1000 ಭ್ರಷ್ಟ ಅಧಿಕಾರಿಗಳನ್ನು ಮನೆಗೆ ಕಳಿಸಿದ ಯೋಗಿ ಸರಕಾರ
Team Udayavani, Nov 26, 2019, 4:40 PM IST
ಲಕ್ನೋ: ಸುಮಾರು 1 ಸಾವಿರಕ್ಕೂ ಹೆಚ್ಚು ಮಂದಿ ಅಸಮರ್ಥ, ಭ್ರಷ್ಟ ಅಧಿಕಾರಿಗಳನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಅವರ ಸರಕಾರ ಮನೆಗೆ ಕಳಿಸಿದೆ.
ಇವರು ವಿವಿಧ ಹಂತದ ಅಧಿಕಾರಿಗಳಾಗಿದ್ದು, ಐಎಎಸ್ ಅಧಿಕಾರಿಗಳೂ ಸೇರಿದಂತೆ ಹಲವರಿದ್ದಾರೆ.
ಸಾರಿಗೆ ಇಲಾಖೆಯಿಂದ 37 ಅಧಿಕಾರಿಗಳಿಗೆ ನಿವೃತ್ತಿ ನೀಡಲಾಗಿದ್ದು, ಕಂದಾಯ ಇಲಾಖೆಯಿಂದ 36 ಮಂದಿ, ಶಿಕ್ಷಣ ಇಲಾಖೆಯಿಂದ 26 ಮಂದಿ, ಪಂಚಾಯತ್ ರಾಜ್ ಇಲಾಖೆಯಿಂದ 25 ಮಂದಿ, ಲೋಕೋಪಯೋಗಿ ಇಲಾಖೆಯಿಂದ 18 ಮಂದಿ, ಕಾರ್ಮಿಕ ಇಲಾಖೆಯಿಂದ 16 ಮಂದಿ, ವಿತ್ತ ಮತ್ತು ವಾಣಿಜ್ಯ ತೆರಿಗೆ ಇಲಾಖೆಯಿಂದ 16 ಮಂದಿಗೆ ಕಡ್ಡಾಯ ನಿವೃತ್ತಿ ನೀಡಲಾಗಿದೆ. ಇವರಲ್ಲಿ ಹೆಚ್ಚಿನವರು ಭ್ರಷ್ಟಾಚಾರ ಪ್ರಕರಣಗಳನ್ನು ಎದುರಿಸುತ್ತಿದ್ದು, ಕೆಲಮಂದಿ ಕೆಲಸದಲ್ಲಿ ಅಸಮರ್ಥರಾಗಿದ್ದಾರೆ ಎಂದು ಸಿಎಂ ಕಚೇರಿ ಹೇಳಿದೆ. ಕಡ್ಡಾಯ ನಿವೃತ್ತಿ ನೀಡಲಾದವರಲ್ಲಿ ದೊಡ್ಡ ಹುದ್ದೆಗಳಲ್ಲಿದ್ದ ಐಎಎಸ್ ಅಧಿಕಾರಿಗಳೂ ಇದ್ದಾರೆ ಎಂದು ಸಿಎಂ ಕಚೇರಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ