ ಸ್ಥಳೀಯ ಚುನಾವಣೆಗಳನ್ನು ಬಿಜೆಪಿ ಈ ಬಾರಿ ಪ್ರತಿಷ್ಠೆಯ ಪ್ರಶ್ನೆಯನ್ನಾಗಿಸಿತ್ತು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಾಮರ್ಥ್ಯ ಪ್ರದರ್ಶನವೂ ಈ ಚುನಾವಣೆಯಾಗಿತ್ತು. ಹೀಗಾಗಿ ಅವರು ನೇರವಾಗಿ ಪ್ರಚಾರ ಕಣಕ್ಕೇ ಇಳಿದಿದ್ದರು. ಹಿಂದೆಂದೂ ಉತ್ತರಪ್ರದೇಶದಲ್ಲಿ ಸ್ಥಳೀಯ ಚುನಾವಣೆಗಳಿಗೆ ಮುಖ್ಯಮಂತ್ರಿ ಪ್ರಚಾರ ನಡೆಸಿದ ಉದಾಹರಣೆಯಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಹಲವು ಕ್ಷೇತ್ರಗಳಿಗೆ ತೆರಳಿ ಯೋಗಿ ಪ್ರಚಾರ ನಡೆಸಿದ್ದರು.

ಅಯೋಧ್ಯೆಗೆ ಮೊದಲ ಮೇಯರ್‌: ಇದೇ ಮೊದಲ ಬಾರಿ ಅಯೋಧ್ಯೆ, ಮಥುರಾ-ಬೃಂದಾವನಕ್ಕೆ ಸ್ಥಳೀಯ ಚುನಾವಣೆ ನಡೆಸಲು ಯೋಗಿ ಆದಿತ್ಯನಾಥ ಸರ್ಕಾರ ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ನವೆಂಬರ್‌ 22ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ರಿಷಿಕೇಶ್‌ ಉಪಾಧ್ಯಾಯ ಇಲ್ಲಿನ ಮೇಯರ್‌ ಆಗಲಿದ್ದಾರೆ. ಬಿಜೆಪಿಗೆ ಇದು ಅತ್ಯಂತ ಪ್ರತಿಷ್ಠೆಯ ಕ್ಷೇತ್ರವಾಗಿದೆ. ಮಥುರಾದಲ್ಲಿ ಬಿಜೆಪಿ ಅಭ್ಯರ್ಥಿ ಲಕ್ಕಿ ಡ್ರಾ ಮೂಲಕ ಗೆದ್ದಿದ್ದಾರೆ.

ರಾಹುಲ್‌ ಗಾಂಧಿ ಕ್ಷೇತ್ರವೇ ಅಭದ್ರ!
ಅಮೇಥಿ ನಗರ ಪಂಚಾಯಿತಿ ಹಿಂದಿನಿಂದಲೂ ಕಾಂಗ್ರೆಸ್‌ ಭದ್ರಕೋಟೆಯಾಗಿತ್ತು. ಆದರೆ ಈ ಸನ್ನಿವೇಶ ಈಗ ಬದಲಾಗುತ್ತಿದೆ. ಬಿಜೆಪಿಯ ಅಭ್ಯರ್ಥಿ ಚಂದ್ರಮ್ಮ ದೇವಿ 1035 ಮತಗಳಿಂದ ಕಾಂಗ್ರೆಸ್‌ಗೆ ಸೋಲುಣಿಸಿದ್ದಾರೆ. ಇನ್ನೊಂದೆಡೆ ಸ್ಪರ್ಧಿಸಿದ್ದ ಎಲ್ಲ ನಾಲ್ಕು ಕ್ಷೇತ್ರಗಳಾದ ತಿಲೋಯಿ, ಜಗದೀಶ್‌ಪುರ, ಗೌರಿಗಂಜ್‌ ಮತ್ತು ಸಲೋನ್‌ನಲ್ಲೂ ಕಾಂಗ್ರೆಸ್‌ ಸೋಲುಂಡಿದೆ. ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರದಲ್ಲಿ ಅಮೇಥಿಯಲ್ಲಿ ಉಂಟಾದ ಅಭಿವೃದ್ಧಿ ಕಾರ್ಯದ ಬಗ್ಗೆ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಮತ್ತು ಸಿಎಂ ಯೋಗಿ ಆದಿತ್ಯನಾಥ್‌ ಹೆಚ್ಚು ಪ್ರಚಾರ ನಡೆಸಿದ್ದರು ಎನ್ನಲಾಗಿದೆ.

ಯೋಗಿ ಕ್ಷೇತ್ರದಲ್ಲೇ ಸೋಲು!
ಇಡೀ ರಾಜ್ಯದಲ್ಲಿ ಸ್ಥಳೀಯ ಚುನಾವಣೆಯನ್ನು ಗೆದ್ದ ಸಿಎಂ ಯೋಗಿ ಆದಿತ್ಯನಾಥ ತಮ್ಮ ವಾರ್ಡ್‌ನಲ್ಲೇ ಸೋಲುಂಡಿದ್ದಾರೆ. ಗೋರಖ್‌ಪುರದ ವಾರ್ಡ್‌ ನಂ.68ರಲ್ಲಿ ಬಿಜೆಪಿಯ ಮಾಯಾ ತ್ರಿಪಾಠಿಯವರನ್ನು ಸ್ವತಂತ್ರ ಮುಸ್ಲಿಂ ಅಭ್ಯರ್ಥಿ ನಾದಿರಾ ಖಾತೂನ್‌ ಸೋಲಿಸಿದ್ದಾರೆ. ಇದೇ ವಾರ್ಡ್‌ನ ವ್ಯಾಪ್ತಿಯಲ್ಲಿರುವ ಜನಪ್ರಿಯ ಗೋರಖನಾಥ ದೇಗುಲದಲ್ಲಿ ಆದಿತ್ಯನಾಥ್‌ ಮಹಾಂತರಾಗಿದ್ದಾರೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.