ಆಹಾರ್ನ ನಿಯೋಗದಿಂದ ಸಚಿವರ ಭೇಟಿ
Team Udayavani, Jun 20, 2017, 12:03 PM IST
ಮುಂಬಯಿ: ಆಹಾರ್ನ ಅಧ್ಯಕ್ಷ ಆದರ್ಶ್ ಶೆಟ್ಟಿ ಅವರ ನೇತೃತ್ವದ ನಿಯೋಗವೊಂದು ಮಹಾರಾಷ್ಟ್ರದ ಹಣಕಾಸು ಸಚಿವ ಸುಧೀರ್ ಮುಂಗಂತಿವಾರ್ ಅವರನ್ನು ಭೇಟಿಯಾಯಿತು. ಜಿಎಸ್ಟಿ ಜಾರಿಯಿಂದಾಗಿ ಹೊಟೇಲ್ ಉದ್ಯಮದ ಮೇಲಾಗುವ ವಿವಿಧ ದುಷ್ಪರಿಣಾಮಗಳ ಕುರಿತಂತೆ ನಿಯೋಗವು ಸಚಿವರೊಂದಿಗೆ ಚರ್ಚಿಸಿತು. ಹೊಟೇಲ್ ಉದ್ಯಮಕ್ಕಾಗಿನ ಜಿಎಸ್ಟಿ ದರ ಮಾದರಿ ಬದಲಾವಣೆ ಮತ್ತು ಮರುಪರಿಶೀಲನೆಗಾಗಿ ಕೋರುವ ಮನವಿಯೊಂದನ್ನು ಈ ಸಂದರ್ಭದಲ್ಲಿ ಸಚಿವರಿಗೆ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಈ ಮನವಿಯನ್ನು ಕೇಂದ್ರ ಹಣಕಾಸು ಸಚಿವರಿಗೆ ಕಳುಹಿಸುವ ಜತೆಗೆ ದಿಲ್ಲಿಯಲ್ಲಿ ನಡೆಯಲಿರುವ ಜಿಎಸ್ಟಿ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾವಿಸುವ ಬಗ್ಗೆ ಮುಂಗಂತಿವಾರ್ ಅವರು ನಿಯೋಗಕ್ಕೆ ಭರವಸೆ ನೀಡಿದರು. ಆಹಾರ್ ನಿಯೋಗದಲ್ಲಿ ಆಹಾರ್ನ ಅಧ್ಯಕ್ಷ ಆದರ್ಶ್ ಬಿ. ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು
ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು
Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ