ವಾಪಿ ಕನ್ನಡ ಸಂಘದ 39ನೇ ವಾರ್ಷಿಕೋತ್ಸವ ಸಮಾರಂಭ


Team Udayavani, Feb 26, 2019, 1:18 PM IST

2402mum05.jpg

ವಾಪಿ: ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣವಾಗುತ್ತದೆ. ನಮ್ಮ ಸ್ವಯಂ ಆಚರಣೆಯೇ ನಮ್ಮ ವ್ಯಕ್ತಿತ್ವದ ಹೆಗ್ಗುರುತಾಗಿದೆ. 39 ವರ್ಷಗಳ ಅಮೋಘ ಸಂಸ್ಕೃತಿಯ ಹಾಗೂ ಭಾಷೆ ನುಡಿಯ ರಥವನ್ನು ಎಳೆಯುತ್ತಿರುವ ಹಿರಿಯ ಹಾಗೂ ಎಲ್ಲ ಪದಾಧಿಕಾರಿಗಳಿಗೆ ನನ್ನ ಅನಂತಾನಂತ ಕೃತಜ್ಞತೆಗಳು ಎಂದು ಬೆಂಗಳೂರು ಹೊಟೇಲ್‌ ಉದ್ಯಮಿ ವಸಂತ ಕುಮಾರ ಶೆಟ್ಟಿ ಬೆಳ್ವೆ ಅವರು ನುಡಿದರು.

ಇತ್ತೀಚೆಗೆ ವಾಪಿ ಕನ್ನಡ ಸಂಘದ ವಿವಿಧೋದ್ದೇಶ ಸಭಾಗೃಹದಲ್ಲಿ ನಡೆದ ವಾಪಿ ಕನ್ನಡ ಸಂಘದ 39ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಜಾತಿ ಮತ ಭೇದವಿಲ್ಲದೆ ಒಗ್ಗಟ್ಟಿನಿಂದ ಸ್ವಂತ ಕಟ್ಟಡದಲ್ಲಿ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಡೆಸುತ್ತಿರುವುದು ಶ್ಲಾಘನೀಯ. ಮುಖ್ಯವಾಗಿ ನಾಡು-ನುಡಿಯ ಬಗ್ಗೆ ಮಕ್ಕಳಲ್ಲಿ ಅಭಿಮಾನ ಮೂಡಿಸುವ ಕಾರ್ಯ ಸಂಘ-ಸಂಸ್ಥೆಗಳಿಂದಾಗಬೇಕು ಎಂದರು.

ವಾಪಿ ಕನ್ನಡ  ಸಂಘದ ಅಧ್ಯಕ್ಷ ವಿಶ್ವನಾಥ ಭಂಡಾರಿ, ವಿಶ್ವಸ್ಥ ಸಂಜಯ ಮರ್ಬಳ್ಳಿ, ಮಹಿಳಾ ಮುಖ್ಯಸ್ಥೆ ಪ್ರಫ‌ುಲ್ಲಾ ಶೆಟ್ಟಿ, ಕೋಶಾಧಿಕಾರಿ ಉದಯ ಸೊಗಲಿ, ಸಂಚಾಲಕ ನಾಗರಾಜ ಶೆಟ್ಟಿ ಮತ್ತು ಗೌರವ ಕಾರ್ಯದರ್ಶಿ ಮಮತಾ ಮಲ್ಹಾರ ಹಾಗೂ ಅತಿಥಿಯಾಗಿ ಪಾಲ್ಗೊಂಡ ವಸಂತ ಬೆಳ್ಳೆ ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.

ಅರ್ಪಿತಾ ಚಿಕ್ಕೆರೂರ ಅವರ ಪ್ರಾರ್ಥನೆಯ ನಂತರ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರ ಹೀನಾಯ ಕೃತ್ಯಕ್ಕೆ ಹುತಾತ್ಮರಾದ  ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿಯನ್ನು ಅರ್ಪಿ ಸಲಾಯಿತು.

ಸಮಾರಂಭದ ಅಧ್ಯಕ್ಷ ವಿಶ್ವನಾಥ ಭಂಡಾರಿ ಅವರು ಸ್ವಾಗತಿಸಿದರು. ಪ್ರತಿಭಾ ಪ್ರಯಾಗ ಅವರು ಈ ವರ್ಷದಲ್ಲಿ ಅಗಲಿದ ಕನ್ನಡದ ಮಹಾನ್‌ ವ್ಯಕ್ತಿಗಳನ್ನು ಸ್ಮರಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಗೌರವ ಕಾರ್ಯದರ್ಶಿ ಮಮತಾ ಮಲ್ಹಾರ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿಗಳಾದ ಉದಯ ಸೊಗಲಿಯವರು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಮುಖ್ಯ ಅತಿಥಿಗಳನ್ನು ನಿಶಾ ಶೆಟ್ಟಿ ಪರಿಚಯಿಸಿದರು. ಅತಿಥಿ -ಗಣ್ಯರುಗಳನ್ನು ಶಾಲು, ಫಲತಾಂಬೂಲ, ನೆನಪಿನ ಕಾಣಿಕೆ ಮತ್ತು ಸಮ್ಮಾನ ಪತ್ರವನ್ನು ನೀಡಿ ಸಂಘದ ವತಿಯಿಂದ ಗೌರವಿಸಲಾಯಿತು.

ಪ್ರತಿಭಾವಂತ ವಿದ್ಯಾರ್ಥಿಗಳ ಸಮ್ಮಾನವನ್ನು ಪರಮೇಶ್ವರ ಬೆಳಮಗಿ ಅವರು ನಡೆಸಿ ಕೊಟ್ಟರು. ವರ್ಷವಿಡೀ ನಡೆದ ಎಲ್ಲ ಕಾರ್ಯಕ್ರಮಗಳ ಸಂಚಾಲಕರುಗಳಿಗೆ ಅಧ್ಯಕ್ಷರು ಪುಷ್ಪ ಗುತ್ಛವನ್ನಿತ್ತು ಅಭಿನಂದಿಸಿದರು. ಈ ಸಂದರ್ಭ 2017 -2019ನೇ ಸಾಲಿನ ಎರಡು ವರ್ಷಗಳ ಕಾಲ ಸಂಘಕ್ಕೆ ಸೇವೆ ಸಲ್ಲಿಸಿ ನಿವೃತ್ತರಾಗಲಿರುವ ಪದಾಧಿಕಾರಿಗಳಿಗೆ ವಿಶ್ವಸ್ಥರಾದ ಪಿ. ಎಸ್‌. ಕಾರಂತ ಮತ್ತು ಮಲ್ಹಾರ ನಿಂಬರಗಿಯವರು ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಿದರು. ಆನಂತರ 2019-2021ರ ಅವಧಿಗಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೆ ಪುಷ್ಪಗುತ್ಛವನ್ನಿತ್ತು ಸ್ವಾಗತಿಸಲಾಯಿತು.

ನೂತನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಸಭೆಗೆ ಪರಿಚಯಿಸಲಾಯಿತು.  ಸಂಘದ ಹಿರಿಯ ಸದಸ್ಯರಾದ ಮಾಸಮ್ಮ ಪ್ಯಾಟೆ ಮತ್ತು ಪರ್ಯಾವರಣ ಸಂರಕ್ಷಣೆಗಾಗಿ ಗೌರವ ಡಾಕ್ಟರೇಟ್‌ ಪಡೆದ ಸಾಮಾಜಿಕ ಕಾರ್ಯಕರ್ತ ರಾಧಾಕೃಷ್ಣ ಪಿ.ನಾಯರ್‌ ಅವರನ್ನು ಶಾಲು ಫಲಪುಷ್ಪವನ್ನಿತ್ತು ಗೌರವಿಸಲಾಯಿತು. ಚಿತ್ರಕಲೆ, ರಂಗೋಲಿ ಸ್ಪರ್ಧೆ ಮತ್ತು ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ  ಬಹುಮಾನ ವಿತರಿಸಲಾಯಿತು.

ಮಹಿಳಾ ಮುಖ್ಯಸ್ಥೆ ಪ್ರಫ‌ುಲ್ಲಾ ಶೆಟ್ಟಿ, ಸಂಚಾಲಕ ನಾಗರಾಜ ಶೆಟ್ಟಿ ಮತ್ತು ಅಧ್ಯಕ್ಷ ವಿಶ್ವನಾಥ ಭಂಡಾರಿ  ಸಂಘದೊಂದಿಗಿನ ಅಮರ ಬಾಂಧವ್ಯ, ಎಲ್ಲರ ಸಹಕಾರವನ್ನು  ಸ್ಮರಿಸಿದರು. ಸಭಾ ಕಾರ್ಯಕ್ರಮವನ್ನು ರಾಜೀವ ಶೆಟ್ಟಿ ಮತ್ತು ಟಿ. ಕೆ. ವಿನಯಕುಮಾರ್‌ ನಿರ್ವಹಿಸಿ ಶುಭಕೋರಿ ಬಂದ ಸಂದೇಶಗಳನ್ನು ಸಭೆಗೆ ತಿಳಿಸಿದರು. ಭೋಜನದನಂತರ ಸಂಘದ ಸದಸ್ಯರು, ಮಹಿಳೆಯರು ಮತ್ತು ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ  ಕಾರ್ಯಕ್ರಮಗಳು ಜರಗಿದವು.

ಕಾರ್ಯಕ್ರಮಕ್ಕೆ ಸೆಲ್ವಾಸ್‌ ದಮನ್‌, ಉಮರಗಾಮ್‌ ನಿಂದ ನೂರಾರು ಕನ್ನಡಿಗರಲ್ಲದೇ ಹಿರಿಯರಾದ ಪಿ. ಎಸ್‌. ಕಾರಂತ್‌, ನಾರಾಯಣ ಶೆಟ್ಟಿ, ಮಲ್ಹಾರ ನಿಂಬರಗಿ, ಸಂಜಯ ಮರ್ಬಳ್ಳಿ, ಎನ್‌. ಪಿ. ಕಾಂಚನ್‌, ಗಣೇಶ ಶೆಟ್ಟಿ, ಎ. ಎನ್‌. ರಾವ್‌, ಶಶಿಧರ್‌ ಗೋಸಿ, ಚಂದ್ರಶೇಖರ ಗೋಸಿ, ಕೆ. ಪಿ. ಹೆಬ್ಳೆ, ಬಾಲಕೃಷ್ಣ ಶೆಟ್ಟಿ, ಚಂದ್ರಿಕಾ ಕೋಟ್ಯಾನ್‌, ವಿನಯಾ ಭಂಡಾರಿ, ಕರುಣಾ ಪಿಂಗೆÛ, ವೇದಾ ಕಾಂಚನ್‌, ಪ್ರತಿಭಾ ಪ್ರಯಾಗ, ಸದಾಶಿವ ಪೂಜಾರಿ, ರಾಜು ಶೇರೇಗಾರ್‌, ಮುಕುಂದ ಹಂದಿಗೋಳ್‌, ಹರ್ಷವ ರ್ಧನ್‌ ಭಟ್‌, ದಾûಾಯಣಿ ರಾವ್‌, ರಜನಿ ಶೆಟ್ಟಿ, ಸುಭಾಶ್ಚಂದ್ರ ಶೆಣೈ ಮುಂತಾದವರು ಉಪಸ್ಥಿತರಿದ್ದರು. 

ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಾನಕಿ ರಾವ್‌, ಸಂಧ್ಯಾ ವಿನಯ ಕುಮಾರ್‌ ಮತ್ತು ವಾಣಿ ಭಟ್‌ ನಡೆಸಿಕೊಟ್ಟರು. ಮಹಿಳಾ ವಿಭಾಗದ ಕಾರ್ಯದರ್ಶಿ ಲಲಿತಾ ಕಾರಂತ್‌ ವಂದಿಸಿದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.