ಪುಣೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 105 ನೇ ಸಂಸ್ಥಾಪನಾ ದಿನಾಚರಣೆ


Team Udayavani, May 26, 2019, 5:19 PM IST

2501MUM06

ಪುಣೆ: ಕನ್ನಡ ಭಾಷೆಗೆ ನಮ್ಮ ಮೊದಲ ಆದ್ಯತೆ, ಕನ್ನಡ ನಮ್ಮ ಅನನ್ಯತೆ ಮತ್ತು ಅಸ್ಮಿತೆ ಆಗಿದೆ. ಆಂಗ್ಲ ಭಾಷೆ ನಮ್ಮ ಅನಿವಾರ್ಯತೆಯಾಗಿದೆ.ಆಂಗ್ಲ ಭಾಷೆ ಎಂಬ ಆಕ್ಟೊಪಸ್‌ ನುಂಗಿ ತನ್ನ ಕಬಂಧ ಬಾಹುಗಳಲ್ಲಿ ನಮ್ಮ ಕನ್ನಡ ಭಾಷೆಯ ಬುಡವನ್ನೇ ಕಿತ್ತುಹಾಕುತ್ತಿದೆ. ಇಂತಹಕಾಲಘಟ್ಟದಲ್ಲಿಹೊರನಾಡಿನಲ್ಲಿದ್ದು
ಕೊಂಡು ಕನ್ನಡವನ್ನು ಬೆಳೆಸುವ ಹುಮ್ಮಸ್ಸಿರುವ ಕನಡದ ಕಟ್ಟಾಳುಗಳು ಕನ್ನಡವನ್ನು ಉಳಿಸುವ ಪ್ರಯತ್ನದಲ್ಲಿನಿರತವಾಗಿರುವುದು ಶ್ಲಾಘನೀಯವಾಗಿದೆ. ಸಾಹಿತ್ಯ
ವೆಂದರೆ ಕೇವಲ ದೊಡ್ಡ ದೊಡ್ಡ ಶಬ್ದಗಳ
ಆಡಂಬರದ ಬರಹವಾಗೇಉಳಿಯದೆ,ದೊಡ್ಡ ಭಾಷಣ ಬಿಗಿಯುವಲ್ಲಿಗೆ ಸೀಮಿತವಾಗದೆ ಸಮಾಜದ ಹಿತದ ದೃಷ್ಟಿಯಿಂದ ನಿಜಾರ್ಥದಲ್ಲಿಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯ
ದೊಂದಿಗೆ ಇಲ್ಲಿನ ಕನ್ನಡಶಾಲೆಗಳನ್ನು ಉಳಿಸಿ
ಕೊಳ್ಳುವ ಕಾರ್ಯ ಆಗಬೇಕಾಗಿದೆ ಎಂದು ಪುಣೆ ಕನ್ನಡ ಸಂಘದ ಉಪಾಧ್ಯಕ್ಷೆ ಹಾಗೂ ಪುಣೆಯ ಸಾಹಿತಿ ಇಂದಿರಾ ಸಾಲ್ಯಾನ್‌ ಅಭಿಪ್ರಾಯಪಟ್ಟರು.

ಅವರು ಮೇ 13ರಂದು ಪುಣೆ ಕನ್ನಡ ಸಂಘದ ಡಾ| ಕಲ್ಮಾಡಿ ಶಾಮರಾವ್‌ ಕನ್ನಡ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಹಾರಾಷ್ಟ್ರ ಗಡಿನಾಡು ಘಟಕ ಮತ್ತು ಕನ್ನಡ ಸಂಘ ಪುಣೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 105ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿ, ಪುಣೆಯಲ್ಲಿ ಕನ್ನಡ ಸಂಘದ ಮೂಲಕ ಕನ್ನಡದ ಬಗ್ಗೆ ನಿರಂತರವಾಗಿ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಕನ್ನಡಿಗರೆಲ್ಲರೂ ನಮ್ಮ ಸುಂದರವಾದ ಭಾಷೆ, ಸಂಸ್ಕೃತಿ, ಸಾಹಿತ್ಯದ ಬಗ್ಗೆ ಅಭಿಮಾನವಿರಿಸಿಕೊಂಡು ನಾಡು ನುಡಿಯ ಸೇವೆಗೆ ಬದ್ಧರಾಗಬೇಕಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಸಾಧನೆ ಗಮನಾರ್ಹವಾಗಿದೆ ಎಂದರು.

ಕನ್ನಡ ಸಾಹಿತ್ಯಕ್ಕೆ ಪುಣೆ ಕನ್ನಡಿಗರ ಕೊಡುಗೆ ವಿಷಯದಲ್ಲಿ ಪುಣೆಯ ಹಿರಿಯ ಸಾಹಿತಿ ಹಾಗೂ ಮರಾಠಿ -ಕನ್ನಡ ಸ್ನೇಹವರ್ಧನ ಕೇಂದ್ರದ ಕಾರ್ಯದರ್ಶಿಗಳಾದ ಕೃ. ಶಿ. ಹೆಗಡೆ ಉಪನ್ಯಾಸ ನೀಡುತ್ತಾ, ಮರಾಠಿ ಹಾಗೂ ಕನ್ನಡದ ಬಾಂಧವ್ಯಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಇಲ್ಲಿನ ಸಾಂತ ಪರಂಪರೆಯಾಗಲಿ, ಶಿವಾಜಿ ಮಹಾರಾಜರ ಇತಿಹಾಸವೇ ಇರಲಿ, ಸಂಗೀತ ಕ್ಷೇತ್ರವೇ ಇರಲಿ, ಪಂಢರಾಪುರದ ವಿಠಲನೇ ಇರಲಿ ಪ್ರತಿಯೊಂದರಲ್ಲೂ ಕನ್ನಡ ಹಾಗೂ ಮರಾಠಿಯ ಚಾರಿತ್ರಿಕವಾದ ಕೊಡುಕೊಳ್ಳುವ ಇತಿಹಾಸದ ನಂಟನ್ನು ನಾವು ಕಾಣಬಹುದಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಪುಣೆ ಕನ್ನಡಿಗರ ಕೊಡುಗೆ ಅಪಾರವಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಪುಣೆಯ ಗಾಂಧಿ ವಾದಿ ಹಾಗೂ ಹಿರಿಯ ಸಾಹಿತಿ ಕೃಷ್ಣ ಇತ್ನಾಳ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡಪರ ಕಾರ್ಯ ಶ್ಲಾಘನೀಯವಾಗಿದೆ. ಸಾಂಸ್ಕೃತಿಕವಾಗಿ ನಮ್ಮನ್ನು ತೊಡಗಿಸಿಕೊಂಡರೆ ಭಾಷೆ ಹಾಗೂ ಸಾಹಿತ್ಯ ಉಳಿಯುವ ಕಾರ್ಯ ಆಗುವುದರಲ್ಲಿ ಸಂಶಯವಿಲ್ಲ. ಕೇರಳಿಗರು, ಉಡುಪಿ ಹಾಗೂ ದಕ್ಷಿಣ ಕನ್ನಡದ ಜನರು ಹೆಚ್ಚಾಗಿ ಸಾಂಸ್ಕೃತಿಕ ನಿಟ್ಟಿನಲ್ಲಿ ಬೆಳೆಸುತ್ತಾ ಬಂದಿರುವುದು ಉತ್ತಮ ಉದಾಹರಣೆಯಾಗಿದೆ ಎಂದರು.

ಡಾ| ಕಲ್ಮಾಡಿ ಶಾಮರಾವ್‌ ಕನ್ನಡ ಮಾಧ್ಯಮ ಹೈಸ್ಕೂಲ್‌ ಮುಖ್ಯೋಪಾಧ್ಯಾಯರಾದ ಚಂದ್ರಕಾಂತ ಹಾರಕುಡೆ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದ ಬಗ್ಗೆ ತಿಳಿದು ತುಂಬಾ ಸಂತೋಷವಾಯಿತು. ಹೊರನಾಡಿ ನಲ್ಲಿದ್ದುಕೊಂಡು ಕನ್ನಡದ ಕಾಯಕವನ್ನು ಯಾವುದೇ ರಾಜಕೀಯದ ಸೋಂಕಿಲ್ಲದೆ ನಿತ್ಯ ನಿರಂತರವಾಗಿ ತನ್ನಿಂತಾನೇ ಮಾಡುತ್ತಾ ಭಾಷಿಕ ಮೈತ್ರಿಯನ್ನು ಸಾರುತ್ತಿರುವ ಕಾರ್ಯವನ್ನು ಸಾಹಿತ್ಯಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮಾಡುತ್ತಿರುವುದಕ್ಕೆ ಹೆಮ್ಮೆ
ಪಡಬೇಕಾಗಿದೆ. ಯಾವುದೇ ಕಾರ್ಯ ಮಾಡಲು ಪ್ರಬಲ ಇಚ್ಛಾಶಕ್ತಿ ಅಗತ್ಯ, ಅದಿದ್ದರೆ ಕನ್ನಡದ ಕಾರ್ಯ ನಡೆಯುತ್ತಲೇ ಇರುತ್ತದೆ ಎಂದರು.

ಪುಣೆಯ ಪತ್ರಕರ್ತ ಕಿರಣ್‌ ಬಿ. ರೈ ಕರ್ನೂರು ಮಾತನಾಡಿ, ಮಹಾರಾಷ್ಟ್ರದಲ್ಲಿದ್ದು ಕೊಂಡು ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ವನ್ನು ಉಳಿಸಿ ಬೆಳೆಸುವ ಕಾರ್ಯ ಮಾಡುತ್ತಿರುವುದು ಅಭಿನಂದನಾರ್ಹವಾಗಿದೆ. ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಸವರಾಜ ಮಸೂತಿ ಯವರು ಪುಣೆಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನವನ್ನು ಏರ್ಪಡಿಸುವ ಆಸಕ್ತಿ ಹೊಂದಿ
¨ªಾರೆ. ಪುಣೆಯ ಕನ್ನಡಿಗರೆಲ್ಲರಿಗೂ ಅವರ ಕಾರ್ಯಕ್ಕೆ ಸಹಕಾರ ನೀಡೋಣ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಮಹಾರಾಷ್ಟ್ರ ಘಟಕ ಇದರ ಅಧ್ಯಕ್ಷರಾದ ಬಸವರಾಜ ಮಸೂತಿ
ಯವರು ಮಾತನಾಡುತ್ತಾ ಕನ್ನಡ ಸಾಹಿತ್ಯ ಪರಿಷತ್ತಿನ 105ನೇ ಸಂಸ್ಥಾಪನಾ ದಿನಾಚರಣೆಯನ್ನು ಪುಣ್ಯನಗರಿ ಪುಣೆಯಲ್ಲಿ ಆಚರಿಸಲು ಹೆಮ್ಮೆಯಾಗುತ್ತಿದೆ. ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿದ್ದುಕೊಂಡು ಕನ್ನಡದ ಪರ ಕಾರ್ಯಕ್ರಮಗಳನ್ನು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಹಮ್ಮಿಕೊಳ್ಳುತ್ತಾ ಬಂದಿದ್ದೇವೆ. ಅದೇ ರೀತಿ ಮುಂದಿನ ಸಾಹಿತ್ಯ ಸಮ್ಮೇಳನವನ್ನು ಪುಣೆಯಲ್ಲಿ ಹಮ್ಮಿಕೊಳ್ಳಲು ನಾವು ನಿರ್ಧರಿಸಿದ್ದೇವೆ. ಪುಣೆಯ ಕನ್ನಡಿಗರ ಸಂಘ ಸಂಸ್ಥೆಗಳೆಲ್ಲರ ಸಹಕಾರವನ್ನು ಕೋರಿ ಅವರೆಲ್ಲರ ಸಹಕಾರದಿಂದ ಸಮ್ಮೇಳನ ಮಾಡುವ ಬಗ್ಗೆ ಚಿಂತನೆ ನಡೆಸುತ್ತೇವೆ. ಪುಣೆ ಕನ್ನಡಿಗರೆಲ್ಲರೂ ಸಹಕಾರ ನೀಡುವರೆಂಬ ಭರವಸೆ ಇದೆ. ಈ ನಿಟ್ಟಿನಲ್ಲಿ ಮುಂದಿನ ದಿನ
ಗಳಲ್ಲಿ ಕಾರ್ಯಪ್ರವೃತ್ತರಾಗಲಿದ್ದೇವೆ ಎಂದರು.
ಪುಣೆ ಬಾಲಭಾರತಿಯ ಸಹಾಯಕ ವಿಶೇಷಾಧಿಕಾರಿ ಆರ್‌. ಎಂ. ಗಣಾಚಾರಿ, ಪುಣೆ ಕನ್ನಡ ಸಂಘದ ಜನಸಂಪರ್ಕಾಧಿಕಾರಿ ರಾಮದಾಸ ಆಚಾರ್ಯ ಉಪಸ್ಥಿತರಿದ್ದರು. ಗೌರವ ಕೋಶಾಧಿಕಾರಿಗಳಾದ ಶಿವಚಲ ಕುಮಾರ ಸಾಲಿಮಠ ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿಗಳಾದ ಸುನೀಲ್‌ ಗಿರಿಮಲ್ಲಪ್ಪ ಭರಮಾ ವಂದನಾರ್ಪಣೆಗೈದರು. ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಮಲ್ಲಿನಾಥ ವಚ್ಚೆ, ಮಲ್ಲಿಕಾರ್ಜುನ, ಪ್ರಕಾಶ ಪ್ರಧಾನ, ಮಾಲಕಣ್ಣ ಘವಾರಿ, ಮಹಾಂತೇಶ, ಅಪ್ಪಾರಾಮ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.