ಆ. 5: ಪನ್ವೇಲ್ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ನಾಗರ ಪಂಚಮಿ
Team Udayavani, Aug 3, 2019, 5:14 PM IST
ನವಿಮುಂಬಯಿ, ಆ. 2: ತುಳುನಾಡಿನ ಶೈಲಿಯಲ್ಲಿ ನಿರ್ಮಾಣ ಗೊಂಡ ಪನ್ವೇಲ್ ಸಮೀಪದ ದೇರಾವಳಿ ಎಂಬಲ್ಲಿರುವ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆವರಣದ ಆ. 5ರಂದು ನಾಗ ದೇವರ ಸನ್ನಿಧಿಯಲ್ಲಿ ನಾಗರ ಪಂಚಮಿ ಆಚರಣೆ ವಿಜೃಂಭಣೆಯಿಂದ ನಡೆಯಲಿದೆ.
ಪೂರ್ವಾಹ್ನ 9 ರಿಂದ ಸಾಮೂಹಿಕ ಪ್ರಾರ್ಥನೆಯೊಂದಿಗೆ ನಾಗಾರಾಧನೆಗೆ ಚಾಲನೆಗೊಳ್ಳಲಿದೆ. ಅನಂತರ ಭಕ್ತರು ಕ್ಷೀರಾಭಿಷೇಕ, ಸೀಯಾಳಾಭಿಷೇಕ, ತಂಬಿಲ ಸೇವೆ, ಅರಸಿನ ಅರ್ಚನೆ, ಪಂಚಕಜ್ಜಾಯ ಸೇವೆ ಇತ್ಯಾದಿ ಸಲ್ಲಿಸಬಹುದು. ಮಧ್ಯಾಹ್ನ 12 ರಿಂದ ಮಹಾಪೂಜೆ ನಡೆಯಲಿದೆ. ಅನಂತರ ಸಾಮೂಹಿಕ ಅನ್ನ ಸಂತರ್ಪಣೆ ನೆರವೇರಲಿದೆ. ಈ ಧಾರ್ಮಿಕ ಸಮಾರಂಭದಲ್ಲಿ ಭಕ್ತರು ಜಾತಿ ಬೇಧವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮಂದಿರದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ