ಜಾತಕದಲ್ಲಿʼಬಂಧನ ದೋಷʼವಿದ್ದರೆ ಇಲ್ಲಿ 500 ರೂ.ಬಾಡಿಗೆ ಕೊಟ್ಟು ಒಂದು ದಿನ ಜೈಲಿನಲ್ಲಿರಬಹುದು!
Team Udayavani, Oct 1, 2022, 12:08 PM IST
ಉತ್ತರಾಖಂಡ್: ಸಾಮಾನ್ಯವಾಗಿ ನಮ್ಮ ಜಾತಕದಲ್ಲಿ ಯಾವ ದೋಷವಿದೆಯೋ ಅದಕ್ಕೆ ಜ್ಯೋತಿಷಿಗಳು ಪರಿಹಾರ ಸೂಚಿಸುತ್ತಾರೆ. ನಮ್ಮ ಉದ್ಯೋಗ, ಮದುವೆ, ಸಂಬಂಧದಲ್ಲಿ ಯಾವ ದೋಷವಿದೆಯೋ ಅದಕ್ಕೆ ಪರಿಹಾರವನ್ನು ಜ್ಯೋತಿಷಿಗಳು ಸೂಚಿಸುತ್ತಾರೆ.
ಕಲಿತ ಮೇಲೆ ಉದ್ಯೋಗ ಸಿಗದಿದ್ರೆ, ಮದುವೆಗೆ ಸಂಬಂಧ ಹುಡುಕುವ ವೇಳೆ ಅಥವಾ ಮದುವೆಯಾದ ಬಳಿಕ ನಮಗೆ ಏನಾದರೂ ತೊಂದರೆ ಉಂಟಾದರೆ ಕೆಲವರು ಜ್ಯೋತಿಷಿಗಳ ಬಳಿ ತೆರೆಳಿ ಹೀಗೆಕೆ ಆಗುತ್ತಿದೆ ಎಂದು ಹೇಳುತ್ತಾರೆ. ಅದಕ್ಕೆ ಸಂಬಂಧಿಸಿ ಪರಿಹಾರ, ಸಲಹೆಗಳನ್ನು ಜ್ಯೋತಿಷಿಗಳು ನೀಡುತ್ತಾರೆ. ಒಂದು ವೇಳೆ ನಮ್ಮ ಜಾತಕದಲ್ಲಿ ಮುಂದೆ ಬಂಧನದ ದೋಷವಿದ್ದರೆ ಅದಕ್ಕೆ ಪರಿಹಾರವಾಗಿ ಉತ್ತರಾಖಂಡದಲ್ಲಿ ಬಾಡಿಗೆ ರೂಪದಲ್ಲಿ ವಿಶೇಷವಾದ ಜೈಲ್ಲೊಂದಿದೆ.
ಹೌದು ಕೇಳಲು ವಿಚಿತ್ರವಾದರೂ ಇದು ಸತ್ಯ. ಒಂದು ವೇಳೆ ನಿಮ್ಮ ಜಾತಕದಲ್ಲಿ ನೀವು ಜೈಲು ಸೇರುತ್ತೀರಿ ಅಥವಾ ಬಂಧನವಾಗುವ ಸಾಧ್ಯತೆಯಿದ್ದರೆ ನಿಮ್ಮ ಜೈಲಿನ ದೋಷಕ್ಕೆ ಪರಿಹಾರವಾಗಿ ಒಂದು ದಿನಕ್ಕೆ ಬಾಡಿಗೆ ರೂಪದಲ್ಲಿ 500 ರೂ. ಕೊಟ್ಟು ಜೈಲುಶಿಕ್ಷೆ ಅನುಭವಿಸಬಹುದು.! ಉತ್ತರಾಖಂಡದ ಹಲ್ದ್ವಾನಿ ಜೈಲು ಈ ದೋಷವನ್ನು ಪರಿಹರಿಸಿಕೊಳ್ಳಲು ಅವಕಾಶ ನೀಡಿದೆ. ಈ ರೀತಿ ಬಾಡಿಗೆ ಕೊಟ್ಟು ಜೈಲಿನಲ್ಲಿರಲು ಅವಕಾಶ ನೀಡಿದ ದೇಶದ ಮೊದಲ ಜೈಲು ಇದಾಗಿದೆ.
ಒಂದು ವೇಳೆ ಜಾತಕದಲ್ಲಿ ʼಬಂಧನ ದೋಷʼವಿದ್ದರೆ ಅವರು ಜೈಲಿನಲ್ಲಿ ದಿನಕ್ಕೆ 500 ರೂ. ಕೊಟ್ಟು ಇರಬಹುದು ಅಂಥವರಿಗೆ ಜೈಲಿನ ಹಳೆಯ ವಿಭಾಗದಲ್ಲಿ ಪ್ರತ್ಯೇಕ ಕೊಠಡಿ ನೀಡಲಾಗುತ್ತದೆ. ಈ ವ್ಯವಸ್ಥೆಗೆ ಪ್ರಧಾನ ಕಚೇರಿಯಿಂದ ಅನುಮತಿ ಪಡೆಯಬೇಕೆಂದು ಜೈಲಿನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ