ಫೇಸ್‌ಬುಕ್‌ ಭಾರೀ ವಿಶ್ವಾಸ ದ್ರೋಹ: ಝುಕರ್‌ ಬರ್ಗ್‌ ಕ್ಷಮೆಯಾಚನೆ


Team Udayavani, Mar 22, 2018, 11:26 AM IST

Mark Zukerberg-700.jpg

ವಾಷಿಂಗ್ಟನ್‌ : ಎರಡು ಶತಕೋಟಿ ಫೇಸ್‌ ಬುಕ್‌ ಬಳಕೆದಾರರಿಗೆ ಆಗಿರುವ ಭಾರೀ ವಿಶ್ವಾಸ ದ್ರೋಹಕ್ಕಾಗಿ ಮಾರ್ಕ್‌ ಝುಕರ್‌ಬರ್ಗ್‌ ಇಂದು ಕ್ಷಮೆಯಾಚಿಸಿದ್ದಾರೆ. ಫೇಸ್‌ ಬುಕ್‌ ಬಳಕೆದಾರರ ಅತ್ಯಮೂಲ್ಯ ಖಾಸಗಿ ಮಾಹಿತಿಗಳನ್ನು ರಕ್ಷಿಸುವುದಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂಬ ಭರವಸೆಯನ್ನು ನೀಡಿದ್ದಾರೆ. 

ಬಳಕೆದಾರರ ಖಾಸಗಿ ಮಾಹಿತಿಗಳನ್ನು ಬೃಹತ್‌ ಪ್ರಮಾಣದಲ್ಲಿ ಚೌರ್ಯ ಮಾಡಿದ ಆರೋಪದ ಮೇಲೆ ಸಾಮಾಜಿಕ ಮಾಧ್ಯಮದ ದಿಗ್ಗಜ ಫೇಸ್‌ ಬುಕ್‌ ವಿಶ್ವಾದ್ಯಂತ ಟೀಕೆ, ಖಂಡನೆಗೆ ಗುರಿಯಾಗಿದ್ದು ಇದೊಂದು ಭಾರೀ ದೊಡ್ಡ ವಿಶ್ವಾಸ ದ್ರೋಹದ ಹಗರಣವೆಂಬ ಹಣೆಪಟ್ಟಿಗೆ ಗುರಿಯಾಗಿದೆ. 

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ 2016ರ ಅಧ್ಯಕ್ಷೀಯ ಚುನಾವಣಾ ಪ್ರಚಾರಾಭಿಯಾನದ ವೇಳೆ ಮತದಾರರ ಮೇಲೆ ಪ್ರಭಾವ ಬೀರುವ ಸಲುವಾಗಿ ಕ್ಯಾಂಬ್ರಿಜ್‌ ಆ್ಯನಲಿಟಿಕಾ ಎಂಬ ಬ್ರಿಟಿಷ್‌ ಸಂಸ್ಥೆ 5 ಕೋಟಿ ಫೇಸ್‌ ಬುಕ್‌ ಬಳಕೆದಾರರ ಖಾಸಗಿಯ ಮಾಹಿತಿಯ ಅನಧಿಕೃತ ಕೊಯ್ಲು ನಡೆಸಿದೆ ಎಂಬ ಆರೋಪಕ್ಕೆ ಗುರಿಯಾಗಿರುವುದು ಫೇಸ್‌ ಬುಕ್‌ ಗೆ ಭಾರೀ ದೊಡ್ಡ ಕಳಂಕವಾಗಿ ಪರಿಣಮಿಸಿದೆ. 

ಫೇಸ್‌ ಬುಕ್‌ ಸಿಇಓ ಆಗಿರುವ ಮಾರ್ಕ್‌ ಝುಕರ್‌ಬರ್ಗ್‌, ಫೇಸ್‌ ಬುಕ್‌ನಿಂದ ತಪ್ಪಾಗಿದೆ; ನಾವದನ್ನು ಖಂಡಿತವಾಗಿಯೂ ಸರಿಪಡಿಸುತ್ತೇವೆ’ ಎಂದಿರುವರಲ್ಲದೆ ಅಮೆರಿಕ ಸಂಸತ್ತಿನ ಮುಂದೆ ಈ ವಿಶ್ವಾಸ ದ್ರೋಹದ ಪ್ರಕರಣಕ್ಕೆ ಸಂಬಂಧಪಟ್ಟು ಯಾವುದೇ ಪ್ರಶ್ನೆಗಳನ್ನು ಎದುರಿಸಲು ತಾನು ಇಷ್ಟಪಡುವುದಾಗಿ ಹೇಳಿದ್ದಾರೆ. 

“ಈಗಿನ್ನು ನಮ್ಮ ಜವಾಬ್ದಾರಿ ಏನೆಂದರೆ ಈ ರೀತಿಯ ತಪ್ಪುಗಳು ಭವಿಷ್ಯದಲ್ಲಿ ಎಂದೂ ಆಗದಂತೆ ಎಚ್ಚರವಹಿಸುವುದು. ನಾವು ಈಗಾಗಲೇ ಈ ಬಗ್ಗೆ ಬಹು ಮುಖ್ಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ; ಈ ರೀತಿಯ ತಪ್ಪುಗಳು ಮತ್ತೆ ಸಂಭವಸಿದಂತೆ ಎಚ್ಚರಿಕೆಯ ಕ್ರಮ ತೆಗೆದುಕೊಂಡಿದ್ದೇವೆ’ ಎಂದು ಝುಕರ್‌ ಬರ್ಗ್‌ ಹೇಳಿದರು. 

ಫೇಸ್‌ ಬುಕ್‌ ತನ್ನ ಬಳಕೆದಾರರ ಖಾಸಗಿತನದ ರಕ್ಷಣೆಗಾಗಿ ಸಹಸ್ರಾರು ಆ್ಯಪ್‌ಗ್ಳ ಕೂಲಂಕಷ ಪರೀಕ್ಷೆಯ ಪ್ರಕ್ರಿಯೆಯನ್ನು ಕೈಗೊಂಡಿದೆ ಎಂದವರು ಹೇಳಿದರು. 

33ರ ಹರೆಯದ ಝುಕರ್‌ಬರ್ಗ್‌ ಅವರು ಸುದೀರ್ಘ‌ ಫೇಸ್‌ ಬುಕ್‌ ಪೋಸ್ಟ್‌ ಮೂಲಕ ಖಾಸಗಿ ಮಾಹಿತಿ ಚೌರ್ಯದ ಹಗರಣದ ಬಗ್ಗೆ ಸ್ಪಷ್ಟೀಕರಣ ನೀಡಿದರು. 

ಫೇಸ್‌ ಬುಕ್‌ ಕಂಪೆನಿ ತಪ್ಪು ಮಾಡಿದೆ ಮತ್ತು ಇದನ್ನು ನಿವಾರಿಸುವ ನಿಟ್ಟಿನಲ್ಲಿ ತನ್ನ ನೀತಿಗಳನ್ನು ಸೂಕ್ತವಾಗಿ ಮಾರ್ಪಡಿಸಿದೆ ಎಂದು ಝುಕರ್‌ ಬರ್ಗ್‌ ಹೇಳಿದರು. 

“ಫೇಸ್‌ ಬುಕ್‌ ಆರಂಭಿಸಿದವನು ನಾನು. ಈ ವೇದಿಕೆಯಲ್ಲಿ ಏನೇ ಆದರೂ ಅದಕ್ಕೆ ನಾನು ಜವಾಬ್ದಾರನಾಗಿರುತ್ತೇನೆ. ನಮ್ಮ ಸಮುದಾಯದ ಹಿತ ರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಾನು ಗಂಭೀರನಾಗಿದ್ದೇನೆ’ ಎಂದು ಝುಕರ್‌ಬರ್ಗ್‌ ಹೇಳಿದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.