ಹಿರಿಯರ ಪ್ರೇರಣೆ ಸಮಾಜ ಸೇವೆಗೆ ಸ್ಫೂರ್ತಿ: ಶಶಿಧರ ಕೆ. ಶೆಟ್ಟಿ ಇನ್ನಂಜೆ


Team Udayavani, Feb 22, 2022, 11:04 AM IST

ಹಿರಿಯರ ಪ್ರೇರಣೆ ಸಮಾಜ ಸೇವೆಗೆ ಸ್ಫೂರ್ತಿ: ಶಶಿಧರ ಕೆ. ಶೆಟ್ಟಿ ಇನ್ನಂಜೆ

ಮುಂಬಯಿ: ಹಿರಿಯರ ಪ್ರೇರಣೆ, ಮಾರ್ಗದರ್ಶನದಿಂದ ಸಮಾಜ ಸೇವೆಯಲ್ಲಿ ನಿರತನಾಗಿದ್ದೇನೆ. ಮೂರು ವರ್ಷಗಳಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಬಡ ಕುಟುಂಬಗಳಿಗೆ ಮನೆ  ನಿರ್ಮಿಸಿ ಕೊಟ್ಟ ಐಕಳ ಹರೀಶ್‌ ಶೆಟ್ಟಿಯವ ರನ್ನು ಗುರು ಎನ್ನಲು ಹೆಮ್ಮೆಯಾಗುತ್ತದೆ ಎಂದು ಶ್ರೀ ದೇವಿ ಯಕ್ಷಕಲಾ ನಿಲಯ ನಲಸೋಪರ-ವಿರಾರ್‌ ಅಧ್ಯಕ್ಷ ಶಶಿಧರ ಕೆ. ಶೆಟ್ಟಿ ಇನ್ನಂಜೆ ತಿಳಿಸಿದರು.

ವಸಾಯಿ ಪೂರ್ವದ ಉಡುಪಿ ಹೊಟೇಲ್‌ ಗ್ರೌಂಡ್‌ನ‌ಲ್ಲಿ ಫೆ. 20ರಂದು ನಡೆದ ಶ್ರೀ ದೇವಿ ಯಕ್ಷಕಲಾ ನಿಲಯದ 5ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ, ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ ವಸಾಯಿ ಪರಿಸರದಲ್ಲಿ  ಶಾಲೆ ನಿರ್ಮಿಸುವ ಯೋಜನೆ ಕೈಗೊಳ್ಳಬೇಕು ಎಂದು ಸ್ಥಳೀಯರ ಪರವಾಗಿ ವಿನಂತಿಸುತ್ತಿದ್ದೇನೆ. ಇದಕ್ಕೆ ನಮ್ಮೆಲ್ಲರ ಪ್ರೋತ್ಸಾಹವಿದೆ. ಇಂದು ವೈವಾಹಿಕ ಜೀವನದ ಬೆಳ್ಳಿಹಬ್ಬದ ಸಂದರ್ಭ ಪರಿವಾರದೊಂದಿಗೆ ನನ್ನ ಮಾತೃಶ್ರೀಯವರ ಪಾದಪೂಜೆ ಮಾಡಿರುವೆ. ಎಳೆಯ ಪ್ರಾಯದÇÉೇ ನಾನು ತಂದೆಯನ್ನು ಅಗಲಿದ್ದು, ಭಾರೀ ಕಷ್ಟದಿಂದ ತಾಯಿ ನಮ್ಮನ್ನು ಸಾಕಿದ್ದಾರೆ. ನನ್ನ ಬೆಳವಣಿಗೆಗೆ ಕಾರಣಕರ್ತರಾದ ಮಾವನವರನ್ನು ಮರೆಯುವಂತಿಲ್ಲ. ಶ್ರೀದೇವಿ ಯಕ್ಷಕಲಾ ನಿಲಯದಲ್ಲಿ ಅನೇಕ ಮಕ್ಕಳಿಗೆ ವಿವಿಧ ಕಲೆಗಳನ್ನು ಕಲಿಯುವ ಅವಕಾಶ ನೀಡುತ್ತಿದ್ದು, ಇದಕ್ಕೆ ವಸಾಯಿ ಪರಿಸರದ ತುಳು, ಕನ್ನಡಿಗರ ಪ್ರೋತ್ಸಾಹ ವಿದೆ. ವಸಾಯಿ ತಾಲೂಕಿನಲ್ಲಿ ಯಕ್ಷ ಗಾ ನದ ಮೂರು ಸಂಸ್ಥೆಗಳನ್ನು ನಡೆಸಲು ಇಲ್ಲಿನ ಮಕ್ಕಳ ಪೋಷಕರ ಸಹಾಯವೂ ನಮಗಿದೆ ಎಂದರು.

ಗೌರವ ಅತಿಥಿಯಾಗಿದ್ದ ಬಿಲ್ಲವರ ಅಸೋಸಿ ಯೇಶನ್‌ ಮುಂಬಯಿ ಮಾಜಿ ಅಧ್ಯಕ್ಷ ಚಂದ್ರ ಶೇಖರ ಪೂಜಾರಿ ಮಾತನಾಡಿ, ಕಷ್ಟದಲ್ಲಿದ್ದ ಸ್ಥಳೀಯ ರನ್ನು ಕೊರೊನಾ ಕಾಲದಲ್ಲಿ ರಕ್ಷಿಸಿದ ಶಶಿಧರ ಶೆಟ್ಟಿಯ ವರು ಎಲ್ಲ ಸಮುದಾಯದವರಿಗೂ ಬೇಕಾದ ವ್ಯಕ್ತಿ ಯಾಗಿ ದ್ದಾರೆ. ತುಳುನಾಡಿನ  ಶ್ರೀಮಂತ ಕಲೆಯನ್ನು ಇಲ್ಲಿನ ಮಕ್ಕಳಿಗೆ ಕಲಿಸುತ್ತಿರುವ ಶಿಕ್ಷಕ-ಶಿಕ್ಷಕಿಯರಿಗೆ ಅಭಿನಂದನೆಗಳು ಎಂದರು.

ಇನ್ನೋರ್ವ ಅತಿಥಿ ವರ್ಲಿ ಅಪ್ಪಾಜಿಬೀಡು ಚಂದ್ರ ಹಾಸ ಗುರುಸ್ವಾಮಿ ಮಾತನಾಡಿ, ಹೇಳಿದ ಕೆಲಸ ತಪ್ಪದೇ ಮಾಡುವ ವಿಶೇಷ ವ್ಯಕ್ತಿತ್ವ ಶಶಿಧರ ಶೆಟ್ಟಿಯವರದ್ದು. ಸಮಾಜಸೇವೆ ಮಾಡಲು ಇವರಿಗೆ ದೇವರು ಇನ್ನೂ ಶಕ್ತಿ ಕರುಣಿಸಲಿ ಎಂದರು.

ಗೌರವ ಅತಿಥಿಯಾಗಿದ್ದ ಲೇಖಕಿ, ಸಾಹಿತಿ ಲತಾ ಸಂತೋಷ್‌ ಶೆಟ್ಟಿ  ಮುದ್ದುಮನೆ ಅವರು ಶಶಿಯಣ್ಣ ಹಾಗೂ ಶಶಿಕಲಾ ಇಬ್ಬರಿಗೂ ಮದುವೆಯ 25ನೇ ವಾರ್ಷಿಕೋತ್ಸಕ್ಕೆ ಅಭಿನಂದನೆ ಸಲ್ಲಿಸಿ, ಶ್ರೀದೇವಿ ಯಕ್ಷಕಲಾ ನಿಲಯದಲ್ಲಿ ಅನೇಕ ಕಲಾ ಕುಸುಮಗಳು ಅರಳಿದ್ದು, ಈ ಮಕ್ಕಳ ಗೆಜ್ಜೆ ಧ್ವನಿ ನಾಡಿನಾದ್ಯಂತ ಮೊಳಗಲಿ ಎಂದರು.

ವಸಾಯಿ-ವಿರಾರ್‌ ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್‌ ಉಮೇಶ್‌ ಡಿ. ನಾಯ್ಕ… ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಬಂಟರ ಸಂಘ ಮುಂಬಯಿ, ಬಂಟರ ಸಂಘ ಮುಂಬ ಯಿಯ ವಿವಿಧ ಪ್ರಾದೇಶಿಕ ಸಮಿತಿ ಹಾಗೂ ಸ್ಥಳೀಯ ತುಳು, ಕನ್ನಡಪರ, ವಿವಿಧ ಜಾತೀಯ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಶಶಿಧರ ಕೆ. ಶೆಟ್ಟಿ ಇನ್ನಂಜೆ, ಪತ್ನಿ ಶಶಿಕಲಾ, ಪುತ್ರಿ ಸೃಷ್ಟಿ ಅವರು ತಾಯಿ ಶಾರದಾ ಶೆಟ್ಟಿಯವರ ಪಾದಪೂಜೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಯಕ್ಷಗಾನದ ಎಲ್ಲ ಗುರು ಗಳನ್ನು ಗೌರವಿಸಲಾಯಿತು. ಕಟೀಲು ಯಕ್ಷ ಕಲಾ ವೇದಿಕೆ ವಸಾಯಿ ಅಧ್ಯಕ್ಷ ದೇವೇಂದ್ರ ಬುನ್ನನ್‌ ಹಾಗೂ ಜೀವಧಾನಿ ಯಕ್ಷ ಕಲಾವೇದಿಕೆ ವಸಾಯಿ ಅಧ್ಯಕ್ಷ ಮಂಜುನಾಥ ಶೆಟ್ಟಿ ಕೊಡ್ಲಾಡಿ ಅವರನ್ನು ಸಮ್ಮಾನಿಸಲಾಯಿತು. ಶ್ರೀ ದೇವಿ ಯಕ್ಷಕಲಾ ನಿಲಯ ನಲಸೋಪರ- ವಿರಾರ್‌ ಇದರ ಬಾಲ ಕಲಾವಿದರಾದ ಸೃಷ್ಟಿ ಶಶಿಧರ ಶೆಟ್ಟಿ, ಸಮೀûಾ ಸುಭಾಷ್‌ ಶೆಟ್ಟಿ, ಶ್ರದ್ಧಾ ಶೆಟ್ಟಿ, ಕಿಶನ್‌ ಪೂಜಾರಿ ಅವರನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಲೀಲಾವತಿ ಆಳ್ವ ಮಾರ್ಗದರ್ಶನದಲ್ಲಿ ಮಕ್ಕಳ ಭಜನೆ ಬಳಿಕ ಸಂಸ್ಥೆಯ ಇಂಗ್ಲಿಷ್‌ ಮಾಧ್ಯಮದಲ್ಲಿ ಕಲಿಯುತ್ತಿರುವ ಬಾಲ ಕಲಾವಿದರಿಂದ ಶ್ರೀ ದೇವಿ ಲಲಿತೋಪಖ್ಯಾನ ಕನ್ನಡ ಯಕ್ಷಗಾನ ಪ್ರದರ್ಶನ ಗೊಂಡಿತು. ಸ್ಮಿತಾ ನಾಯರ್‌ ನೇತೃತ್ವದಲ್ಲಿ ಭರತ ನಾಟ್ಯ, ಮಕ್ಕಳಿಂದ ನಾಟ್ಯ ವೈಭವ ಹಾಗೂ ಹಿರಿ ಯ ರಿಂದ ಮತ್ತು ಶಶಿಧರ ಶೆಟ್ಟಿ ದಂಪತಿಯ ಪರಿ ವಾರದ ಮಕ್ಕಳಿಂದ ನೃತ್ಯ ಪ್ರದರ್ಶನಗೊಂಡಿತು. ಶಶಿಕಲಾ ಶಶಿಧರ ಶೆಟ್ಟಿ, ಶ್ರೀದೇವಿ ಯಕ್ಷ ಕಲಾನಿಲ ಯದ ಗೌರವಾಧ್ಯಕ್ಷ ಶ್ರೀನಿವಾಸ ನಾಯ್ಡು ಉಪಸ್ಥಿತರಿದ್ದರು.ಶ್ರೀ ದೇವಿ ಯಕ್ಷಕಲಾ ನಿಲಯದ ಕಾರ್ಯದರ್ಶಿ ಪ್ರವೀಣ್‌ ಶೆಟ್ಟಿ ಕಣಂಜಾರು ಮತ್ತು ವಿಜಯ ಪಿ. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಪ್ರವೀಣ್‌ ಶೆಟ್ಟಿ ಕಣಂಜಾರು ವಂದಿಸಿದರು. ಕೋಶಾಧಿಕಾರಿ ಲ| ಕೃಷ್ಣಯ್ಯ ಹೆಗ್ಡೆ, ಜಗನ್ನಾಥ್‌ ಡಿ. ಶೆಟ್ಟಿ, ಸುಪ್ರಿತಾ ಶೆಟ್ಟಿ, ಬಾಬಾ ಪ್ರಸಾದ್‌ ಅರಸ, ಸುಭಾಷ್‌ ಜೆ. ಶೆಟ್ಟಿ, ಪರಿಸರದ ತುಳು, ಕನ್ನಡ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಮಹಿಳೆಯರು ಹಾಗೂ ಬಾಲ ಕಲಾವಿದರಪಾಲಕರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಶಶಿಧರ ಶೆಟ್ಟಿ  ದಂಪತಿಯ ವೈವಾಹಿಕ ಜೀವನದ 25 ವರ್ಷಗಳ ಬದುಕು ಸಮಾಜಕ್ಕೆ ಆದರ್ಶವಾಗಿರುವುದು ಅಭಿನಂದನೀಯ. ಶಶಿಧರ ಶೆಟ್ಟಿ ಇಲ್ಲಿನ ತುಳು, ಕನ್ನಡಿಗರ ಎಲ್ಲ  ಸಂಘಟನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತನ್ನ ಆದಾಯದ ಹೆಚ್ಚಿನ ಪಾಲನ್ನು ಸಮಾಜಕ್ಕೆ ನೀಡುತ್ತಿ¨ªಾರೆ. ಎಲ್ಲರ ಯಶಸ್ಸಿನ ಹಿಂದೆ ಬಾಳ ಸಂಗಾತಿ ಹಾಗೂ ತಾಯಿ-ತಂದೆಯ ಕೊಡುಗೆ ಅಪಾರ. ವೈವಾಹಿಕ ಜೀವನದ ಬೆಳ್ಳಿಹಬ್ಬದ ಸಂದರ್ಭ ತಾಯಿಯ ಪಾದಪೂಜೆ ನೆರವೇರಿಸಿ ಅವರ ಆಶೀರ್ವಾದ ಪಡೆಯುತ್ತಿರುವುದು ಮುಂದಿನ ಪೀಳಿಗೆಗೆ ಮಾದರಿಯಾಗಲಿ. ಇದು ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕಾರ್ಯಕ್ರಮವಾಗಿದೆ.ಐಕಳ ಹರೀಶ್‌ ಶೆಟ್ಟಿ, ಅಧ್ಯಕ್ಷರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ

ಶಶಿಧರ ಶೆಟ್ಟಿ ತನ್ನ ಜವಾಬ್ದಾರಿಯನ್ನು  ಸಮರ್ಪಕವಾಗಿ ನಿರ್ವಹಿಸುತ್ತಿದ್ದು, ಬಂಟರ ಸಂಘ ಮುಂಬಯಿಯ ಬೊರಿವಲಿ ಶಿಕ್ಷಣ ಸಂಸ್ಥೆಯ ಯೋಜನೆಗೆ ಉತ್ತಮ ದೇಣಿಗೆ ಘೋಷಿಸಿ¨ªಾರೆ. ದಾಂಪತ್ಯ ಜೀವನದ ಬೆಳ್ಳಿಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿರುವ ಶಶಿಧರ ಶೆಟ್ಟಿ ದಂಪತಿಗೆ ಬಂಟರ ಸಂಘ ಮುಂಬಯಿಯ ಪರವಾಗಿ ಅಭಿನಂದನೆಗಳು.ಚಂದ್ರಹಾಸ ಶೆಟ್ಟಿ ಅಧ್ಯಕ್ಷರು, ಬಂಟರ ಸಂಘ ಮುಂಬಯಿ

ಶ್ರೀ ದೇವಿ ಯಕ್ಷಕಲಾ ನಿಲಯ ಮತ್ತು ಶಶಿಧರ ಶೆಟ್ಟಿ  ದಂಪತಿಯ ವೈವಾಹಿಕ ಜೀವನದ ಬೆಳ್ಳಿಹಬ್ಬ ಅರ್ಥಪೂರ್ಣ ಕಾರ್ಯಕ್ರಮ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ  ಜನ ಭಾಗವಹಿಸಿರುವುದು ಜನಸಾಮಾನ್ಯರಿಗೆ ಶಶಿಧರ ಶೆಟ್ಟಿಯವರ ಮೇಲಿರುವ ಪ್ರೀತಿಯನ್ನು ತೋರಿಸುತ್ತಿದೆ. ಈ ಸಂಸ್ಥೆಯ ಮೂಲಕ ನಾಡಿನ ಕಲೆ, ಭಾಷೆ, ಸಂಸ್ಕೃತಿಯನ್ನು ಈ ನೆಲದಲ್ಲಿ ಉಳಿಸಿ-ಬೆಳೆಸುವ ಕಾರ್ಯವನ್ನು ಶಶಿಧರ ಶೆಟ್ಟಿ  ಮಾಡುತ್ತಿದ್ದು, ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.ಕರ್ನಿರೆ ವಿಶ್ವನಾಥ ಶೆಟ್ಟಿ ಉಪಾಧ್ಯಕ್ಷರು,ಜಾಗತಿಕ ಬಂಟರ ಸಂಘಗಳ ಒಕ್ಕೂಟ

 

ಚಿತ್ರ-ವರದಿ: ಈಶ್ವರ್‌ ಐಲ್‌

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.