ತುಳುನಾಡ ಸೇವಾ ಸಮಾಜ ಮೀರಾ-ಭಾಯಂದರ್‌ ಜಾನಪದ ನೃತ್ಯ ಸ್ಪರ್ಧೆ-ಸಮ್ಮಾನ


Team Udayavani, Mar 28, 2019, 5:57 PM IST

2703mum03

ಮುಂಬಯಿ: ಜಾತಿ, ಮತ, ಪಂಗಡಗಳನ್ನು ಮೀರಿ ನಿಂತ ತುಳು ಭಾಷೆಗೆ ಜನರನ್ನು ಸಂಘಟಿಸುವ ವಿಶೇಷ ಶಕ್ತಿ ಇದೆ. ಭಾರತೀಯ ಸಂಸ್ಕೃತಿಯೊಂದಿಗೆ ಸಮ್ಮಿಲಿತಗೊಂಡಿರುವ ಮನುಷ್ಯನ ವಿಕಾಸಕ್ಕೆ ಸಹಾಯವಾಗುವಂತಹ ಗುಣವನ್ನು ತುಳು ಸಂಸ್ಕೃತಿ ಹೊಂದಿದೆ.. ತುಳುವರು ಪ್ರಕೃತಿ ಮತ್ತು ಇತರ ಜೀವಿಗಳ ಸಂಬಂಧಗಳನ್ನು ನಂಬಿಕೆ, ನಡವಳಿಕೆ, ಆಚರಣೆಗಳ ಮೂಲಕ ಇಂದಿನ ಬದಲಾವಣೆಯ ಸಮಯದಲ್ಲೂ ಉಳಿಸಿಕೊಂಡಿ¨ªಾರೆ ಎಂದು ಜನಪ್ರಿಯ ಸಂಘಟಕ, ಬಂಟ್ಸ್‌ ಫೋರಂನ ಮೀರಾ ಭಾಯಂದರ್‌ ಇದರ ಸ್ಥಾಪಕ ಅಧ್ಯಕ್ಷ ಸಂತೋಷ್‌ ರೈ ಬೆಳ್ಳಿಪಾಡಿ ತಿಳಿಸಿದರು.

ಮಾ. 23ರಂದು ಸಂಜೆ ಮೀರಾರೋಡು ಪೂರ್ವದ ಜಹಗೀಡ್‌ ವೃತ್ತದ ಸಮೀಪದ ನಾರಾಯಣ ಗುರು ಸಭಾಗೃಹದಲ್ಲಿ ತುಳುನಾಡ ಸೇವಾ ಸಮಾಜ ಮೀರಾ ಭಾಯಂದರ್‌ ಇದರ ಸಂಸ್ಥಾಪಕ ದಿನಾಚರಣೆ, ವಿಶ್ವ

ಮಹಿಳಾ ದಿನಾಚರಣೆ, ಅರಸಿನ ಕುಂಕುಮ, ಸಮ್ಮಾನ ಮತ್ತು ಜಾನಪದ ನೃತ್ಯ ಸ್ಪರ್ಧೆಯ ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಆರಾಧನೆಗಳ ಬೀಡಾಗಿರುವ ತುಳುನಾಡು ಮಾನವೀಯ ಸಂಬಂಧಗಳ ಕೊಂಡಿಯಾಗಿದೆ. ಶ್ರೀಮಂತ ಬದುಕಿನ ತುಳು ಸಂಸ್ಕೃತಿಯನ್ನು ಶಾಶ್ವತಗೊಳಿಸುವ ತುಳುನಾಡ ಸೇವಾ

ಸಮಾಜದ ದುಡಿಮೆಗೆ ನಾವೆಲ್ಲ ಕೈ

ಜೋಡಿಸೋಣ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜರಗಿದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಇದರ ಮೀರಾ ಭಾಯಂದರ್‌ ಶಾಖೆ ಪ್ರಥಮ ಸ್ಥಾನ ಪಡೆದುಕೊಂಡಿತು. ಬಿಲ್ಲವರ ಅಸೋಸಿಯೋಶನ್‌ ಮಂಬಯಿ ಇದರ ಮೀರಾರೋಡ್‌ ಸ್ಥಳೀಯ ಸಮಿತಿಯು ದ್ವಿತೀಯ ಸ್ಥಾನಕ್ಕೆ ಭಾಜನವಾಯಿತು. ಬಂಟ್ಸ್‌ ಪೋರಂ ಮೀರಾ ಭಾಯಂದರ್‌ ಮೂರನೇ ಸ್ಥಾನವನ್ನು ತನ್ನದಾಗಿಸಿಕೋಡಿತು. ಚಿಣ್ಣರ ಬಿಂಬ ಮಕ್ಕಳ ಪಾಲಕರ ಭಾಯಂದರ್‌ ಶಿಬಿರ, ವಿಶ್ವ ಡಾನ್ಸ್‌ ಆಕಾಡೆಮಿ ಭಾಯಂದರ್‌ ಮತ್ತು ಕರ್ನಾಟಕ ಮಹಾಮಂಡಳ ಮೀರಾ ಭಾಯಂದರ್‌ ತಂಡಕ್ಕೆ ಸಮಾಧಾನಕರ ಬಹುಮಾನದೊಂದಿಗೆ ಗೌರವಿಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವಮಾನವ ಹಕ್ಕುಗಳ ಅಧ್ಯಕ್ಷ, ಸಮಾಜ ರತ್ನ, ಲಯನ್‌ ಡಾ| ಶಂಕರ್‌ ಕೆ. ಟಿ. ವಹಿಸಿದ್ದರು, ಮುಖ್ಯ ಅತಿಥಿಯಾಗಿ ಕರ್ನಾಟದ ಕೋ ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ವಸಾಯಿ ಇದರ ಕಾರ್ಯಾಧ್ಯಕ್ಷ ಭಾಸ್ಕರ ಕೆ. ಶೆಟ್ಟಿ, ಗೌರವ ಅತಿಥಿಯಾಗಿ ಮುಂಬಯಿ ಬಿಲ್ಲವರ ಅಸೋಸಿಯೇಶನಿನ ಮಾಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಶಕುಂತಲಾ ಕೋಟ್ಯಾನ್‌, ಮುಂಬಯಿ ಬಿಲ್ಲವರ ಅಸೋಸಿಯೇಶನಿನ ಮಾಹಿಳಾ ವಿಭಾಗದ ಮಾಜಿ ಉಪ ಕಾರ್ಯಾಧ್ಯಕ್ಷೆ ವಿಲಾಸಿನಿ ಸಾಲ್ಯಾನ್‌, ಉದ್ಯಮಿ ಶಂಕರ ಪೂಜಾರಿ, ಸಮ್ಮಾನಿತರಾದ ರಂಗ ಭೂಮಿ ಕಲಾವಿದೆಯರಾದ ಪ್ರತಿಮಾ ಬಂಗೇರ ಮತ್ತು ಸುನೀತಾ ಎ. ಸುವರ್ಣ, ಸಮಾಜ ಸೇವಕಿ ವಾಣಿ ಡಿ. ಶೆಟ್ಟಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭಜನ ತರಬೇತಿ ನೀಡಿದ ಭಾರತಿ ಉಡುಪ ಅವರನ್ನು ಗುರು ಕಾಣಿಕೆಯೊಂದಿಗೆ ಸತ್ಕರಿಸಲಾಯಿತು.

ಸಮ್ಮಾನ ಪತ್ರವನ್ನು ಕುಶಲಾ ಎಸ್‌ ಶೆಟ್ಟಿ, ರೋಹಿಣಿ ರೈ, ಶಾಲಿನಿ ಶೆಟ್ಟಿ ವಾಚಿಸಿದರು. ತುಳುನಾಡ ಸೇವಾ ಸಮಾಜದ ಅಧ್ಯಕ್ಷ ಡಾ|ರವಿರಾಜ ಸುವರ್ಣ ಸ್ವಾಗತಿಸಿ ಪರಿಚಯಿಸಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಅಮಿತಾ ಎಸ್‌. ಶೆಟ್ಟಿ ಅವರು ಸಿದ್ದಿ ಸಾಧನೆಗಳ ಬಗ್ಗೆ ವಿವರಿಸಿದರು. ಗೌರವಾಧ್ಯಕ್ಷ ಶಂಭು ಕೆ. ಶೆಟ್ಟಿ, ಕಾರ್ಯದರ್ಶಿ ಶೋಭಾ ಉಡುಪ, ಕೋಶಾಧಿಕಾರಿ ರವೀಂದ್ರ ಶೆಟ್ಟಿ ಸೂಡ, ಪದಾಧಿಕಾರಿಗಳಾದ ಲೀಲಾ ಡಿ. ಪೂಜಾರಿ, ರವಿ ಶೆಟ್ಟಿ ಶೃಂಗೇರಿ, ಬಿ. ಕೆ. ಶೆಟ್ಟಿ, ದಾûಾಯಿಣಿ , ರಾಮಚಂದ್ರ ಉಚ್ಚಿಲ್‌, ಶೈಲೇಶ್‌ ಉದ್ಯಾವರ ಅವರು ಅತಿಥಿಗಳನ್ನು ಗೌರವಿಸಿದರು.

ಸತ್ಯಪಾಲ್‌ ರೈ ಕಾರ್ಯಕ್ರಮ ನಿರ್ವಹಿಸಿ ದರು. ತೀರ್ಪುಗಾರರಾಗಿ ವಿನಯಾ ಭಟ್‌ ಮತ್ತು ಅನಿಲ್‌ ಸಸಿಹಿತ್ಲು ಸಹಕರಿಸಿದರು. ಪದಾಧಿಕಾರಿಗಳಾದ ವಸಂತ ಶೆಟ್ಟಿ, ನಾರಾಯಾಣ ಮೂಡಬಿದಿರೆ, ಜಯಪ್ರಕಾಶ್‌ ಪೂಜಾರಿ, ಜಯಾಲಕ್ಷ್ಮೀ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. ಭಜನೆ, ಅರಸಿನ ಕುಂಕುಮ, ವಿಜಯ ಶೆಟ್ಟಿ ಮೂಡುಬೆಳ್ಳೆ ಅವರಿಂದ ಸುಗಮ ಸಂಗೀತ, ವೈವಿಧ್ಯಮಯ ನೃತ್ಯ ಪ್ರದರ್ಶನಗೊಂಡಿತು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.