12-18 ವರ್ಷದವರಿಗೆ ಝೈಡಸ್ ಕ್ಯಾಡಿಲಾ ಲಸಿಕೆ ಸೆಪ್ಟೆಂಬರ್ ನಲ್ಲಿ ಲಭ್ಯ : ಎನ್.ಕೆ. ಆರೋರಾ
Team Udayavani, Jul 9, 2021, 3:56 PM IST
ನವ ದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಕೇಂದ್ರ ಸರ್ಕಾರ ಈಗ ಸಂಪೂರ್ಣವಾಗಿ ಲಸಿಕಾ ಅಭಿಯಾನದತ್ತ ಗಮನ ಹರಿಸುತ್ತಿದೆ.
ಲಸಿಕೆಗಳ ಪೂರೈಕೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ನಿರಂತರವಾಗಿ ಕಾರ್ಯ ನಿರ್ವಹಿಸಿತ್ತಿದ್ದು, ಮಕ್ಕಳಿಗ ಹಾಗೂ ಯುವಕರಿಗೆ ಲಸಿಕೆಗಳನ್ನು ನೀಡುವ ವಿಚಾರದಲ್ಲಿ ಪ್ರಾಯೋಗಿಕ ಪರೀಕ್ಷೆಗಳನ್ನು ಮಾಡುವುದರ ಸಲುವಾಗಿ ಕಾರ್ಯೋನ್ಮುಖವಾಗಿದೆ.
ಇದನ್ನೂ ಓದಿ : ಕೇಂದ್ರ ಸಂಪುಟದಲ್ಲಿ ರಾಜ್ಯಕ್ಕೆ 4 ಸಚಿವ ಸ್ಥಾನ : ಪ್ರಧಾನಿಯವರಿಗೆ ರಾಜ್ಯ ಬಿಜೆಪಿ ಅಭಿನಂದನೆ
ಸೆಪ್ಟೆಂಬರ್ ವೇಳೆಗೆ 12ರಿಂದ 18 ವರ್ಷ ವಯಸ್ಸಿನವರಿಗೆ ಝೈಡಸ್ ಕ್ಯಾಡಿಲಾ ಕೋವಿಡ್ ಲಸಿಕೆಯು ಲಭ್ಯವಾಗಲಿದೆ ಎಂದು ಲಸಿಕೆ ನಿರ್ವಹಣೆಗೆ ಸಂಬಂಧಿಸಿದ ರಾಷ್ಟ್ರೀಯ ತಜ್ಞರ ಸಮಿತಿ ಮುಖ್ಯಸ್ಥ ಡಾ. ಎನ್.ಕೆ. ಆರೋರಾ ಇಂದು (ಶುಕ್ರವಾರ, ಜುಲೈ 9) ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಸುದ್ದಿ ಸಂಸ್ಥೆ ಎನ್ ಡಿ ಟಿವಿ ಯೊಂದಿಗೆ ಮಾತನಾಡಿದ ಅವರು, ಝೈಡಸ್ ಕ್ಯಾಡಿಲಾ ಲಸಿಕೆಯ ತುರ್ತು ಬಳಕೆಗೆ ಕೆಲವೇ ವಾರಗಳಲ್ಲಿ ಅನುಮೋದನೆ ದೊರೆಯಲಿದೆ ಎಂದು ಅವರು ಹೇಳಿದ್ದಾರೆ.
ಇನ್ನು, ಸೆಪ್ಟೆಂಬರ್ ಅಂತ್ಯದ ವೇಳೆಗೆ 12 ರಿಂದ 18 ವರ್ಷ ವಯಸ್ಸಿನವರಿಗೆ ಕೋವ್ಯಾಕ್ಸಿನ್ ಲಸಿಕೆ ಕೂಡ ಲಭ್ಯವಾಗುವ ನಿರೀಕ್ಷೆ ಇದ್ದು, ಈ ವಯಸ್ಸಿನವರಿಗಾಗಿ ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.
ಜನವರಿ ಅಥವಾ ಫೆಬ್ರವರಿ ಸುಮಾರಿಗೆ ಎರಡು ವರ್ಷ ಮೇಲ್ಪಟ್ಟ ಮಕ್ಕಳಿಗೂ ಲಸಿಕೆಗಳು ಲಭ್ಯವಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಮನುಷ್ಯನ ಜೀವನದಲ್ಲಿ ಒಮ್ಮೆ ಹೂಬಿಡುವ ಬಿದಿರಿನ ವೈಶಿಷ್ಟ್ಯವೇನು ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ