ಸಾರ್ಥಕ ಸೇವೆಯ ಫಲವೇ ಸಂಘದ ಮುನ್ನಡೆ: ನಿತ್ಯಾನಂದ ಕೋಟ್ಯಾನ್‌


Team Udayavani, Jul 4, 2022, 11:15 AM IST

ಸಾರ್ಥಕ ಸೇವೆಯ ಫಲವೇ ಸಂಘದ ಮುನ್ನಡೆ: ನಿತ್ಯಾನಂದ ಕೋಟ್ಯಾನ್‌

ಮುಂಬಯಿ: ಹಿರಿಯರ ದೂರ ದೃಷ್ಠಿ, ಕಠಿಣ ಪರಿಶ್ರಮ, ಸಮರ್ಪಣಾ ಭಾವದ ಸೇವೆಯಿಂದಾಗಿ ಸಂಘವು ಸದೃಢವಾಗಿ ಮುನ್ನಡೆಯುಂತಾಗಿದೆ. ಹಿರಿಯರು ಉತ್ತಮ ಭಾವನೆಗಳಿಂದ ಪ್ರಾರಂಭಿಸಿದ ಈ ಸಂಸ್ಥೆಯನ್ನು ಜನಪರ ಚಟುವಟಿಕೆಗಳೊಂದಿಗೆ ಕ್ರಿಯಾಶೀಲ ಸಂಸ್ಥೆಯನ್ನಾಗಿಸುವಲ್ಲಿ ಕಾರ್ಯಪ್ರಾಪ್ತವಾದ ಪ್ರೇಮಬಿಂದು ಕಟ್ಟಡವೂ, ಈಗ ಸುಸಜ್ಜಿತಗೊಳ್ಳುತ್ತಾ ಸಂಘಕ್ಕೆ ಹೆಚ್ಚುವರಿ ಸ್ಥಳಾವಕಾಶ ಒದಗುತ್ತಿರುವುದು ನಮ್ಮ ಹೆಮ್ಮೆಯಾಗಿದೆ. ಪ್ರಸಕ್ತ ಕಾರ್ಯಕಾರಿ ಸಮಿತಿಯಿಂದ ತಯಾರಿಸಲ್ಪಡುವ ಸುಸಜ್ಜಿತ ಸಭಾಗೃಹ, ಗ್ರಂಥಾಲಯ, ಕಚೇರಿ ಇತ್ಯಾದಿಗಳ ಫಲಾನುಭಕ್ಕೆ ನಾವೆಲ್ಲರೂ ಸಹಭಾಗಿಗಳಾಗಬೇಕು. ಸಂಸ್ಥೆಯ ಮುನ್ನಡೆಗೆ ನಮ್ಮಲ್ಲಿಯ ಯುವ ಜನತೆಯನ್ನೂ ಮುಖ್ಯವಾಹಿನಿಯ ಕಾರ್ಯಕರ್ತರಾಗಿ ರೂಪಿಸುವಂತೆ ಶ್ರಮಿಸೋಣ ಎಂದ‌ು ಗೋರೆಗಾಂವ್‌ ಕರ್ನಾಟಕ ಸಂಘದ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್‌ ತಿಳಿಸಿದರು.

ರವಿವಾರ ಸಂಜೆ ಸಂಘದ ಬಾರ್ಕೂರು ರುಕ್ಮಿಣಿ ಶೆಟ್ಟಿ ಸ್ಮಾರಕ ಕಿರು ಸಭಾಗೃಹದಲ್ಲಿ ಗೋರೆಗಾಂವ್‌ ಕರ್ನಾಟಕ ಸಂಘದ 64ನೇ ವಾರ್ಷಿಕ ಮಹಾಸಭೆ ನಡೆಸಲಾಗಿದ್ದು, ಸಭಾಧ್ಯಕ್ಷತೆ ವಹಿಸಿ ಮಾತನಾಡಿದ ನಿತ್ಯಾನಂದ ಕೋಟ್ಯಾನ್‌ ಅವರು, ಸಂಘದ 64 ವರ್ಷಗಳ ಇತಿಹಾಸದಲ್ಲಿ 22 ಮಂದಿ ಅಧ್ಯಕ್ಷರಾಗಿ ಸಾರ್ಥಕ ಸೇವೆ ಸಲ್ಲಿಸಿದ್ದಾರೆ. ಇಂತಹ ನಿಸ್ವಾರ್ಥ, ಸಾರ್ಥಕ ಸೇವೆಯ ಫಲವೇ ಸಂಘದ ಮುನ್ನಡೆಯಾಗಿದೆ. ರಜತ ಮಹೋತ್ಸವದ ಸ್ಮರಣಾರ್ಥ ಸಂಘವು ಮಧುಬನದಿಂದ ಸ್ಥಳಾಂತರಗೊಂಡು ಪ್ರೇಮಬಿಂದು ಕಟ್ಟಡದಲ್ಲಿ ಕಾರ್ಯಚರಿಸಿದ ಕಾರಣ ಸಂಘದ ಸವೊìàನ್ನತಿ ಮತ್ತಷ್ಟು ಸಾಧ್ಯವಾಗಿದೆ. ಆ ಮೂಲಕ ವಿವಿಧ ವಿಭಾಗಗಳ ಅಸ್ತಿತ್ವ ಹತ್ತಾರು ಚಟುವಟಿಕೆಗಳಿಗೆ ಅವಕಾಶಗಳು ಒದಗಿ ಬಂದವು. ಆಗ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸೇವೆ ಸಲ್ಲಿಸುವ ಅವಕಾಶ ಒದಗಿದ್ದೂ ನನ್ನ ಸೌಭಾಗ್ಯ. ಸದ್ಯ ಸಂಘದ 23ನೇ ಅಧ್ಯಕ್ಷನಾಗುವ ಭಾಗ್ಯವನ್ನೂ ಒದಗಿಸಿದ ಎಲ್ಲರಿಗೂ ಕೃತಜ್ಞತೆಗಳು ಎಂದರು.

ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ವಾಣಿ ಎಸ್‌.ಶೆಟ್ಟಿ, ಗೌರವ ಕೋಶಾಧಿಕಾರಿ ಆನಂದ್‌ ಶೆಟ್ಟಿ, ಜತೆ ಕಾರ್ಯದರ್ಶಿಗಳಾದ ಸಹನಿ ಶೆಟ್ಟಿ ಮತ್ತು ಉಷಾ ಬಿ.ಶೆಟ್ಟಿ, ಜತೆ ಕೋಶಾಧಿಕಾರಿ ಸುಚಲತಾ ಪೂಜಾರಿ, ವಾಚನಾಲಯ ಮುಖ್ಯಸ್ಥೆ ವಸಂತಿ ಕೋಟೆಕಾರ್‌ ವೇದಿಕೆಯಲ್ಲಿ ಆಸೀನರಾಗಿದ್ದರು.

ಸಂಘದ ಪಾರುಪತ್ಯಗಾರರಾದ ಮುಂಡ್ಕೂರು ಸುರೇಂದ್ರ ಸಾಲ್ಯಾನ್‌, ಜಿ.ಟಿ ಆಚಾರ್ಯ, ಪಯ್ನಾರು ರಮೇಶ್‌ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ನಾರಾಯಣ ಆರ್‌.ಮೆಂಡನ್‌, ಗುಣೋದಯ ಎಸ್‌.ಐಲ್‌, ಪದ್ಮಜಾ ಮೆಂಡನ್‌, ವಿಶಾಲಕ್ಷಿ ವೂಲ್‌ವರ, ಸರಿತಾ ಕೆ.ನಾಯಕ್‌, ಶಿವಾನಂದ ಶೆಟ್ಟಿ, ವಿಶೇಷ ಆಮಂತ್ರಿತ ಸದಸ್ಯರುಗಳಾದ ದೇವಲ್ಕುಂದ ಭಾಸ್ಕರ್‌ ಶೆಟ್ಟಿ, ವಸಂತಿ ಶೆಟ್ಟಿ, ಹರೀಶ್ಚಂದ್ರ ಆಚಾರ್ಯ ಸೇರಿದಂತೆ ಸದಸ್ಯರು ಹಾಜರಿದ್ದರು.

ಸಭೆಯಲ್ಲಿ 2022-25ರ ಅವಧಿಗೆ ಪಾರುಪತ್ಯಗಾರರನ್ನಾಗಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್‌, ಜಿ.ಟಿ ಆಚಾರ್ಯ, ದೇವಲ್ಕುಂದ ಭಾಸ್ಕರ್‌ ಶೆಟ್ಟಿ ಅವರನ್ನು ಮರುನೇಮಕ ಗೊಳಿಸಲಾಗಿದ್ದು, 2022-23ರ ಸಾಲಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆಸಲಾಗಿದೆ. ನೂತನ ಅಧ್ಯಕ್ಷರಾಗಿ ನಿತ್ಯಾನಂದ ಡಿ.ಕೋಟ್ಯಾನ್‌ ಹಾಗೂ ಉಪಾಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಅವರನ್ನು ಸಭೆಯು ಸರ್ವಾನುಮತದಿಂದ ಆಯ್ಕೆಗೊಳಿಸಿತು.

ಸಭಿಕರ ಪರವಾಗಿ ಪ್ರೇಮನಾಥ್‌ ಸುವರ್ಣ, ಪ್ರಕಾಶ್‌ ಶೆಟ್ಟಿ ಪೇಟೆಮನೆ ಮಾತನಾಡಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಸಲಹೆ ಸೂಚನೆಗಳನ್ನಿತ್ತರು.

ಸುಚಿತಾ ಶೆಟ್ಟಿ ಮತ್ತು ನಂದಿತಾ ಶೆಟ್ಟಿಗಾರ್‌ ಪ್ರಾರ್ಥನೆಗೈದರು. ಗೌರವ ಪ್ರಧಾನ ಕಾರ್ಯದರ್ಶಿ ವಾಣಿ ಎಸ್‌.ಶೆಟ್ಟಿ ಸ್ವಾಗತಿಸಿ, ಗತ ವಾರ್ಷಿಕ ಮಹಾಸಭೆಯ ವರದಿ ವಾಚಿಸಿ, ಸಂಘದ ವಾರ್ಷಿಕ ಚಟುವಟಿಗಳ ಮಾಹಿತಿಯನ್ನಿತ್ತರು. ಗೌರವ ಕೋಶಾಧಿಕಾರಿ ಆನಂದ್‌ ಶೆಟ್ಟಿ ಗತ ಸಾಲಿನ ಲೆಕ್ಕಪತ್ರಗಳನ್ನು ಸಭೆಯ ಮುಂದಿರಿಸಿದರು. ಜತೆ ಕಾರ್ಯದರ್ಶಿ ಸಹನಿ ಶೆಟ್ಟಿ ಕೃತಜ್ಞತೆಗೈದರು.

 

-ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.