ಸಂಸ್ಥೆಯಿಂದ 12ನೇ ದಹಿಸರ್‌ ದಸರಾ ಮಹೋತ್ಸವ


Team Udayavani, Oct 4, 2019, 6:55 PM IST

mumbai-tdy-1

ಮುಂಬಯಿ, ಅ. 3: ಗೌಡ ಸಾರಸ್ವತ್‌ ಬ್ರಾಹ್ಮಣ್‌ ಸಭಾ ದಹಿಸರ್‌-ಬೊರಿವಲಿ ಸಂಸ್ಥೆಯ ವಾರ್ಷಿಕ ನವರಾತ್ರಿ ಉತ್ಸವವು ಸೆ. 29ರಂದು ಪ್ರಾರಂಭಗೊಂಡಿದ್ದು, ಅ. 8ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ.

ಕುಲಗುರು ದೈವಕ್ಯ ಶ್ರೀಮದ್‌ ಸುಧೀಂದ್ರ ತೀರ್ಥ ಸ್ವಾಮೀಜಿಗಳ ಕೃಪೆ ಮತ್ತು ಶ್ರೀ ಸಂಸ್ಥಾನ ಕಾಶೀ ಮಠಾಧೀಶ ಶ್ರೀಮದ್‌ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದಗಳೊಂದಿಗೆ ದಹಿಸರ್‌ ಪೂರ್ವದ ಎನ್‌. ಎಲ್‌. ಕಾಂಪ್ಲೆಕ್ಸ್‌ನ ಸಾರಸ್ವತ ಕಲ್ಚರಲ್‌ ಆ್ಯಂಡ್‌ ರಿಕ್ರಿಯೇಷನ್‌ ಸೆಂಟರ್‌ ಜಿಎಸ್‌ಬಿ ಗಾರ್ಡನ್‌ನ ಮಾಧವೇಂದ್ರ ಸಭಾ ಮಂಟಪದಲ್ಲಿ ನಿರ್ಮಾಣಗೊಂಡಿರುವ ಪುಷ್ಪಾಲಂಕೃತ ಭವ್ಯ ಮಂಟಪದಲ್ಲಿ ರಜತ ಪ್ರಭಾವಳಿಯೊಂದಿಗೆ ಸ್ವರ್ಣಮುಕುಟ, ವಜ್ರ, ಚಿನ್ನಾಭರಣಗಳೊಂದಿಗೆ ಮಾತೆ ದುರ್ಗಾದೇವಿಯನ್ನು ಆರಾಧಿಸಲಾಗುತ್ತಿದೆ. ಉತ್ಸವದ ಒಂಬತ್ತು ದಿನಗಳಲ್ಲೂ ದೇವಿಯನ್ನು ವಿಭಿನ್ನ ರೂಪಳಿಂದ ಶೃಂಗಾರಿಸಲಾಗುತ್ತಿದೆ.

ಸರಸ್ವತಿದೇವಿ, ಶಾಂತಾದುರ್ಗಾ, ಚಾಮುಂಡೇಶ್ವರಿ, ಅನ್ನಪೂರ್ಣೆಶ್ವರಿ ಮಾತೆಯನ್ನು ಪೂಜಿಸಲಾಯಿತು. ಅ. 3ರಂದು ಲಕ್ಷ್ಮೀ ನಾರಾಯಣ ಹೃದಯ ಹವನ, ಪಂಚಾಮೃತ ಅಭಿಷೇಕ, ಚಂಡಿಕಾ ಹವನ, ತುಲಾಭಾರ ಸೇವೆ, ಪಂಚನೈವೇದ್ಯ ಮಹಾಭೋಗ, ಮಧ್ಯಾಹ್ನ ಪೂಜೆ, ದುರ್ಗಾ ನಮಸ್ಕಾರ, ದೀಪಾರಾಧನೆ, ಪುಷ್ಪಾಲಂಕಾರ ಸೇವೆ, ರಂಗಪೂಜೆ, ರಾತ್ರಿ ಪೂಜೆ ಇತ್ಯಾದಿಗಳೊಂದಿಗೆ ಸಂಪ್ರದಾಯಿಕವಾಗಿ ಚಂಡಿಕಾ ದೇವಿಯನ್ನು ಆರಾಧಿಸಲಾಯಿತು. ವೇದಮೂರ್ತಿ ಲಕ್ಷ್ಮೀ ನಾರಾಯಣ ಭಟ್‌ ಅವರು ವಿವಿಧ ಪೂಜಾಧಿಗಳನ್ನು ನೆರವೇರಿಸಿ ಸದ್ಭಕ್ತರನ್ನು ಹರಸಿದರು. ಪುರೋಹಿತರಾದ ವೇದ ಮೂರ್ತಿ ಉಲ್ಲಾಸ್‌ ಭಟ್‌, ವೇದಮೂರ್ತಿ ಮಂಜುನಾಥ್‌ ಪುರಾಣಿಕ್‌, ವೇದಮೂರ್ತಿ ಪ್ರಶಾಂತ್‌ ಭಟ್‌, ವೇದಮೂರ್ತಿ ವಿನಾಯಕ ಭಟ್‌, ವೇದಮೂರ್ತಿ ಹರೀಶ್‌ ಭಟ್‌ ಬೆಳಗಾವಿ, ಮತ್ತಿತರ ವಿದ್ವಾನರು ಪೂಜಾಧಿಗಳ ಸಹಭಾಗಿತ್ವ ವಹಿಸಿದ್ದರು. ರಾಜಾರಾವ್‌ ದಂಪತಿ ಹಾಗೂ ಎಚ್‌. ಪಿ. ಪ್ರಭು ದಂಪತಿ ಪೂಜಾಧಿಗಳ ಯಜಮಾನತ್ವ ವಹಿಸಿದ್ದರು.

ಜಿಎಸ್‌ಬಿ ಸಭಾದ ಸಂಚಾಲಕರಾದ ಕೆ. ಶ್ರೀನಿವಾಸ ಪ್ರಭು, ಜಿ. ಡಿ. ರಾವ್‌, ಗಣೇಶ್‌ ವಿ. ಪೈ, ಶೋಭಾ ವಿ. ಕುಲ್ಕರ್ಣಿ, ಸುಗುಣಾ ಕೆ. ಕಾಮತ್‌, ಗೌರವ ಕಾರ್ಯಾಧ್ಯಕ್ಷ ಕೆ. ಆರ್‌. ಮಲ್ಯ, ಅಧ್ಯಕ್ಷ ಎಂ. ಉದಯ ಪಡಿಯಾರ್‌, ಉಪಾಧ್ಯಕ್ಷ ಸಾಣೂರು ಮನೋಹರ್‌ ವಿ. ಕಾಮತ್‌, ಗೌರವ ಪ್ರಧಾನ ಕಾರ್ಯದರ್ಶಿ ವಿಷ್ಣು ಆರ್‌. ಕಾಮತ್‌, ಗೌರವ ಕೋಶಾಧಿಕಾರಿ ಮೋಹನ್‌ ಎ. ಕಾಮತ್‌, ಜೊತೆ ಕಾರ್ಯದರ್ಶಿಗಳಾದ ಗುರುಪ್ರಸಾದ್‌ ವಿ. ಪೈ ಮತ್ತು ಜಯೇಶ್‌ ಎಚ್‌. ಪ್ರಭು, ಜತೆ ಕೋಶಾಧಿಕಾರಿ ಪಿ. ಎಸ್‌. ಕಾಮತ್‌ ಹಾಗೂ ಸದಸ್ಯರ ಸೇವೆಯೊಂದಿಗೆ ನಡೆಯುತ್ತಿರುವ ಈ ಉತ್ಸವದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಸೇವಾಕರ್ತರು, ಸಾವಿರಾರು ಭಕ್ತರು ಆಗಮಿಸಿ ಗಂಧಪ್ರಸಾದ ಸ್ವೀಕರಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.

 

ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.