ಅಂಧೇರಿ ಸ್ಥಳಿಯ ಬಿಲ್ಲವ ಅಸೋಸಿಯೇಶನ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ


Team Udayavani, Aug 26, 2018, 5:15 PM IST

billava.jpg

ಮುಂಬಯಿ:  ಬಿಲ್ಲವರ ಅಸೋ. ಅಂಧೇರಿ ಸ್ಥಳೀಯ ಸಮಿ ತಿಯ 2018-2021 ರ ಅವಧಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳ ಪದಗ್ರಹಣ, ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ಆರ್ಥಿಕ ನೆರವು ಕಾರ್ಯಕ್ರಮವು ಆ.  5ರಂದು ಅಂಧೇರಿ ಪೂರ್ವದ  ಕೊಂಡಿವಿಟಾದ ಶ್ರೀ ರಾಮಕೃಷ್ಣ ಮಂದಿರದ ವಠಾರದಲ್ಲಿ ಜರಗಿತು.

ಅಸೋಸಿಯೇಶನ್‌ನ ನೂತನ ಅಧ್ಯಕ್ಷ ಚಂದ್ರಶೇಖರ್‌. ಎಸ್‌.  ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಅಂಧೇರಿ ಸಮಿತಿಯ ಕಾರ್ಯಾಧ್ಯಕ್ಷರಾದ ರವೀಂದ್ರ ಎಸ್‌. ಕೋಟ್ಯಾನ್‌ ಅವರು ಸ್ವಾಗತಿಸಿದರು, ಗೌರವ ಕಾರ್ಯದರ್ಶಿ  ಹರೀಶ್‌ ಶಾಂತಿಯವರು ಸಮಿತಿಯ ಕಳೆದ ಮೂರು ವರುಷದ ವರದಿಯನ್ನು ವಾಚಿಸಿದರು.  ಬಳಿಕ ಅಸೋಸಿಯೇಶನ್‌ನ ನೂತನ ಗೌರವ ಪ್ರಧಾನ ಕಾರ್ಯದರ್ಶಿ ಗಳಾದ ಧನಂಜಯ ಶಾಂತಿ ಅವರು ಅಂಧೇರಿ ಸಮಿತಿಯ ನೂತನ ಕಾರ್ಯಕಾರಿ ಸಮಿತಿಗೆ ಆಯ್ಕೆ ಗೊಂಡ ಪದಾಧಿಕಾರಿಗಳನ್ನು ಪರಿ ಚಯಿಸಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಬಾಬು ಕೆ. ಪೂಜಾರಿ ಗೌರವ ಕಾರ್ಯಾಧ್ಯಕ್ಷರಾಗಿ ಹಾಗೂ ರವೀಂದ್ರ ಎಸ್‌. ಕೋಟ್ಯಾನ್‌ ಕಾರ್ಯಾಧ್ಯಕ್ಷರಾಗಿ ಪುನರಾಯ್ಕೆಗೊಂಡರು. ಉಪ ಕಾರ್ಯಾಧ್ಯಕ್ಷರಾಗಿ  ಸುರೇಶ್‌ ಬಿ. ಸುವರ್ಣ,  ಜಗನ್ನಾಥ್‌ ಕರ್ಕೇರ, ಗೌರವ ಕಾರ್ಯದರ್ಶಿಯಾಗಿ ಹರೀಶ್‌ ಶಾಂತಿ, ಗೌರವ ಕೋಶಾಧಿಕಾರಿಯಾಗಿ ಸುಧಾಕರ್‌ ಜತ್ತನ್‌ ಅವರು ಆಯ್ಕೆಯಾದರು.
ಕಾರ್ಯಾಧ್ಯಕ್ಷರಾದ ರವೀಂದ್ರ ಎಸ್‌. ಕೋಟ್ಯಾನ್‌ ಅವರು ಮಾತನಾಡಿ, ತನ್ನ ಮೇಲೆ ವಿಶ್ವಾಸವನ್ನಿಟ್ಟು ಬೆಂಬಲಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತಾ ಬರುವ ಮೂರು ವರ್ಷಗಳಲ್ಲಿಯೂ ಇದೇ ರೀತಿಯ ಸಹಕಾರದಿಂದ ಇನ್ನೂ ಹೆಚ್ಚಿನ ಸಾಧನೆಗಳನ್ನು ಮಾಡುವ ಇಚ್ಛೆಯನ್ನು  ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರಸಕ್ತ ವರ್ಷದಲ್ಲಿ ಎಸ್‌ಎಸ್‌ಸಿ ಯಲ್ಲಿ ಉತ್ತಮ ಅಂಕಗಳೊಂದಿಗೆ ಸಾಧನೆಗೈದ ಸಮಿತಿ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಉತ್ಕೃಷ್ಟ ಸಾಧನೆಗೈದ ಬಾಲಪ್ರತಿಭೆ ವಂಶಿಕಾ ಕಾಪು ಇವಳನ್ನು ಅಭಿನಂದಿಸಲಾಯಿತು.

ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಲ್ಲವ ಚೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರೀಸ್‌ನ ಕಾರ್ಯಾಧ್ಯಕ್ಷ ಎನ್‌. ಟಿ. ಪೂಜಾರಿ ಅವರು ಮಾತನಾಡಿ, ಅಂಧೇರಿ ಸ್ಥಳೀಯ ಸಮಿತಿಯಲ್ಲಿ ಮಹಿಳೆಯರ ಸಂಖ್ಯೆಯು ಎದ್ದು ಕಾಣುತ್ತಿದೆ. ನಮ್ಮ ಸ್ಥಳೀಯ ಸಮಿತಿಗಳಲ್ಲಿ ಕಾರ್ಯಾಧ್ಯಕ್ಷೆ ಹಾಗೂ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಲು ಮಹಿಳೆಯರೂ  ಮುಂದೆ ಬರಬೇಕೆಂದು ತಿಳಿಸಿದರು. ಅಸೋಸಿಯೇಶನ್‌ನ ಉಪಕಾರ್ಯಾ ಧ್ಯಕ್ಷರುಗಳಾದ ಶಂಕರ್‌ ಡಿ. ಪೂಜಾರಿ,  ಹರೀಶ್‌ ಜಿ. ಅಮೀನ್‌ ಇವರೂ  ಸಂದಭೋìಚಿತವಾಗಿ ಮಾತನಾಡಿ ದರು. ಅಂಧೇರಿ ಸಮಿತಿಯ ಕಾರ್ಯ ಚಟುವಟಿಕೆಗಳಿಗೆ ಸಹಕಾರವನ್ನು ನೀಡುತ್ತಿರುವ ಲಕ್ಷ್ಮೀ ಕೋಟ್ಯಾನ್‌ ಅವರನ್ನು ಗೌರವಿಸಲಾಯಿತು.

ಚಂದ್ರಶೇಖರ   ಎಸ್‌. ಪೂಜಾರಿಯವರು ತನ್ನ ಅಧ್ಯಕ್ಷೀಯ ಭಾಷಣದಲ್ಲಿ ಅಂಧೇರಿ ಸಮಿತಿಯಲ್ಲಿ ಎಲ್ಲರೂ ಹಸನ್ಮುಖೀಗಳಾಗಿದ್ದು ಇಂತಹ ಲವಲವಿಕೆಯಿರುವ ಜನರಿಂದಲೇ ನಮ್ಮ ಸಮಾಜ ಎತ್ತರಕ್ಕೆ ಬೆಳೆಯುತ್ತದೆ.  ನಾನು  ಎನ್ನದೆ ನಾವೆಂಬ ಭಾವನೆಯಿಂದ ಕೆಲಸ ಮಾಡಿದರೆ ಖಂಡಿತಾ ಯಶಸ್ಸು ಸಿಗುತ್ತದೆ ಎಂದು ನುಡಿದರು.
ಅಸೋಸಿಯೇಶನ್‌ನ ಉಪಾ ಧ್ಯಕ್ಷರುಗಳಾದ ಶ್ರೀನಿವಾಸ ಕರ್ಕೇರ,  ದಯಾನಂದ್‌ ಆರ್‌. ಪೂಜಾರಿ,  ಗೌರವ ಕೋಶಾಧಿಕಾರಿ ರಾಜೇಶ್‌ ಬಂಗೇರ,  ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ಉಳ್ಳಾಲ್‌,  ಭಾರತ್‌ ಬ್ಯಾಂಕಿನ ನಿರ್ದೇಶಕರುಗಳಾದ ಗಂಗಾಧರ ಜೆ. ಪೂಜಾರಿ,  ಜ್ಯೋತಿ ಕೆ. ಸುವರ್ಣ ಉಪಸ್ಥಿತರಿದ್ದರು. ಅಸೋಸಿಯೇಶನ್‌ಗೆ ಆಯ್ಕೆಗೊಂಡ ನೂತನ ಪದಾಧಿಕಾರಿಗಳನ್ನು ಉಪಸಮಿತಿಯ ಪದಾಧಿಕಾರಿಗಳನ್ನು ಅಂಧೇರಿ ಸಮಿತಿಯ ವತಿಯಿಂದ ಅಭಿನಂದಿಸಲಾಯಿತು
ಗೌರವ ಪ್ರಧಾನ   ಕಾರ್ಯದರ್ಶಿಗಳಾದ ಧನಂಜಯ ಶಾಂತಿ ಸಭಾ ಕಾರ್ಯಕ್ರಮವನ್ನೂ ಹಾಗೂ ಕುಮಾರಿ ಸುಶ್ಮಿತಾ ಕೋಟ್ಯಾನ್‌  ಸಾಂಸ್ಕೃತಿಕ  ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ  ಅಸೋಸಿಯೇಶನ್‌ನ ಮಾಜಿ ಕಾರ್ಯದರ್ಶಿಗಳಾದ ಧರ್ಮಪಾಲ್‌ ಜಿ. ಅಂಚನ್‌ ಹಾಗೂ ಲಕ್ಷ್ಮೀ ಕೋಟ್ಯಾನ್‌ ಅವರು ದೀಪ ಬೆಳಗಿಸಿ ಚಾಲನೆ ನೀಡಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.