62 ಸಾವಿರ ಸೋಂಕಿತರು ಗುಣಮುಖ
Team Udayavani, Jun 22, 2020, 1:36 PM IST
ಸಾಂದರ್ಭಿಕ ಚಿತ್ರ
ಮುಂಬಯಿ, ಜೂ. 21: ರಾಜ್ಯದಲ್ಲಿ 55,651 ಮಂದಿ ಕೋವಿಡ್ ಸೋಂಕಿತರು ಸಕ್ರಿಯರಾಗಿದ್ದರೆ, ಇಲ್ಲಿಯ ತನಕ 62,773 ರೋಗಿಗಳು ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು ಹೇಳಿದ್ದಾರೆ.
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಟ್ಟು ಕೋವಿಡ್ ಸಂತ್ರಸ್ತರ ಸಂಖ್ಯೆ 1,24,331 ತಲುಪಿದೆ. ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಶೇಕಡಾ 50.49ರಷ್ಟಿದ್ದರೆ, ರಾಜ್ಯದಲ್ಲಿ ಸಾವಿನ ಪ್ರಮಾಣ ಶೇ 4.74ರಷ್ಟಿದೆ ಎಂದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 5,91,049 ಮಂದಿಯನ್ನು ಮನೆ ಹೊಂ ಕ್ವಾರಂಟೈನ್ ಮಾಡಲಾಗಿದೆ. 25,697 ಮಂದಿಯನ್ನು ಸಾಂಸ್ಥಿಕ ಸಂಪರ್ಕತಡೆಯಲ್ಲಿ ಇರಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 3,827 ಹೊಸ ಪ್ರಕರಣಗಳು ಪತ್ತೆಯಾಗಿವೆ. 142 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರ ಪರಿಣಾಮವಾಗಿ, ರಾಜ್ಯದಲ್ಲಿ ಒಟ್ಟು ಸಾವುಗಳ ಸಂಖ್ಯೆ 5 ಸಾವಿರ 893 ಕ್ಕೆ ತಲುಪಿದೆ. ಸಾವನ್ನಪ್ಪಿದವರಲ್ಲಿ 89 ಪುರುಷರು ಮತ್ತು 53 ಮಹಿಳೆಯರು ಸೇರಿದ್ದಾರೆ. 142 ಮಂದಿ ಸಾವನ್ನಪ್ಪಿದವರ ಪೈಕಿ 74 ಮಂದಿ 60 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಾಗದ್ದಾರೆ. 57 ರೋಗಿಗಳು 40 ವರ್ಷದಿಂದ 59 ವರ್ಷದೊಳಗಿನವರು. 11 ಮಂದಿ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ಮುಂಬಯಿಯಲ್ಲಿ 114, ಥಾಣೆಯಲ್ಲಿ 2, ನಾಸಿಕ್ನಲ್ಲಿ 3, ಧುಳೆಯಲ್ಲಿ 3, ಜಲ್ಗಾಂವ್ನಲ್ಲಿ 3, ಸೊಲ್ಲಾಪುರದಲ್ಲಿ 1 ಮತ್ತು ಔರಂಗಾಬಾದ್ನಲ್ಲಿ 8 ಸಾವುಗಳು ವರದಿಯಾಗಿವೆ.
ಪ್ರಸ್ತುತ, ರಾಜ್ಯದಲ್ಲಿ 60 ಸರಕಾರಿ ಮತ್ತು 43 ಖಾಸಗಿ ಪ್ರಯೋಗಾಲಯಗಳಿದ್ದು, ಒಟ್ಟು 103 ಪ್ರಯೋಗಾಲಯಗಳು ಸೋಂಕು ಪರೀಕ್ಷೆಗಾಗಿ ಕಾರ್ಯನಿರ್ವಹಿಸುತ್ತಿವೆ. ಇಲ್ಲಿಯವರೆಗೆ ಕಳುಹಿಸಲಾದ 7,35,674 ಮಾದರಿಗಳಲ್ಲಿ 1,24,331 ಮಾದರಿಗಳು ಪಾಸಿಟಿವ್ ಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ