ನಾರಾಯಣಗುರುಗಳ 167ನೇ ಜಯಂತ್ಯುತ್ಸವ ಆಚರಣೆ
ಬಿಲ್ಲವರ ಅಸೋಸಿಯೇಶನ್ ವಿಕ್ರೋಲಿ-ಕಾಂಜೂರ್ ಮಾರ್ಗ ಸ್ಥಳೀಯ ಸಮಿತಿ
Team Udayavani, Sep 1, 2021, 2:03 PM IST
ವಿಕ್ರೋಲಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ವಿಕ್ರೋಲಿ-ಕಾಂಜೂರ್ಮಾರ್ಗ ಸ್ಥಳೀಯ ಸಮಿತಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ಆ. 28ರಂದು ವಿಕ್ರೋಲಿ ಪೂರ್ವದ ಸ್ಥಳೀಯ ಸಮಿತಿಯ ಕಚೇರಿಯಲ್ಲಿ ನಡೆಯಿತು.
ಸಂಜೆ 5ರಿಂದ ದೀಪ ಪ್ರಜ್ವಲನೆಯೊಂದಿಗೆ ಓಂ ನಮೋ ನಾರಾಯಣ ನಮೋ ಶಿವಾಯ ಜಪ ಪ್ರಾರಂಭಗೊಂಡಿತು. ಮಂಜುನಾಥ್ ಶಾಂತಿ ಅವರು ಗುರುಪೂಜೆಯನ್ನು ವಿಧಿವತ್ತಾಗಿ ನೆರವೇರಿಸಿದರು. ಪೂಜಾ ಕೈಂಕರ್ಯವನ್ನು ಸ್ಥಳೀಯ ಸಮಿತಿಯ ಗೌರವ ಕೋಶಾಧಿಕಾರಿ ಜಗಜೀವನ್ ಪೂಜಾರಿ ಮತ್ತು ಸರ್ವಾಣಿ ಜೆ. ಪೂಜಾರಿ ನೆರವೇರಿಸಿದರು. ಶ್ರೀ ಬ್ರಹ್ಮಲಿಂಗೇಶ್ವರ ಭಜನ ಮಂಡಳಿ ಭಾಂಡೂಪ್ ಮತ್ತು ಬಿಲ್ಲವರ ಅಸೋಸಿಯೇಶನ್ ವಿಕ್ರೋಲಿ-ಕಾಂಜೂರ್ಮಾರ್ಗ ಸ್ಥಳೀಯ ಸಮಿತಿಯಿಂದ ಭಜನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ರಾತ್ರಿ 8ರಿಂದ ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿತರಣೆ ನಡೆಯಿತು. ಉಪಾಧ್ಯಕ್ಷೆ ನಳಿನಿ ಸುವರ್ಣ, ಹರ್ಷಾ, ಪೂಜಾ ಇವರ ವತಿಯಿಂದ ಅನ್ನಸಂತರ್ಪಣೆ ನೆರವೇರಿತು. ಸಮಿತಿಯ ಗೌರವಾಧ್ಯಕ್ಷ ಕೆ. ಎಂ. ಮಾಬಿಯನ್, ಕಾರ್ಯಾಧ್ಯಕ್ಷ ರಾಘವ ಕುಂದರ್, ಗೌರವ ಪ್ರಧಾನ ಕಾರ್ಯದರ್ಶಿ ಉಮೇಶ್ ಪೂಜಾರಿ, ಸದಸ್ಯರಾದ ದೇವದಾಸ್ ಸನಿಲ್, ಸಂಜೀವ ಪೂಜಾರಿ, ನಾರಾಯಣ ಪೂಜಾರಿ, ರಮೇಶ್ ಪೂಜಾರಿ, ಸುರೇಶ್ ಮಾಬಿಯಾನ್, ಗೋಪಾಲ್ ಪೂಜಾರಿ, ಸುರೇಶ್ ಪೂಜಾರಿ, ಕಿರಣ್ ಪೂಜಾರಿ, ವಿಮಲಾ ಆರ್. ಕುಂದರ್, ವಿದ್ಯಾ ಸುರೇಶ್ ಕೋಟ್ಯಾನ್, ಬೇಬಿ ಪೂಜಾರಿ, ಶ್ವೇತಾ ಆರ್. ಪೂಜಾರಿ, ಮನೋರಮಾ ಜಯಂತಿ ಐಲ್, ಪ್ರಮೀಳಾ ಆರ್. ಪೂಜಾರಿ, ಜಲಜಾ, ಅನುಷಾ, ಲತಾ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ:9 ವಾರ್ಡ್ಗಳ ಗೆಲುವಿನ ಕಟ್ಟೆ ಹತ್ತುವವರಾರು?
ಮುಖ್ಯ ಅತಿಥಿಗಳಾಗಿ ಕೇಂದ್ರ ಕಚೇರಿಯ ಪರವಾಗಿ ಗೌರವ ಕೋಶಾಧಿಕಾರಿ ರಾಜೇಶ್ ಬಂಗೇರ ಉಪಸ್ಥಿತರಿದ್ದರು. ಅತಿಥಿಗಳಾಗಿ ಹೊಟೇಲ್ ಉದ್ಯಮಿಗಳಾದ ಹೇಮಂತ್ ಸಾಲ್ಯಾನ್, ವಿಕ್ರೋಲಿ ಕನ್ನಡ ಸಂಘದ ಅಧ್ಯಕ್ಷ ಸತೀಶ್ ಐಲ್, ಗೌರವ ಪ್ರಧಾನ ಕಾರ್ಯದರ್ಶಿ ಉದಯ್ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್ ಶೆಟ್ಟಿ, ವಿಕ್ರೋಲಿ ಬಂಟ್ಸ್ ಸಂಘದ ಅಧ್ಯಕ್ಷ ಗಣೇಶ್ ಶೆಟ್ಟಿ, ಗೌರವ ಕಾರ್ಯದರ್ಶಿ ಯುಗಾನಂದ್ ಶೆಟ್ಟಿ, ಶಿವ ಟೇಲರ್ ಇದರ ಮಾಲಕ ಶಿವರಾಂ ಸಾಲ್ಯಾನ್, ನಂದಿನಿ ಟೈಲರ್ ಮಾಲಕ ನವೀನ್ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ಅತಿಥಿ-ಗಣ್ಯರನ್ನು ಸಮಿತಿಯ ಪದಾಧಿಕಾರಿಗಳು ಪ್ರಸಾದವನ್ನಿತ್ತು ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ