![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಚಿತ್ರೀಕರಣದ ಬಳಿಕ ಮನಸ್ತಾಪ: 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಯೂಟ್ಯೂಬ್ ಜೋಡಿ
Team Udayavani, Apr 13, 2024, 6:27 PM IST
![ಚಿತ್ರೀಕರಣದ ಬಳಿಕ ಮನಸ್ತಾಪ: 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಯೂಟ್ಯೂಬ್ ಜೋಡಿ](https://www.udayavani.com/wp-content/uploads/2024/04/17-2-620x372.jpg)
ಹರಿಯಾಣ: ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಜೋಡಿಯೊಂದು ಅಪಾರ್ಟ್ ಮೆಂಟ್ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಬಹದ್ದೂರ್ಗಢದಲ್ಲಿ ನಡೆದಿದೆ.
ಗಾರ್ವಿತ್ (25) ನಂದಿನಿ (22) ಮೃತ ಜೋಡಿ. ಇವರು ಯೂಟ್ಯೂಬ್ ಕಂಟೆಂಟ್ ಕ್ರಿಯೇಟರ್ಸ್ ಆಗಿದ್ದರು. ತಮ್ಮದೇ ಆದ ಚಾನೆಲ್ ನ್ನು ನಡೆಸುತ್ತಿದ್ದರು ಮತ್ತು ಯೂಟ್ಯೂಬ್ ಮತ್ತು ಫೇಸ್ಬುಕ್ನಂತಹ ಪ್ಲಾಟ್ಫಾರ್ಮ್ಗಳಿಗಾಗಿ ಕಿರುಚಿತ್ರಗಳನ್ನು ಮಾಡುತ್ತಿದ್ದರು.
ಕೆಲವು ದಿನಗಳ ಹಿಂದಷ್ಟೇ ಜೋಡಿ ತಮ್ಮ ತಂಡದೊಂದಿಗೆ ಡೆಹ್ರಾಡೂನ್ನಿಂದ ಬಹದ್ದೂರ್ಗಢಕ್ಕೆ ಬಂದಿದ್ದರು. ರುಹೀಲಾ ರೆಸಿಡೆನ್ಸಿಯ ಏಳನೇ ಮಹಡಿಯಲ್ಲಿನ ಫ್ಲಾಟ್ ನ್ನು ಬಾಡಿಗೆಗೆ ಪಡೆದಿದ್ದರು, ಅಲ್ಲಿ ಅವರು ತಮ್ಮ ಐದು ಸಹ ಸದಸ್ಯರೊಂದಿಗೆ ವಾಸಿಸುತ್ತಿದ್ದರು.
ಶನಿವಾರ(ಏ.13 ರಂದು) ಮುಂಜಾನೆ 6 ಗಂಟೆಯ ಸುಮಾರಿಗೆ ಇಬ್ಬರು ತಮ್ಮ ಅಪಾರ್ಟ್ ಮೆಂಟ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಪೊಲೀಸರು ಹೇಳಿದ್ದಾರೆ.
ಚಿತ್ರೀಕರಣ ಮುಗಿಸಿ ತಡವಾಗಿ ಮನೆಗೆ ಮರಳಿದ್ದ ಅವರ ನಡುವೆ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದು, ಮನಸ್ತಾಪ ಉಂಟಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಹಿಂದಿನ ಕಾರಣದ ತನಿಖೆ ನಡೆಯುತ್ತಿದೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದ್ದು, ಫೋರೆನ್ಸಿಕ್ಸ್ ತಂಡವು ಸಿಕ್ಕ ಸಾಕ್ಷ್ಯಗಳನ್ನು ಸಂಗ್ರಹಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.