29ನೇ ವಾರ್ಷಿಕೋತ್ಸವ, ರಥೋತ್ಸವ


Team Udayavani, Feb 19, 2021, 8:23 PM IST

29th Anniversary

ಮುಂಬಯಿ: ನೆರೂಲ್‌ ಸೆಕ್ಟರ್‌ 11ರಲ್ಲಿನ ಶ್ರೀ ಶನೀಶ್ವರ ದೇವಸ್ಥಾನದ 29ನೇ ವಾರ್ಷಿಕೋತ್ಸವ ಮತ್ತು ರಥೋತ್ಸವವು
ಫೆ. 18ರಂದು ಪ್ರಾರಂಭಗೊಂಡಿದ್ದು, 21ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ
ಗಳೊಂದಿಗೆ ಜರಗಲಿದೆ.

ಕಳತ್ತೂರು ಉದಯ ತಂತ್ರಿವರ್ಯರ ಪೌರೋಹಿತ್ಯದಲ್ಲಿ ಮಂದಿರದ ಪ್ರಧಾನ ಅರ್ಚಕ ಸೂರಜ್‌ ಭಟ್‌ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ. ಫೆ. 19ರಂದು ಬೆಳಗ್ಗೆ 9ರಿಂದ ಶ್ರೀ ಮಹಾಗಣಪತಿ ಹಾಗೂ ಶ್ರೀ ವೀರಾಂಜನೇಯ ಸ್ವಾಮಿಗೆ ನವಕ ಪ್ರದಾನ ಹೋಮ, ಅಪರಾಹ್ನ 4ರಿಂದ ಮಹಿಳಾ ವಿಭಾಗದ ಸದಸ್ಯೆಯರಿಂದ ಅರಸಿನ ಕುಂಕುಮ ಕಾರ್ಯಕ್ರಮ, ರಾತ್ರಿ 8ರಿಂದ ಶ್ರೀ ಮಹಾಗಣಪತಿ ಹಾಗೂ ಶ್ರೀ ವೀರಾಂಜನೇಯ ಸ್ವಾಮಿಗೆ ರಂಗಪೂಜೆ, ಬಳಿ ಉತ್ಸವ ಜರಗಲಿದೆ.

ಫೆ. 20ರಂದು ಬೆಳಗ್ಗೆ 9ರಿಂದ ಮುಖ್ಯಪ್ರಾಣ ಸ್ವಾಮಿಗೆ ವಾಯುಸ್ತುತಿ, ಪುರಶ್ಚರಣ ಹವನ, ಸಗ್ರಹಮುಖ ಶನಿಶಾಂತಿ ಹವನ, ಅಪರಾಹ್ನ 4ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ, ರಾತ್ರಿ 8ರಿಂದ ಬಲಿ ಉತ್ಸವ, ಕವಾಟ ಬಂಧನ ನಡೆಯಲಿದೆ. ಫೆ. 21ರಂದು ಮುಂಜಾನೆ 6ರಿಂದ ಕವಾಟೋದ್ಘಾಟನೆ, ನವಕ ಪ್ರದಾನ ಹವನ, ಪೂರ್ವಾಹ್ನ 11ರಿಂದ ಮಹಾಪೂಜೆ, ಬಲಿ, ರಥಾರೋಹಣ, ಪಲ್ಲಪೂಜೆ, ಅನ್ನಸಂತರ್ಪಣೆ, ಸಂಜೆ 6ರಿಂದ ಬಲಿ ಉತ್ಸವ, ಅವಭೃತ ಸ್ನಾನ, ರಾತ್ರಿ 8ರಿಂದ ಮಹಾಆರತಿ, ಅನ್ನಸಂತರ್ಪಣೆ ನೆರವೇರಲಿದೆ.

ಫೆ. 22ರಂದು ಬೆಳಗ್ಗೆ 9ರಿಂದ ನವಕ ಪ್ರದಾನ ಹೋಮ, ಸಂಪ್ರೋಕ್ಷಣೆ, ತೀರ್ಥ ಪ್ರಸಾದ ವಿತರಣೆ, ಸಂಜೆ 4.30ರಿಂದ ಶ್ರೀ ಶನೀಶ್ವರ ಮಂದಿರದ 29 ನೇ ಹಾಗೂ ರಂಗಭೂಮಿ ಫೈನ್‌ಆರ್ಟ್ಸ್ ನವಿಮುಂಬಯಿ ಇದರ 30ನೇ ವಾರ್ಷಿಕೋತ್ಸವ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮವಾಗಿ ರಂಗಭೂಮಿ ಫೈನ್‌ಆರ್ಟ್ಸ್ ಇದರ ಕಲಾವಿದರಿಂದ ನೃತ್ಯ ವೈವಿಧ್ಯ, ತಾರಾ ಬಂಗೇರ ರಚಿಸಿ, ನಿರ್ದೇಶಿಸಿದ “ಉಂದುವೇ ಜೀವನ’ ತುಳು ಸಾಮಾಜಿಕ ನಾಟಕ ಪ್ರದರ್ಶನಗೊಳ್ಳಲಿದೆ.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ. ಡಿ. ಶೆಟ್ಟಿ, ಪನ್ವೇಲ್‌ ಮಹಾನಗರ ಪಾಲಿಕೆಯ ಸ್ಥಾಯೀ ಸಮಿತಿಯ ಅಧ್ಯಕ್ಷ ಸಂತೋಷ್‌ ಜಿ. ಶೆಟ್ಟಿ ಅವರನ್ನು ಮಂದಿರದ ವತಿಯಿಂದ ಸಮ್ಮಾನಿ ಸಲಾಗುವುದು. ಕೋವಿಡ್‌ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕಾರ್ಯಕ್ರಮವು ಜರಗಲಿದ್ದು, ಭಕ್ತರು ಸಹಕರಿಸುವಂತೆ ಮಂದಿರದ ಕಾರ್ಯಾಧ್ಯಕ್ಷ ಸಂತೋಷ್‌ ಡಿ. ಶೆಟ್ಟಿ, ಅಧ್ಯಕ್ಷ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ, ಉಪಾಧ್ಯಕ್ಷ ಗೋಪಾಲ್‌ ವೈ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ವಿ. ಕೆ. ಸುವರ್ಣ, ಜತೆ ಕಾರ್ಯದರ್ಶಿ ಜಯಕರ ಬಿ. ಪೂಜಾರಿ, ಗೌರವ ಕೋಶಾಧಿಕಾರಿ ವಿಶ್ವನಾಥ ಕೆ. ಪೂಜಾರಿ, ಜತೆ ಕೋಶಾಧಿಕಾರಿ ಆದ್ಯಪಾಡಿಗುತ್ತು ಕರುಣಾಕರ ಎಸ್‌. ಆಳ್ವ, ವಿಶ್ವಸ್ಥರಾದ ಎನ್‌. ಡಿ. ಶೆಣೈ, ಪುನೀತ್‌ ಕುಮಾರ್‌ ಆರ್‌. ಶೆಟ್ಟಿ, ಪ್ರಭಾಕರ ಎಸ್‌. ಹೆಗ್ಡೆ, ಅನಿಲ್‌ ಕುಮಾರ್‌ ಹೆಗ್ಡೆ, ಕೃಷ್ಣ ಎಂ. ಪೂಜಾರಿ, ದಾಮೋದರ ಶೆಟ್ಟಿ, ದಯಾನಂದ ಶೆಟ್ಟಿ, ತಾರಾನಾಥ ಶೆಟ್ಟಿ, ಪ್ರಧಾನ ಅರ್ಚಕ ಸೂರಜ್‌ ಭಟ್‌, ಭಜನ ಮಂಡಳಿಯ ಅಧ್ಯಕ್ಷ ಜಯರಾಮ ಬಿ. ಪೂಜಾರಿ, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಸ್ವರ್ಣಲತಾ ಡಿ. ಶೆಟ್ಟಿ, ಉಪಾಧ್ಯಕ್ಷೆ ಸರೋಜಿನಿ ಜೆ. ಪೂಜಾರಿ, ಸಲಹಾ
ಸಮಿತಿಯ ಪ್ರಕಾಶ್‌ ಭಂಡಾರಿ, ಕೆ. ಡಿ. ಶೆಟ್ಟಿ, ಸದಾನಂದ ಡಿ. ಶೆಟ್ಟಿ, ಎನ್‌. ಕೆ. ಪೂಜಾರಿ, ಜಯರಾಮ ಪೂಜಾರಿ, ಕೃಷ್ಣ ಐ. ಕೋಟ್ಯಾನ್‌, ಪೂಜಾ ಸಮಿತಿ, ಮಹಿಳಾ ವಿಭಾಗ, ಸರ್ವಸದಸ್ಯರು, ಅರ್ಚಕ ವೃಂದದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.