ಅದಮಾರು ಮಠದಲ್ಲಿ ವಾರ್ಷಿಕ ರಾಮನವಮಿ ಉತ್ಸವಕ್ಕೆ ಪೂರ್ವ ಸಿದ್ಧತೆ


Team Udayavani, Apr 3, 2017, 5:02 PM IST

65889.jpg

ಮುಂಬಯಿ: ನೆಮ್ಮದಿಯ ಬದುಕಿಗೆ ಆಧ್ಯಾತ್ಮಿಕತೆಯನ್ನು  ನಂಬುವ ಕಾಲ ಇದಾಗಿದೆ. ರಾಮನ ಉಪನಿಷತ್ತುಗಳು ಸನ್ಮಾರ್ಗದ ಸಂದೇಶ ಸಾರುತ್ತವೆ. ಲೌಕಿಕ ಬದುಕನ್ನು ಬದಿಗೊತ್ತಿ ನಿಸ್ವಾರ್ಥ, ಪರಸ್ಪರ ಪ್ರೀತಿ, ಸಹಕಾರ ಮನೋಭಾವನೆಯಿಂದ  ಬದುಕಿದಾಗ ಜೀವನ ಪಾವನವಾಗುವುದು ಎಂದು ಉಡುಪಿ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ನುಡಿದರು.

ಮಾ. 29ರಂದು   ಸಂಜೆ  ಅಂಧೇರಿ ಪಶ್ಚಿಮದ ಇರ್ಲಾದ ಶ್ರೀ  ಅದಮಾರು ಮಠದಲ್ಲಿ 2017ನೇ  ವಾರ್ಷಿಕ ಶ್ರೀ ರಾಮನವಮಿ ಉತ್ಸವದ ಪೂರ್ವ ಸಿದ್ಧತೆ ಹಾಗೂ ವಾರ್ಷಿಕ ರಾಮಾಯಣ ಪ್ರವಚನಕ್ಕೆ ಚಾಲನೆಯನ್ನಿತ್ತು ಆಶೀರ್ವಚನ ನೀಡಿದ ಅವರು, ಪ್ರಕೃತಿ ಅಂದರೆ ಸರ್ವನಾಮವಾಗಿದೆ. ಇದರ ಅಧ್ಯಯನದಿಂದ ಬದುಕು ಸಮೃದ್ಧಿಯಾಗುವುದು. ಅಪರಕ್ರಿಯೆ ಮತ್ತು ಪರಕ್ರಿಯೆಗಳ ಅರಿವು ಮೂಡಿಸುವ ಅಗತ್ಯ ನಮಗಿದ್ದು, ಇದರಿಂದ ಪ್ರಕೃತಿಬದ್ಧವಾಗಿ ಬಾಳಬಹುದು. ಬಲತ್ಕಾರಕ್ಕೆ ಬಗ್ಗದೆ ಬಾಳುವ ಅಗತ್ಯ ಪ್ರಸಕ್ತ ಜನತೆಗಿದ್ದು ಜೀವನವನ್ನು ಪ್ರಾಮಾಣಿಕವಾಗಿ ಬದುಕಬೇಕು. ತುಂಬಿಸಿ ಉಳಿಸಿಕೊಳ್ಳುವ ಬದುಕನ್ನು ನಾವು ರೂಡಿಸಿಕೊಳ್ಳಬೇಕು. ಆ ಜೀವನವೇ ನಮ್ಮನ್ನು ಸನ್ಮಾರ್ಗದತ್ತ ಒಯ್ಯುತ್ತದೆ ಎಂದೂ ನುಡಿದರು.

ಪ್ರವಚನ ಕಾರ್ಯಕ್ರಮದ ಮುನ್ನ ಸಯಾನ್‌ನ ಗೋಕುಲ ಭಜನಾ ಮಂಡಳಿ ನೇತೃತ್ವದಲ್ಲಿ ಭಜನೆ ನಡೆಸಿದರು. ಸ್ವಾಮೀಜಿಯವರು ಮಠದಲ್ಲಿನ  ಶ್ರೀ ದೇವರಿಗೆ ಪೂಜೆ ನೆರವೇರಿಸಿ ಉಪಸ್ಥಿತ ಭಕ್ತರು ಹಾಗೂ ಭಜನಾ ಮಂಡಳಿ ಸದಸ್ಯರಿಗೆ  ಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು.

ಪ್ರವಚನ ಕಾರ್ಯಕ್ರಮದಲ್ಲಿ ವಾಸುದೇವ ಉಡುಪ, ಸಾಬಕ್ಕ ಖೇಡ್ಕರ್‌,  ಎಸ್‌. ಎನ್‌. ಉಡುಪ, ಪರೇಲ್‌ ಶ್ರೀನಿವಾಸ ಭಟ್‌, ವಾಣಿ ರಾಜೇಶ್‌ ಭಟ್‌, ಮಾ| ಶ್ರೀಶ ಆರ್‌. ಭಟ್‌, ಪ್ರಹ್ಮಾದ ರಾವ್‌, ಸುಧೀರ್‌ ಎಲ್‌. ಶೆಟ್ಟಿ, ಎ. ಎಸ್‌. ರಾವ್‌, ಕೆ. ಹಲಗೇರಿ, ಟಿ. ಜಿ. ಹುನ್ನೂರು, ಶಿವರಾಮ ಬಿ. ನಾೖಕ್‌, ಎ. ಭುಜಂಗರಾವ್‌, ಶರದ್‌ ನರಗುಂದಕರ್‌ ಸೇರಿದಂತೆ ಪುರೋಹಿತರು ಗಣ್ಯರು ಉಪಸ್ಥಿತರಿದ್ದರು.

ಅದಮಾರು ಮಠ ಮುಂಬಯಿ ಶಾಖಾ ದಿವಾನ ಲಕ್ಷ್ಮೀನಾರಾಯಣ ಮುಚ್ಚಿಂತ್ತಾಯ ಸುಖಾಗಮನ ಬಯಸಿ ಪ್ರಸ್ತಾವನೆಗೈದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬಾಲ ಕಲಾವೃಂದ ಸಯನ್‌ ತಂಡವು ಕೃತಿ ಚಡಗ ಮತ್ತು ತಾನ್ವಿ ರಾವ್‌ ನಿರ್ದೇಶನದಲ್ಲಿ ನೃತ್ಯಾವಳಿಗಳನ್ನು ಪ್ರಸ್ತುತಪಡಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರೇಮಾ ಬಿ. ರಾವ್‌ ನಿರೂಪಿಸಿದರು. ಅದಮಾರು ಮಠ ಮುಂಬಯಿ ಶಾಖೆಯ ವ್ಯವಸ್ಥಾಪಕ ಪಡುಬಿದ್ರಿ ವಿ. ರಾಜೇಶ್‌ ರಾವ್‌ ಶ್ರೀಗಳನ್ನು ಪುಷ್ಪಗೌರವದೊಂದಿಗೆ ಸ್ವಾಗತಿಸಿ ವಂದಿಸಿದರು.

ರಾಮನವಮಿಯ  ಸಿದ್ಧತೆಯಾಗಿಸಿ ಮಾ. 29ರಿಂದ  ಎ. 4ರ ರಾಮ ನವಮಿ ತನಕ ಪ್ರತಿದಿನ ಸಂಜೆ 5.30ರಿಂದ ರಾತ್ರಿ 7ರವರೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಎ. 4 ರಂದು ರಾಮನವಮಿಯ ದಿನದಂದು ಬೆಳಗ್ಗೆ 7ರಿಂದ  ಪಂಚಾಮೃತ ಅಭಿಷೇಕ, ಪೂರ್ವಾಹ್ನ 11.30 ರಿಂದ ವಾಗೆªàವಿ ಭಜನಾ ಮಂಡಳಿಯಿಂದ ಭಜನೆ, ಮಧ್ಯಾಹ್ನ 12ರಿಂದ ಮಹಾಪೂಜೆ, ತೀರ್ಥಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಸಂಜೆ 6ರಿಂದ ಪಲ್ಲಕ್ಕಿ ಉತ್ಸವ, ಅನಂತರ ಅದಮಾರುಶ್ರೀ ಅವರಿಂದ  ಉಪನ್ಯಾಸ‌, ರಾತ್ರಿ 8ರವರೆಗೆ ಪೂಜೆ ಮತ್ತು ಅನ್ನ ಸಂತರ್ಪಣೆ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಆ ಪ್ರಯುಕ್ತ ಮಹಾನಗರದಲ್ಲಿನ ಸಮಸ್ತ ಭಕ್ತಾದಿಗಳು ಪಾಲ್ಗೊಂಡು ದೇವರ ಅನುಗ್ರಹಕ್ಕೆ ಪಾತ್ರರಾಗುವಂತೆ ರಾಜೇಶ್‌ ರಾವ್‌ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.