ಅಂಧೇರಿ ಶ್ರೀ ಲಕ್ಷ್ಮೀನಾರಾಯಣ ಮಂದಿರ: ವಾರ್ಷಿಕ ಪ್ರತಿಷ್ಠಾ ಮಹೋತ್ಸವ
ಶ್ರೀ ಲಕ್ಷ್ಮೀ ನಾರಾಯಣ ದೇವರಿಗೆ ಪಂಚಾಮೃತ ಮತ್ತು ಕಲಶಾಭಿಷೇಕ, ಮಹಾಪೂಜೆ ನಡೆಯಿತು
Team Udayavani, Apr 8, 2021, 3:12 PM IST
ಮುಂಬಯಿ, ಎ. 7: ನಗರದ ತುಳು – ಕನ್ನಡಿಗರ ಹಿರಿಯ ಮತ್ತು ಪ್ರಥಮ ಧಾರ್ಮಿಕ ಸಂಸ್ಥೆ ಎಂದೆಣಿಸಿಕೊಂಡಿರುವ ಅಂಧೇರಿ ಪಶ್ಚಿಮ ವೀರದೇಸಾಯಿ ರೋಡ್ನ ಶ್ರೀ ಲಕ್ಷ್ಮೀನಾರಾಯಣ ಮಂದಿರದ ವಾರ್ಷಿಕ ಪ್ರತಿಷ್ಠಾ ಮಹೋತ್ಸವವು ಮಾ. 29ರಂದು ಮಂದಿರದ ಪ್ರಧಾನ ಅರ್ಚಕರಾದ ವೇ| ಮೂ| ಗುರುಪ್ರಸಾದ್ ಭಟ್ ಅವರ ಪೌರೋಹಿತ್ಯದಲ್ಲಿ ನಡೆಯಿತು.
ಪೂಜಾ ಯಜಮಾನಿಕೆಯನ್ನು ಲೋಕನಾಥ ಪಿ. ಕಾಂಚನ್ ಅವರು ವಹಿಸಿದ್ದರು. ಬೆಳಗ್ಗೆ 8.30ರಿಂದ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ ವಾಚನ, ಪ್ರಧಾನ ಹೋಮ, ನವಕಲಶ ಪೂಜೆ, ಪರಿವಾರ ಸಹಿತ ಶ್ರೀ ಲಕ್ಷ್ಮೀ ನಾರಾಯಣ ದೇವರಿಗೆ ಪಂಚಾಮೃತ ಮತ್ತು ಕಲಶಾಭಿಷೇಕ, ಮಹಾಪೂಜೆ ನಡೆಯಿತು. ಬಳಿಕ ಕುಂಟಾಡಿ ಸುರೇಶ್ ಭಟ್ ಅವರಿಂದ ಬಲಿ ಉತ್ಸವ, ಚೆಂಡೆ, ಜಾಗಟೆ, ಶಂಖ ನಾದದೊಂದಿಗೆ ಕುಣಿತ ಭಜನೆ, ಸಂಜೆ ರಂಗ ಪೂಜೆ, ಮಹಾಪೂಜೆ ನೆರವೇರಿತು.
ಜೀಟಿಗೆಯಲ್ಲಿ ವಾಸು ಎಸ್. ಉಪ್ಪೂರು ಮತ್ತು ಪುರಂದರ ಅಮೀನ್ ಅವರು ಸಹಕರಿಸಿದರು. ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಉತ್ಸವವನ್ನು
ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ವಿ. ಕೆ. ಸುವರ್ಣ, ಉಪಾಧ್ಯಕ್ಷ ನಾಗೇಶ್ ಎಲ್. ಮೆಂಡನ್, ಜತೆ ಕಾರ್ಯದರ್ಶಿ ಹರಿಶ್ಚಂದ್ರ ಸಿ. ಕಾಂಚನ್, ಟ್ರಸ್ಟಿ ಗೋವಿಂದ ಎಸ್. ಪುತ್ರನ್, ಪ್ರಧಾನ ಕೋಶಾಧಿಕಾರಿ ಕೇಶವ ಪುತ್ರನ್, ಜತೆ ಕೋಶಾಧಿಕಾರಿ ಅಶೋಕ್ ಸುವರ್ಣ, ಸುರೇಂದ್ರ ಹಳೆಯಂಗಡಿ,
ಹರೀಶ್ ಪುತ್ರನ್, ಮೋಹನ್ ದಾಸ್ ಮೆಂಡನ್, ಜಗನ್ನಾಥ್ ಕಾಂಚನ್, ಭಕ್ತರು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ