ಆರ್ಥಿಕ ಅಭಿವೃದ್ಧಿ ಬಗ್ಗೆ ಗಮನಹರಿಸಿ, ಕಾಮಿಡಿ ಸರ್ಕಸ್ ನಡೆಸೋದು ಬೇಡ; ಪ್ರಿಯಾಂಕಾ
Team Udayavani, Oct 19, 2019, 7:35 PM IST
ಹೊಸದಿಲ್ಲಿ : ಆರ್ಥಿಕ ವಲಯದಲ್ಲಿನ ಸ್ಥಿತಿ-ಗತಿಗಳನ್ನು ಸುಧಾರಿಸುವ ಕೆಲಸ ಮಾಡುವುದನ್ನು ಬಿಟ್ಟು ಕಾಮಿಡಿ ಸರ್ಕಸ್ ನಡೆಸುವುದು ಬೇಡ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಹರಿಹಾಯ್ದಿದ್ದಾರೆ.
ಶುಕ್ರವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿಯವರನ್ನು ಎಡಪಂಥೀಯ ವ್ಯಕ್ತಿ ಎಂದು ಹೇಳಿಕೆ ನೀಡಿದ್ದು, ಭಾರತೀಯ ಮತದಾರರು ತಿರಸ್ಕರಿಸಿರುವ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿದ್ದ ಕಡಿಮೆ ಆದಾಯ ಯೋಜನೆಯ ನ್ಯಾಯ್ ಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಆ ವ್ಯಕ್ತಿಯ ಅಭಿಪ್ರಾಯವನ್ನು ಒಪ್ಪಬೇಕಾಗದ ಅಗತ್ಯವಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದರು.
ಇದಕ್ಕೆ ತಿರುಗೇಟು ನೀಡಿರುವ ಪ್ರಿಯಾಂಕಾ, ಬಿಜೆಪಿ ನಾಯಕರು ತಮ್ಮ ಕೆಲಸ ಮಾಡುವುದನ್ನು ಬಿಟ್ಟು, ಇನ್ನೊಬ್ಬರು ಮಾಡಿದ ಸಾಧನೆಯನ್ನು ಅಲ್ಲಗಳೆಯುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದು, ಕಳೆದ ಮೇ ನಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ನ್ಯಾಯ್ ಯೋಜನೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿನ ಮುಖ್ಯ ಯೋಜನೆಗಳಲ್ಲಿ ಒಂದಾಗಿತ್ತು ಎಂದು ಸಮರ್ಥನೆಯನ್ನು ನೀಡಿದ್ದಾರೆ.
ಅಲ್ಲದೇ ಪ್ರಸ್ತುತ ದೇಶದ ಆರ್ಥಿಕ ವಲಯ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿದ್ದು , ಅದರತ್ತ ಗಮನ ಹರಿಸಬೇಕಾದ ಸಚಿವರು ಸರ್ಕಸ್ ಕಂಪೆನಿ ನಡೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಸೆಪ್ಟೆಂಬರ್ ತಿಂಗಳಲ್ಲಿ ಆಟೋಮೊಬೈಲ್ ವಲಯದ ಬೆಳವಣಿಗೆ ಕುರಿತು ಬಿಡುಗಡೆಯಾದ ವರದಿ ಛಾಯಾಚಿತ್ರವನ್ನು ಲಗತ್ತಿಸುವ ಮೂಲಕ ಪ್ರಿಯಾಂಕಾ ಟ್ವಿಟರ್ನಲ್ಲಿ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ