ಪಣಜಿ: ಕೇಂದ್ರ ಸಚಿವರಿಂದ ಜುವಾರಿ ಸೇತುವೆ ಉದ್ಘಾಟನೆ, ವಾಹನ ಸಂಚಾರಕ್ಕೆ ಮುಕ್ತ
Team Udayavani, Dec 29, 2022, 7:04 PM IST
ಪಣಜಿ: ಉತ್ತರ ಗೋವಾ ಮತ್ತು ದಕ್ಷಿಣ ಗೋವಾ ಜಿಲ್ಲೆಗಳನ್ನು ಸಂಪರ್ಕಿಸುವ ಹೊಸ ಜುವಾರಿ ಸೇತುವೆಯನ್ನು (ಇಂದು) ಗುರುವಾರ ಸಂಜೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಉಧ್ಘಾಟನೆ ನೆರವೇರಿಸಿದರು. ಗುರುವಾರ ಮಧ್ಯಾಹ್ನ ಈ ಸೇತುವೆ ಮೇಲೆ ಕಾಲ್ನಡಿಗೆಯ ಮೂಲಕ ಕೇಂದ್ರ ಸಚಿನ ನಿತಿನ್ ಗಡ್ಕರಿ ಸೇತುವೆ ಪರಿಶೀಲನೆ ನಡೆಸಿದರು.
ಗಡ್ಕರಿ ಅವರು ಈ ಸೇತುವೆಯ ಪರಿಶೀಲನೆಯ ಫೋಟೋಗಳನ್ನು ಗಡ್ಕರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕೂಡ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಈ ಹೊಸ ಸೇತುವೆಯನ್ನು ಪೂರ್ಣಗೊಳಿಸಲು ಹೆಚ್ಚಿನ ಕೊಡುಗೆ ನೀಡಿದ್ದಾರೆ ಎಂದೇ ಹೇಳಲಾಗುತ್ತದೆ. ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರಿಕ್ಕರ್ ಅವರ ಮಾತಿನ ಪ್ರಕಾರ, ನಿತಿನ್ ಗಡ್ಕರಿ ಅವರು ಈ ಸಂಪೂರ್ಣ ಯೋಜನೆಗೆ ಎರಡು ಸಾವಿರ ಕೋಟಿ ನಿಧಿಯನ್ನು ಸುಲಭವಾಗಿ ಅನುಮೋದಿಸಿದ್ದಾರೆ ಎನ್ನಲಾಗಿದೆ.
ಅಟಲ್ ಸೇತು ನಂತರ, ಗೋವಾದಲ್ಲಿ ಜುವಾರಿ ಸೇತುವೆಯಂತಹ ದೊಡ್ಡ ಯೋಜನೆಯನ್ನು ನಿತಿನ್ ಗಡ್ಕರಿ ಪ್ರಾರಂಭಿಸಿದರು. ಈ ಸೇತುವೆಯು ಗೋವಾದ ಅಭಿವೃದ್ಧಿಗೆ ಪೂರಕವಾಗಲಿದೆ. ಈ ಸೇತುವೆಯು ಭಾರೀ ವಾಹನಗಳ ಸಂಚಾರಕ್ಕೆ ಹೆಚ್ಚು ಅನುಕೂಲ ಮಾಡಿಕೊಟ್ಟಿದೆ. ಕಳೆದ ಹಲವು ವರ್ಷಗಳಿಂದ ಇಲ್ಲಿ ಭಾರೀ ವಾಹನಗಳು ಕಂಡು ಬರುತ್ತಿದ್ದು, ಈ ಭಾಗದ ನಾಗರಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿತ್ತು. ಇದೀಗ ಜುವಾರಿ ಸೇತುವೆ ಉಧ್ಘಾಟನೆಯಿಂದಾಗಿ ಸಾರಾಗವಾಗಿ ವಾಹನ ಓಡಾಟಕ್ಕೆ ಹೆಚ್ಚಿನ ಅನುಕೂಲವಾದಂತಾಗಿದೆ.
ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಗೆ ಆಹ್ವಾನ :ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ಎಂದ ಅಖಿಲೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ