ಗ್ರಾಹಕಸ್ನೇಹಿ ಸೇವೆಯಿಂದ ಸೊಸೈಟಿ ಅಭಿವೃದ್ಧಿಯತ್ತ: ರತ್ನಾಕರ ಶೆಟ್ಟಿ ಮುಂಡ್ಕೂರು

ಬಂಟರ ಸಂಘ ಮಾತೃಭೂಮಿ ಕೋ-ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ 32ನೇ ವಾರ್ಷಿಕ ಮಹಾಸಭೆ

Team Udayavani, Mar 9, 2021, 6:28 PM IST

ಗ್ರಾಹಕಸ್ನೇಹಿ ಸೇವೆಯಿಂದ ಸೊಸೈಟಿ ಅಭಿವೃದ್ಧಿಯತ್ತ: ರತ್ನಾಕರ ಶೆಟ್ಟಿ ಮುಂಡ್ಕೂರು

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಸಂಚಾಲಕತ್ವದ ಮಾತೃಭೂಮಿ ಕೋ-ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ಲಿಮಿಟೆಡ್‌ ಇದರ 32ನೇ ವಾರ್ಷಿಕ ಮಹಾಸಭೆಯು ಮಾ. 7ರಂದು ಮಾತೃಭೂಮಿಯ ಕೋ-ಆಪರೇಟಿವ್‌ ಸೊಸೈಟಿಯ ಕಾರ್ಯಾಧ್ಯಕ್ಷ ಮುಂಡ್ಕೂರು ರತ್ನಾಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕುರ್ಲಾ ಪೂರ್ವದ ಬಂಟರ ಭವನದ ಸಭಾಗೃಹದಲ್ಲಿ ನಡೆಯಿತು.

ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಝೂಮ್‌ಆ್ಯಪ್‌ ಮುಖಾಂತರ ಸದಸ್ಯರಿಗೆ ಪಾಲ್ಗೊ ಳ್ಳಲು ಅವಕಾಶ ನೀಡಲಾಗಿತ್ತು. ಪ್ರಾರಂಭದಲ್ಲಿ ಮುಂಡ್ಕೂರು ರತ್ನಾಕರ ಶೆಟ್ಟಿ ದೀಪಪ್ರಜ್ವಲಿಸಿ ಉದ್ಘಾ ಟಿಸಿ ಮಾತನಾಡಿ, ಸಂಪೂರ್ಣ ತೃಪ್ತಿಕರವಾದ ಸೇವೆ ನೀಡುವುದ ರೊಂದಿಗೆ ಬ್ಯಾಂಕ್‌ಗಳು ಗ್ರಾಹಕರಿಗೆ ನೀಡುವ ಸೇವೆ ರೀತಿಯಲ್ಲಿ ಸಂಪೂರ್ಣ ಸೌಲಭ್ಯಗಳನ್ನು ಮಾತೃ ಭೂಮಿ ಕೋ-ಆಪರೇಟಿವ್‌ ಸೊಸೈಟಿ ನೀಡುತ್ತಿದೆ. ಈ ಉದ್ದೇಶ ದಿಂದಲೇ ಸಂಸ್ಥೆಯ ಕಾರ್ಯ ವ್ಯಾಪ್ತಿಯನ್ನು ಮುಂಬಯಿ ಮಹಾನಗರ, ಉಪನಗರದ ವಿವಿಧ ಕಡೆಗಳಲ್ಲಿ ಮಾತ್ರವಲ್ಲದೆ ಥಾಣೆ, ಕಲ್ಯಾಯ್‌, ಪುಣೆ, ನಾಸಿಕ್‌, ರಾಯ ಘಡ ಜಿಲ್ಲೆಗಳಲ್ಲೂ ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಕೋವಿಡ್‌  ಸಂದರ್ಭದಲ್ಲೂ ಮಾತೃ ಭೂಮಿ  ಸೊಸೈಟಿ ಗ್ರಾಹಕ ರಿಗೆ ಉತ್ತಮ ಸೇವೆಯನ್ನು ನೀಡುವುದ ರೊಂದಿಗೆ ಹೆಚ್ಚಿನ  ಠೇವಣಿ ಸಂಗ್ರಹಿ ಸುವಲ್ಲೂ ಯಶಸ್ವಿಯಾಗಿದೆ. ಅಗತ್ಯ ಇರುವವರಿಗೆ ಠೇವಣಿಯನ್ನು ಹಿಂದಿರುಗಿಸಲಾಗಿದೆ. ಈ ವರ್ಷ ಗ್ರಾಹಕರಿಗೆ ಶೇ. 10ರಷ್ಟು ಡಿವಿ ಡೆಂಡ್‌ ಘೋಷಿಸಲಾಗಿದೆ. ಇನ್ನು ಮುಂದೆಯೂ ಮಾತೃಭೂಮಿ ಕೋ-ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಗೆ ಎಲ್ಲರ ಸಹಕಾರ, ಮಾರ್ಗದರ್ಶನಗಳ ಅಗತ್ಯವಿದ್ದು, ಇದು ದೇಶದಲ್ಲೇ ಅತ್ಯುತ್ತಮ ಕೋ- ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯಾ ಗುವುದರಲ್ಲಿ ಎಲ್ಲರ ಸಹಕಾರವನ್ನು ಮರೆಯುವಂತಿಲ್ಲ ಎಂದರು.

ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ  ಮಾತನಾಡಿ, ಸಾಮಾನ್ಯ ಜನರಿಗೆ ಸಹಾಯವಾಗುವ ರೀತಿಯಲ್ಲಿ ಮಾತೃಭೂಮಿ ಕ್ರೆಡಿಟ್‌ ಸೊಸೈಟಿಯಿಂದ ಸೇವೆಗಳು ದೊರೆಯಬೇಕು. ಈ ನಿಟ್ಟಿನಲ್ಲಿ ನಾವು ನಮ್ಮ ಕಾರ್ಯ ಯೋಜನೆಗಳನ್ನು ನಿರ್ವಹಿಸಬೇಕಾದ ಅಗತ್ಯವಿದೆ ಎಂದು ತಿಳಿಸಿ ಸೊಸೈಟಿಯ ಅಭಿವೃದ್ಧಿಗೆ ಸಮಾಜ ಬಾಂಧ ವರ ಸಹಕಾರ ಸದಾ ಇರಲಿ ಎಂದರು.

ಕಾರ್ಯದರ್ಶಿ ಸಿಎ ರಮೇಶ್‌ ಎ. ಶೆಟ್ಟಿ  ವಾರ್ಷಿಕ ವರದಿ ವಾಚಿಸಿದರು. ಪ್ರವೀಣ್‌ ಬಿ. ಶೆಟ್ಟಿ ವಾರ್ಷಿಕ ಲೆಕ್ಕಪತ್ರದ ವರದಿ ಮಂಡಿಸಿದರು. ಪ್ರಸ್ತುತ ಹಣಕಾಸು ವರ್ಷದ ಆಂತರಿಕ ಲೆಕ್ಕ ಪರಿಶೋಧಕ ರನ್ನಾಗಿ ಆರ್‌. ಜಿ. ಶೆಟ್ಟಿ ಆ್ಯಂಡ್‌ ಕಂಪೆನಿ ಹಾಗೂ ಲೆಕ್ಕ ಪರಿಶೋಧಕರನ್ನಾಗಿ ಸಿಎ ಹರೀಶ್‌ ಡಿ. ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು. ಬಂಟರ ಸಂಘದ ನೂತನ ಪದಾಧಿಕಾರಿಗಳಿಗೆ, ಮಾತೃಭೂಮಿ ಕೋ – ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಯಶಸ್ಸಿಗೆ ಸಹಕರಿ ಸಿದ ಮಹನೀಯರನ್ನು ಶಾಲು ಹೊದೆಸಿ, ಪುಷ್ಪಗುತ್ಛವನ್ನಿತ್ತು ಗೌರವಿಸಲಾಯಿತು.

ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಮುರಳಿ ಕೆ. ಶೆಟ್ಟಿ , ಮಾತೃಭೂಮಿ ಕೋ-ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ಉಪಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ , ನಿರ್ದೇಶಕರಾದ ಮಹೇಶ್‌ ಎಸ್‌. ಶೆಟ್ಟಿ, ಡಾ| ಆರ್‌. ಕೆ. ಶೆಟ್ಟಿ, ಉಮಾ ಕೆ. ಶೆಟ್ಟಿ , ಸುಜಾತಾ ಜಿ. ಶೆಟ್ಟಿ, ಸಂತೋಷ್‌ ಎಂ. ಜವಾಂದಲೆ, ರಿಕವರಿ ಸಮಿತಿಯ ಕಾರ್ಯಾಧ್ಯಕ್ಷ ಡಾ| ಪ್ರಭಾಕರ ಶೆಟ್ಟಿ ಬೊಳ ಮೊದಲಾದವರು ಉಪಸ್ಥಿತರಿದ್ದರು.

ಮಾತೃಭೂಮಿ ಕೋ-ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಮಾಜಿ ಕಾರ್ಯಾಧ್ಯಕ್ಷರಾದ ಕೆ. ಡಿ. ಶೆಟ್ಟಿ , ಸಿಎ ಶಂಕರ್‌ ಶೆಟ್ಟಿ ಹಾಗೂ ಸಿಎ ಐ. ಆರ್‌. ಶೆಟ್ಟಿ, ಮುಂಡಪ್ಪ ಎಸ್‌. ಪಯ್ಯಡೆ ಮೊದಲಾದವರು ಸಲಹೆ-ಸೂಚನೆಗಳನ್ನು ನೀಡಿದರು. ಕಾರ್ಯದರ್ಶಿ ಸಿಎ ರಮೇಶ್‌ ಎ. ಶೆಟ್ಟಿ ವಂದಿಸಿದರು.

ಪ್ರಸಕ್ತ ಸಾಲಿನಲ್ಲಿ ಬ್ಯಾಂಕೋ ಅವಾರ್ಡ್‌ :

2020ರ ಮಾ. 31ರ ವರೆಗಿನ ಮಾತೃಭೂಮಿಯ ಷೇರು ಬಂಡವಾಳ 2,420.11 ಲಕ್ಷ ರೂ. ಗಳಿಗೆ ಏರಿದ್ದು, ಒಟ್ಟು ಸಂಗ್ರಹ 2,081.36 ಲಕ್ಷ ರೂ., ಒಟ್ಟು ಠೇವಣಿ 9,554.92 ಲಕ್ಷ ರೂ.ಗಳಿಗೆ ತಲುಪಿದೆ. ಒಟ್ಟು ಮುಂಗಡ ಮೊತ್ತ 10,550.16 ಲಕ್ಷ ರೂ., ವರ್ಕಿಂಗ್‌ ಕ್ಯಾಪಿಟಲ್‌ 14,780.81 ಲಕ್ಷ ರೂ., ನಿವ್ವಳ ಲಾಭ 395.09 ಲಕ್ಷ ರೂ., ನೆಟ್‌ ಎನ್‌ಪಿಎ ಶೇ. 14.75ರಷ್ಟಿದೆ. ಸಂಸ್ಥೆಯ ಕಾರ್ಯವ್ಯಾಪ್ತಿಯನ್ನು ಮುಂಬಯಿ ಮಹಾನಗರ ಅಲ್ಲದೆ ಇನ್ನಿತರ ಉಪನಗರ, ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ. ಎಲ್ಲ ಶಾಖೆಗಳಿಗೆ ಮಾತೃಭೂಮಿ ಆಡಳಿತವು ಈಗಾಗಲೇ ಸ್ವತಂತ್ರ ಅಧಿಕಾರ ನೀಡಿರುವುದಲ್ಲದೆ, ಯಾವುದೇ ಬ್ಯಾಂಕ್‌ ಗ್ರಾಹಕರಿಗೆ ನೀಡುವ ಸೇವೆಗೆ ಅನುಗುಣವಾಗಿ ಸಂಪೂರ್ಣ ಸೌಲಭ್ಯ ಒದಗಿಸಲು ಶಾಖೆಗಳಿಗೆ ಸ್ವಾಯತ್ತತೆ ಕಲ್ಪಿಸಲಾಗಿದೆ. ಸೊಸೈಟಿ  ಪ್ರಸಕ್ತ ಸಾಲಿನಲ್ಲಿ ಬ್ಯಾಂಕೋ ಅವಾರ್ಡ್‌ ಅನ್ನು ಅತೀ ಹೆಚ್ಚಿನ ಠೇವಣಿ ಸಂಗ್ರಹಿಸಿದಕ್ಕಾಗಿ ಪಡೆದಿದೆ. ಸಂಸ್ಥೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಿ, ಅದರ ಅಭ್ಯುದಯಕ್ಕಾಗಿ ಕಾರಣರಾದ  ಪ್ರಾರಂಭದ ದಿನಗಳಿಂದ ಇಂದಿನವರೆಗಿನ ಕಾರ್ಯಾಧ್ಯಕ್ಷರು, ಆಡಳಿತ ನಿರ್ದೇಶಕರು, ಸಲಹಾ ಸಮಿತಿಯ ಸದಸ್ಯರ ಸೇವೆ ಮರೆಯುವಂತಿಲ್ಲ.

 

ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.