ಆರೋಗ್ಯ ಭಾಗ್ಯಕ್ಕೆ ಪೂರ್ವಜರ ತಿಂಡಿ ತಿನಿಸುಗಳೇ ಪ್ರೇರಕ


Team Udayavani, Jul 26, 2019, 10:12 AM IST

mumbai-tdy-1

ಮುಂಬಯಿ, ಜು. 25: ಅಗೋಳಿ ಮಂಜಣ್ಣನಂತಹ ವೀರ ಪುರುಷರು ಹುಟ್ಟಿದ ನಮ್ಮ ತುಳುನಾಡಿನಲ್ಲಿ ವರ್ಷವಿಡೀ ನಾವು ಹಬ್ಬ ಹರಿದಿನಗಳನ್ನು ಆಚರಿಸುತ್ತಿರುತ್ತೇವೆ. ಈ ಪೈಕಿ ಆಷಾಢ ಮಾಸವೂ ಒಂದಾಗಿದೆ. ಆಟಿ ಅಂದರೆ ಕಷ್ಟದ ತಿಂಗಳೆಂಬ ಪ್ರತೀತಿ ಈ ಹಿಂದಿತ್ತು. ಆಟಿ ತಿಂಗಳಿಗೆ ವಿಶೇಷ ಪ್ರಾಮುಖ್ಯತೆ ಏಕೆಂದರೆ ಲಗ್ನವಾಗಿ ಹೋದ ಹೆಣ್ಣು ಮಕ್ಕಳು ತಾಯಿಯ ಮನೆಗೆ ಬಂದಾಗ ವಿಶೇಷ ಖಾದ್ಯಗಳನ್ನು ಮಾಡಿ ತಿನಿಸುವುದು, ಆಟಿ ಕಳಂಜ, ಆಟಿಯ ಅಮವಾಸ್ಯೆ, ಪಾಲೆದ ಕೆತ್ತೆಯಿಂದ ಹಾಲು ತೆಗೆದು ಅದಕ್ಕೆ ಬೊರ್‌ಗಲ್ಲನ್ನು ಕಾಯಿಸಿ ಬೆಳ್ಳುಳ್ಳಿ ಹಾಕಿ ಬಿಸಿ ಬೊರ್‌ಗಲ್ಲಿನಿಂದ ಒಗ್ಗರಣೆ ನೀಡುವ ವಿಶೇಷತೆ ಇದೆ. ಇದನ್ನು ಕುಡಿದವರ ರೋಗ ರುಜಿನಗಳು ಮಾಯವಾಗುತ್ತವೆ ಎಂಬ ಪ್ರತೀತಿ ಇದೆ. ಭಾರತೀಯ ಸಂಸ್ಕೃತಿಯಲ್ಲಿ ನಮ್ಮ ಆಚಾರ-ವಿಚಾರಗಳು ವಿಭಿನ್ನವಾಗಿವೆ ಎಂದು ನಗರದ ಹಿರಿಯ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ ತಿಳಿಸಿದರು.

ಜು. 21ರಂದು ಅಂಧೇರಿ ಪೂರ್ವದ ಮಾತೋಶ್ರೀ ಸಭಾಗೃಹದಲ್ಲಿ ಬಂಟರ ಸಂಘ ಮುಂಬಯಿ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗವು ಆಯೋಜಿಸಿದ್ದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಭಾಗಿಯಾಗುವಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಆಗ ಇಂತಹ ಆಚಾರ-ವಿಚಾರಗಳು ಬೆಳೆಯಲು ಸಾಧ್ಯವಿದೆ ಎಂದು ನುಡಿದರು.

ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯು ಪ್ರಾರಂಭದಿಂದಲೂ ವಿವಿಧ ಕಾರ್ಯಾಧ್ಯಕ್ಷರ ಮುಂದಾಳತ್ವದಲ್ಲಿ ಅವರವರ ಕಲಾನುಸಾರ ಉತ್ತಮ, ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಈ ಸಮಿತಿಯ ಸಂಚಾಲಕನಾಗಿ ದುಡಿದ ಅನುಭವ ನನಗಿದೆ. ಬಂಟರ ಸಂಘದ ಮೂಲ ಉದ್ದೇಶ ಸಮಾಜ ಬಾಂಧವರೆಲ್ಲರನ್ನೂ ಒಗ್ಗೂಡಿಸಿ ಒಗ್ಗಟ್ಟನ್ನು ಕಾಯ್ದುಕೊಳ್ಳುವುದು. ಸುಖ-ಕಷ್ಟಗಳಲ್ಲಿ ಒಬ್ಬರಿಗೊಬ್ಬರು ಭಾಗಿಯಾಗುವುದು. ನಮ್ಮ ಪೂರ್ವಜರು ಆಟಿ ತಿಂಗಳ ವಿಶೇಷ ತಿಂಡಿ-ತಿನಿಸು ಹಾಗೂ ಪ್ರಾಕೃತಿಕ ಪದಾರ್ಥಗಳನ್ನು ಸೇವಿಸುತ್ತಿರಬೇಕೆಂದು ನಮಗೆಲ್ಲಾ ತಿಳಿಸಿರುವುದರಲ್ಲಿ ಸತ್ಯವಿದೆ ಎಂದರು.

ಬಂಟರ ಸಂಘ ಮುಂಬಯಿ ಇದರ ಜತೆ ಕೋಶಾಧಿಕಾರಿ ಗುಣಪಾಲ್ ಶೆಟ್ಟಿ ಐಕಳ, ಮಹಿಳಾ ವಿಭಾಗದ ಕಾರ್ಯದರ್ಶಿ ಮನೋ ರಮಾ ಎನ್‌. ಬಿ. ಶೆಟ್ಟಿ, ಪಶ್ಚಿಮ ಪ್ರಾದೇಶಿಕ ವಲಯಗಳ ಸಮನ್ವಯಕ ಸಂಘದ ಡಾ| ಪ್ರಭಾಕರ್‌ ಶೆಟ್ಟಿ ಬೋಳ ಸಮಯೋಚಿತವಾಗಿ ಮಾತನಾಡಿ ಶುಭಹಾರೈಸಿದರು. ಪ್ರಾದೇಶಿಕ ಸಮಿತಿಯ ಸಂಚಾಲಕ ಡಿ. ಕೆೆ. ಶೆಟ್ಟಿ, ಉಪ ಕಾರ್ಯಾಧ್ಯಕ್ಷ ನ್ಯಾಯವಾದಿ ಆರ್‌. ಜಿ. ಶೆಟ್ಟಿ, ಗೌರವ ಕಾರ್ಯದರ್ಶಿ ರವಿ ಆರ್‌. ಶೆಟ್ಟಿ, ಕೋಶಾಧಿಕಾರಿ ಕರುಣಾಕರ್‌ ವಿ. ಶೆಟ್ಟಿ, ಜತೆ ಕಾರ್ಯದರ್ಶಿ ರಮೇಶ್‌ ಡಿ. ರೈ ಕಯ್ನಾರು, ಜೊತೆ ಕೋಶಾಧಿಕಾರಿ ಪ್ರಸಾದ್‌ ಶೆಟ್ಟಿ, ಪ್ರಾದೇಶಿಕ ಸಮಿತಿಯ ಕೋಶಾಧಿಕಾರಿ ಪ್ರೇಮಾ ಬಿ. ಶೆಟ್ಟಿ, ಮಹಿಳಾ ಜತೆ ಕಾರ್ಯದರ್ಶಿ ಜ್ಯೋತಿ ಆರ್‌. ಜಿ. ಶೆಟ್ಟಿ, ಜತೆ ಕೋಶಾಧಿಕಾರಿ ಉಷಾ ವಿ. ಶೆಟ್ಟಿ, ರತ್ನಾ ಪಿ. ಶೆಟ್ಟಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯಶವಂತ ಶೆಟ್ಟಿ, ಕೃಷ್ಣ ಶೆಟ್ಟಿ, ಜಯರಾಮ ಶೆಟ್ಟಿ, ಸುಜಾತಾ ಗುಣಪಾಲ್ ಶೆಟ್ಟಿ, ಶೋಭಾ ರಮೇಶ್‌ ರೈ, ಶೋಭಾ ಶಂಕರ್‌ ಶೆಟ್ಟಿ ಮತ್ತಿತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಸದಸ್ಯ-ಸದಸ್ಯೆಯರು ಆಟಿ ತಿಂಗಳ ನೂರಾರು ಬಗೆಯ ತಿಂಡಿ-ತಿನಿಸುಗಳ ಬಗ್ಗೆ ತಿಳಿಸಿದರು. ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವನಿತಾ ವೈ. ನೋಂಡಾ ಸ್ವಾಗತಿಸಿ ಪ್ರಸ್ತಾವನೆಗೈದರು. ಪ್ರಾದೇಶಿಕ ಸಮಿತಿಯ ಮಹಿಳಾ ಉಪ ಕಾರ್ಯಾಧ್ಯಕ್ಷೆ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ವಜ್ರಾ ಕೆ. ಪೂಂಜ ವಂದಿಸಿದರು.

 

ನಾವು ದಿನಂಪ್ರತಿ ಸೇವಿಸುವ ದಿನಸಿ ಸಾಮಾನು, ತಿಂಡಿ ತಿನಿಸುಗಳು, ಹಾಲು, ಹಣ್ಣು-ಹಂಪಲುಗಳಲ್ಲಿ ವ್ಯಾಪಾರಸ್ಥರು ತಮ್ಮ ಲಾಭಕ್ಕಾಗಿ ರಾಸಾಯನಿಕ ವಸ್ತುಗಳನ್ನು ಬೆರೆಸುತ್ತಿದ್ದು, ನಾವು ಇದನ್ನು ತಿಳಿದೋ ತಿಳಿಯದೋ ಸೇವಿಸುತ್ತೇವೆ. ರಾಸಾಯನಿಕ ಮಿಶ್ರಣವಿರುವ ವಸ್ತುಗಳನ್ನು ಸೇವಿಸಿದ ಪರಿಣಾಮವೇ ನಮ್ಮ ಆರೋಗ್ಯ ಹದಗೆಡುತ್ತದೆ. ಶುದ್ಧತೆ, ಆರೋಗ್ಯದಾಯಕ ತಿನಿಸುಗಳ ಬಗ್ಗೆ ವಿದ್ಯಾವಂತ ಸಮಾಜ ಜಾಗೃತರಾಗದಿರುವುದು ವಿಷಾದನೀಯ. ಆದರೆ ಓದು ಬರಹ ತಿಳಿಯದ ಪೂರ್ವಜರು ಭವಿಷ್ಯದ ಆರೋಗ್ಯಕ್ಕಾಗಿ ಕಾಲಾನುಸಾರ ಆಹಾರವನ್ನು ಔಷಧಿಯಾಗಿಯೇ ಬಳಸುತ್ತಿದ್ದ ಕಾರಣ ಶತಾಯುಷ್ಯವನ್ನು ಕಾಯ್ದಿರಿಸಿದ್ದರು. ವರ್ಷದ ಎಲ್ಲಾ ತಿಂಗಳುಗಳಲ್ಲಿ ಕಾಲಾನುಸಾರ ಆಹಾರವನ್ನು ಸೇವಿಸುತ್ತಾ ಬದುಕನ್ನು ನೆಮ್ಮದಿಯಾಗಿರಿಸಿದ್ದಾರೆ. ಆ ಪೈಕಿ ಆಹಾರ ಪದ್ಧತಿಗೆ ಅತೀ ಮಹತ್ವದ ತಿಂಗಳನ್ನು ಆಟಿ ತಿಂಗಳಾಗಿಸಿ ರೋಗ ನಿರೋಧ ಶಕ್ತಿಗಳಿರುವ ಕೆಸುವಿನ ಎಲೆ, ಹಾಳೆೆ ಮರದ ತೊಗಡು, ನುಗ್ಗೆ ಸೊಪ್ಪು, ಮೆತ್ತೆ ಗಂಜಿ ಇತ್ಯಾದಿಗಳನ್ನು ತಿನ್ನುತ್ತಿದ್ದರು. ಇವೆಲ್ಲವೂ ಕಾಯಿಲೆಮುಕ್ತ, ರೋಗನಿವಾರಕ ತಿನಿಸುಗಳಾಗಿದ್ದ ಕಾರಣ ಈ ಬಗ್ಗೆ ನಾವೂ ನಮ್ಮ ಮಕ್ಕಳಲ್ಲಿ ಇದರ ಮಹತ್ವದ ಬಗ್ಗೆ ತಿಳಿಸುವ ಅಗತ್ಯವಿದೆ. – ಡಾ| ಆರ್‌. ಕೆ. ಶೆಟ್ಟಿ, ಕಾರ್ಯಾಧ್ಯಕ್ಷರು, ಬಂಟರ ಸಂಘ ಬಾಂದ್ರಾ ಪ್ರಾದೇಶಿಕ ಸಮಿತಿ
ಚಿತ್ರ-ವರದಿ : ರೊನಿಡಾ ಮುಂಬಯಿ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.