ಮುಂಬಯಿಯಲ್ಲಿ ಅಪಘಾತಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ


Team Udayavani, Nov 27, 2020, 6:58 PM IST

ಮುಂಬಯಿಯಲ್ಲಿ ಅಪಘಾತಗಳ ಸಂಖ್ಯೆಯಲ್ಲಿ  ಭಾರೀ ಇಳಿಕೆ

ಮುಂಬಯಿ, ನ. 26: ಮುಂಬಯಿಯಲ್ಲಿ ಇತ್ತೀಚೆಗಿನ ವರ್ಷಗಳಲ್ಲಿ ರಸ್ತೆ ಅಪಘಾತ ಗಳಿಂದ ಸಾವನ್ನಪ್ಪುವವರ ಸಂಖ್ಯೆ ಕಡಿಮೆ ಯಾಗುತ್ತಿದ್ದು, ಇದು ಮುಂಬಯಿ ನಗರ ಟ್ರಾಫಿಕ್‌ ಇಲಾಖೆಯ ಪೊಲೀಸರ ಕಠಿನ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲವಾಗಿದೆ.

ಜಾಗತಿಕ ರಸ್ತೆ ಸುರಕ್ಷತೆಗಾಗಿ ಬ್ಲೂಮ್ಬರ್ಗ್‌ ಲೋಕೋಪಕಾರ ಉಪಕ್ರಮ ಮತ್ತು ಮುಂಬಯಿ ಟ್ರಾಫಿಕ್‌ ಪೊಲೀಸರು ಸಹಿತ ಅದರ ಪಾಲುದಾರರು ಮುಂಬಯಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಸಾವಿನ ಸಂಖ್ಯೆ ಮತ್ತು ಗಾಯದ ಅಂಕಿಂಶವನ್ನು ವಿಶ್ಲೇಷಿಸಿ ವರದಿ ಬಿಡುಗಡೆ ಮಾಡಿದ್ದಾರೆ. ಮುಂಬಯಿಯಲ್ಲಿ 184 ಕಿ.ಮೀ. ರಸ್ತೆ ವಿಶ್ಲೇಷಿಸಿದ ಅನಂತರ, ಕ್ರ್ಯಾಶ್‌ ಅನಾಲಿಸಿಸ್‌ ತಂಡವು 2015 ಮತ್ತು 2019ರ ನಡುವೆ ರಸ್ತೆ ಅಪಘಾತಗಳ ಸಾವುಗಳಲ್ಲಿ  ಇಳಿಕೆ ಕಂಡುಬಂದಿದೆ ಎಂದು ತಿಳಿಸಿದೆ.

ಕಳೆದ ಸಾಲಿನಲ್ಲಿ 447 ಮಂದಿ ಸಾವು :

2019ರಲ್ಲಿ ಮುಂಬಯಿ ರಸ್ತೆ ಅಪ ಘಾತದಲ್ಲಿ 447 ಜನರು ಪ್ರಾಣ ಕಳೆದು ಕೊಂಡಿದ್ದು, 2018ಕ್ಕೆ ಹೋಲಿಸಿದರೆ ಶೇ.3 ರಷ್ಟು ಕುಸಿತ ಕಂಡುಬಂದಿದೆ. 2015ರ ಅಂಕಿಅಂಶಗಳಿಗೆ ಹೋಲಿಸಿದರೆ ಶೇ. 47ರಷ್ಟು ಕುಸಿತ ಕಂಡು ಬಂದಿದ್ದು, ಸಾವನ್ನಪ್ಪಿದವರಲ್ಲಿ ಶೇ. 80ರಷ್ಟು ಪುರುಷರು ಮತ್ತು ಮಾರಣಾಂತಿಕ ಗಾಯಗೊಂಡವರಲ್ಲೂ ಶೇ. 99ರಷ್ಟು ಪುರುಷರು ಎಂದು ವರದಿ ತಿಳಿಸಿದೆ. 2019ರಲ್ಲಿ ಗಾಯಗೊಂಡ ಹೆಚ್ಚಿನ ಚಾಲಕರು 20ರಿಂದ 24 ವರ್ಷದೊಳಗಿನ ವಯಸ್ಸಿನವರು ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು 30ರಿಂದ 59 ವರ್ಷ ವಯಸ್ಸಿನವರಾಗಿದ್ದಾರೆ. 2019ರಲ್ಲಿ ನಗರದ ಒಟ್ಟು ಸಾವುಗಳಲ್ಲಿ ಶೇ. 90ರಷ್ಟು ಪಾದಚಾರಿಗಳು, ಸೈಕ್ಲಿಸ್ಟ್‌ಗಳು ಮತ್ತು ಮೋಟಾರ್‌ ಸೈಕಲ್‌ ಸವಾರರು ಎಂದು ವರದಿ ಹೇಳಿದೆ.

ಘಾಟ್‌ಕೋಪರ್‌ ಫ್ಲೈಓವರ್‌ ಹಾಟ್‌ಸ್ಪಾಟ್‌ :

ಘಾಟ್‌ಕೋಪರ್‌ನ ಮಾಹುಲ್‌ ರಸ್ತೆ ಮತ್ತು ಬಾಳಾಸಾಹೇಬ್‌ ಠಾಕ್ರೆ ಫ್ಲೈ ಓವರ್‌ನಲ್ಲಿ ಗರಿಷ್ಠ ಸಾವುನೋವುಗಳು ದಾಖಲಾಗಿವೆ. ಅಮರ್‌ ಮಹಲ್‌ ಮತ್ತು ಗೋದ್ರೇಜ್‌ ಜಂಕ್ಷನ್‌ಗಳು ಅಪಘಾತ ವಲಯಗಳಾಗಿವೆ. 2017 ಮತ್ತು 2019ರ ನಡುವೆ ಅಮರ್‌ ಮಹಲ್‌ ಜಂಕ್ಷನ್‌ನಲ್ಲಿ 25 ಮಂದಿ ಮತ್ತು ಗೋದ್ರೇಜ್‌ ಜಂಕ್ಷನ್‌ನಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ವಾರದ ದಿನಗಳಲ್ಲಿ ರಾತ್ರಿ 7ರಿಂದ 9ರ ಅವಧಿಯಲ್ಲಿ ಸಂಭವಿಸಿದ ಅಪಘಾತಗಳು ಸಂಭವಿಸಿ ಹೆಚ್ಚಿನ ಸಾವುನೋವುಗಳಾಗಿವೆ. ವಾರಾಂತ್ಯದಲ್ಲಿ  ರಾತ್ರಿ 10ರಿಂದ 11ರ ವರೆಗೆ ಹೆಚ್ಚಿನ ಅಪಘಾತಗಳು ಸಂಭವಿಸಿವೆ.

ಪ್ರಸ್ತುತ ವರ್ಷ 172 ಮಂದಿ ಸಾವು :

ಮುಂಬಯಿ ಟ್ರಾಫಿಕ್‌ ಕಂಟ್ರೋಲ್‌ ಬ್ರಾಂಚ್‌ ಈ ವರ್ಷ ಜನವರಿಯಿಂದ ಆಗಸ್ಟ್‌ವರೆಗೆ ನಗರದಲ್ಲಿ ರಸ್ತೆ ಅಪಘಾತ ಸಾವುಗಳ ಬಗ್ಗೆ ತನ್ನ ವರದಿಯನ್ನು ಬಿಡುಗಡೆ ಮಾಡಿದೆ. ಈ ಅವಧಿಯಲ್ಲಿ ಒಟ್ಟು 172 ಸಾವುನೋವುಗಳನ್ನು ದಾಖಲಿಸಿದೆ, ಅದರಲ್ಲಿ ಶೇ. 47ರಷ್ಟು ಪಾದಚಾರಿಗಳು ಎಂದು ತಿಳಿಸಲಾಗಿದೆ. ಕಳೆದ ಆರೇಳು ತಿಂಗಳುಗಳಿಂದ ಕೋವಿಡ್  ಲಾಕ್‌ಡೌನ್‌ನಿಂದಾಗಿ ಅಪಘಾತಗಳ  ಸಂಖ್ಯೆ ಕಡಿಮೆಯಾಗಿದೆ ಎಂದು  ಮೂಲಗಳು ತಿಳಿಸಿವೆ.

ಸುರಕ್ಷಿತ ವೇಗದಲ್ಲಿ ಓಡಿಸಲು, ಹೆಲ್ಮೆಟ್‌ ಮತ್ತು ಸೀಟ್‌ ಬೆಲ್ಟ್ ಧರಿಸಲು ಮುಂಬಯಿ ಜನರಲ್ಲಿ ಮನವಿ ಮಾಡುತ್ತಿದ್ದೇವೆ. ಪಾನಮತ್ತರಾಗಿ ವಾಹನ ಚಲಾಯಿಸಬಾರದು ಎಂದು ಒತ್ತಾಯಿಸುತ್ತೇವೆ. ಸಂಚಾರವನ್ನು ನಿಯಂತ್ರಿಸಲು ಮತ್ತು ಮುಂದಿನ ದಿನಗಳಲ್ಲಿ ಅಪಘಾತಗಳನ್ನು ಕಡಿಮೆ ಮಾಡಲು ವಿವಿಧ ಯೋಜನೆಗಳನ್ನು ತರುವ ಯೋಚನೆಯಿದೆ. ಯಶಸ್ವಿ ಯಾದವ್‌, ಜಂಟಿ ಪೊಲೀಸ್‌ ಆಯುಕ್ತರು, ಸಂಚಾರ ವಿಭಾಗ, ಮುಂಬಯಿ.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.