ಮೊಗವೀರ ವ್ಯವಸ್ಥಾಪಕ ಮಂಡಳಿ ಶಿಕ್ಷಣ ಸಂಕುಲಕ್ಕೆ 2 ಪ್ರಶಸ್ತಿ
Team Udayavani, Mar 16, 2018, 4:38 PM IST
ಮುಂಬಯಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮುಂಬಯಿ ಮಹಾ ನಗರದ ಹಿರಿಯ ಸಾಮಾಜಿಕ ಸಂಸ್ಥೆ ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಸಂಚಾಲಿತ ಅಂಧೇರಿ ಶಿಕ್ಷಣ ಸಂಕುಲದಲ್ಲಿರುವ ಹೈಸ್ಕೂಲ್ ವಿಭಾಗದ ಶಾರೀರಿಕ ಶಿಕ್ಷಕಿ ಸುಮಂಗಳಾ ಉಚ್ಚಿಲ್ ಇವರಿಗೆ ಮಹಾರಾಷ್ಟ್ರ ಸರಕಾರದ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ಕೊಡಮಾಡುವ ಬಾರ್ ಟು ಮೆಡಲ್ ಆಫ್ ಮೆರಿಟ್ ಅವಾರ್ಡ್ ಲಭಿಸಿದೆ.
ಮಹಾರಾಷ್ಟ್ರ ರಾಜ್ಯಪಾಲ ಸಿ. ವಿದ್ಯಾ ಸಾಗರ್ ರಾವ್ ಅವರ ದಿವ್ಯ ಹಸ್ತದಿಂದ ಪ್ರಶಸ್ತಿ ಯನ್ನು ಇತ್ತೀಚೆಗೆ ಸುಮಂಗಳಾ ಉಚ್ಚಿಲ್ ಇವರು ಸ್ವೀಕರಿಸಿದರು. ಕಳೆದ ಮೂವತ್ತು ವರ್ಷಗಳಿಗಿಂತಲೂ ಅಧಿಕ ಕಾಲದಿಂದ ಇವರು ಸೇವೆಸಲ್ಲಿಸುತ್ತಿದ್ದು, ಇವರ ಸಿದ್ಧಿ- ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನಿಸಲಾಯಿತು.
ಎಂವಿಎಂ ಶಿಕ್ಷಣ ಸಂಕುಲದ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಲತಾ ಕರ್ಕೇರ ಇವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶೇಷ ಸಾಧನೆಗಾಗಿ ಪ್ರಸ್ತುತ ವರ್ಷದ ಮುಂಬಯಿ ಮಹಾನಗರ ಪಾಲಿಕೆ ಶಿಕ್ಷಣ ಇಲಾಖೆಯ ಪೌರ ಪ್ರಶಸ್ತಿಯನ್ನು ಪಡೆದಿದ್ದಾರೆ. ಇವರಿಗೆ ಉತ್ತಮ ಶಿಕ್ಷಕಿ ಎಂಬ ಬಿರುದಿನೊಂದಿಗೆ ಪೌರ ಪ್ರಶಸ್ತಿಯನ್ನು ಇತ್ತೀಚೆಗೆ ನೀಡಿ ಗೌರವಿಸಲಾಗಿದೆ. ಕಳೆದ 27 ವರ್ಷಗಳಿಂದ ಲತಾ ಕರ್ಕೇರ ಇವರು ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮಹಾಪೌರ ವಿಶ್ವನಾಥ್ ಮಹಾದೇಶ್ವರ್ ಇವರು ಮಹಾನಗರ ಪಾಲಿಕೆಯ ವತಿಯಿಂದ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ