ಕೋವಿಡ್‌-19ಗೆ ಸಂಭಾವ್ಯ ಚಿಕಿತ್ಸೆ  ಅಭಿವೃದ್ಧಿಪಡಿಸಿದ ಅನಿಕಾ ಚೆಬ್ರೊಲು

 ಭಾರತೀಯ ಮೂಲದ ಬಾಲಕಿಯ ಮಹಾನ್‌ ಸಾಧನೆ

Team Udayavani, Nov 28, 2020, 4:08 PM IST

ಕೋವಿಡ್‌-19ಗೆ ಸಂಭಾವ್ಯ ಚಿಕಿತ್ಸೆ  ಅಭಿವೃದ್ಧಿಪಡಿಸಿದ ಅನಿಕಾ ಚೆಬ್ರೊಲು

ಮಹಾಮಾರಿ ಕೊರೊನಾಗೆ ಸೂಕ್ತ ಔಷಧದ ಹುಡುಕಾಟ ಇನ್ನೂ ನಡೆಯುತ್ತಿದೆ. ದೇಶ ವಿದೇಶೀಯ ಪ್ರಸಿದ್ಧ ಔಷಧದ ಕಂಪೆನಿಗಳು ಕಳೆದ 11 ತಿಂಗಳುಗಳಿಂದ  ಹಗಲಿರುಳು ಪ್ರಯತ್ನಿಸುತ್ತಿದ್ದರೂ ಇದುವರೆಗೂ ಸೂಕ್ತ ಔಷಧ ಮಾರುಕಟ್ಟೆಗೆ ಬಂದಿಲ್ಲ.

ಈ ನಡುವೆ ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ 14 ವರ್ಷದ ಬಾಲಕಿ ಅನಿಕಾ ಚೆಬ್ರೊಲು ಅಮೋಘ ಸಾಧನೆ ಮಾಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿಂದ್ದಾಳೆ. 3 ಎಂ ಚಾಲೆಂಜ್‌ ವೆಬ್‌ಸೈಟ್‌ ಮಾಹಿತಿ ಪ್ರಕಾರ ಕೊರೊನಾ ವೈರಸ್‌ ಸಾಂಕ್ರಾಮಿಕ ರೋಗಕ್ಕೆ ಚಿಕಿತ್ಸೆ ಕಂಡುಹಿಡಿಯುವ ಪ್ರಯತ್ನದ ಭಾಗವಾಗಿ ಈ ಸ್ಪರ್ಧೆ ಆಯೋಜಿಸಲಾಗಿತ್ತು  ಎನ್ನಲಾಗಿದೆ.

14ರ ಪೋರಿಯ ಅಮೋಘ ಸಾಧನೆ

ಅಮೆರಿಕದ ಟೆಕ್ಸಾಸ್‌ನ ಫ್ರಿಸ್ಕೋನಲ್ಲಿ ನೆಲೆಸಿರುವ ಅನಿಕಾ ಚೆಬ್ರೊಲು ಅವರು ಕೋವಿಡ್‌-19 ಸಂಭಾವ್ಯ ಚಿಕಿತ್ಸೆ ಒದಗಿಸುವ ಸಂಶೋಧನೆಗಾಗಿ 25,000 (18 ಲಕ್ಷ ರೂ.) ಡಾಲರ್‌ ಬಹುಮಾನ ಹಾಗೂ 3 ಎಂ ಯಂಗ್‌ ಸೈಂಟಿಸ್ಟ್ ಚಾಲೆಂಜ್‌ ಗೆದ್ದಿದ್ದಾರೆ.  ಪ್ರೊಟೀನ್‌ ಸ್ಟ್ರೈಕ್ಸ್‌ ಸಂಶೋಧನೆ ಮಾಡಿ ಕೋವಿಡ್‌- 19ಗೆ ಸಂಭಾವ್ಯ ಆ್ಯಂಟಿ ವೈರಲ್‌ ಡ್ರಗ್‌ ಕಂಡು ಹಿಡಿದಿದ್ದು, ಸಿಲಿಕೋ ಮೆಥೆಡೋಲಾಜಿ ಬಳಸಿ ಈ ಔಷಧವನ್ನು ಆನ್ವೇಷಿಸಿದ್ದಾರೆ.

ಸಾಂಕ್ರಾಮಿಕ ರೋಗ ಪತ್ತೆಗೆ ಮದ್ದರೆಯುವ ಪ್ರಯತ್ನ

ಕೊರೊನಾ ಬರುವುದಕ್ಕೂ ಮುಂಚೆಯೆ ಅನಿಕಾ, ಈ ಕುರಿತು ಸಂಶೋಧನೆ ಆರಂಭಿಸಿದ್ದರು.  ಮೊದಲು ಸಿಸನಲ್‌ ಫ್ಲೂ (ಶೀತಜ್ವರ) ಅನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತ ಅಧ್ಯಯನ ನಡೆಸಿದ್ದ ಅನಿಕಾಳ ಯೋಜನೆ ಈಗ ಕೊರೊನಾ ಸಾಂಕ್ರಾಮಿಕ ರೋಗಕ್ಕೆ  ಔಷಧ ಕಂಡುಹಿಡಿಯುವ ದಾರಿಯಲ್ಲಿ ಸಾಗಿದೆ.  ಸೋಂಕಿಗೆ ಚಿಕಿತ್ಸೆ ಅಭಿವೃದ್ಧಿಪಡಿಸಲು ಹಲವು ಕಂಪ್ಯೂಟರ್‌ ಪ್ರೋಗ್ರಾಂಗಳನ್ನು ಬಳಸಿಕೊಂಡು ವೈರಸ್‌ನ ಯಾವ ಭಾಗಕ್ಕೆ, ಹೇಗೆ ಅಣುವನ್ನು ಬಂಧಿಸಬಹುದು ಎಂದು ಅನಿಕಾ ತಿಳಿದುಕೊಂಡಿದ್ದಾರೆ.

ಚಿಕಿತ್ಸೆ ಕಂಡುಹಿಡಿಯುವಲ್ಲಿ ಸಹಕಾರಿ

ಸಾರ್ಸ್‌-ಕೋವಿಡ್‌- 2 ವೈರಸ್‌ ನ ಸ್ಟ್ರೈಕ್‌ ಪ್ರೋಟಿನ್‌ಗೆ ಅಂಟುವ ಪ್ರಮುಖ ಸಂಯುಕ್ತವನ್ನು ಅಭಿವೃದ್ಧಿಪಡಿಸಿರುವ ನನ್ನ ಪ್ರಯತ್ನ ಸಾಗರದಲ್ಲಿ ಒಂದು ಹನಿಯಂತೆ ಅನಿಸಿದರೂ ಅದು ಮುಂದೆ ಉಪಯೋಗಕ್ಕೆ ಬರಬಹುದು. ನಾನು ಹೇಗೆ ಈ ಅಣುವನ್ನು ಅಭಿವೃದ್ಧಿಪಡಿಸಿದೆ ಎಂಬುದು ವೈರಾಲಾಜಿಸ್ಟ್ ಮತ್ತು ಔಷಧ ಅಭಿವೃದ್ಧಿ ತಜ್ಞರ ಜತೆ ಸೇರಿದಾಗ ಈ ವೈರಸ್‌ಗೆ ಚಿಕಿತ್ಸೆ ಕಂಡುಹಿಡಿಯುವಲ್ಲಿ ಸಹಾಯಮಾಡಬಹುದು ಎಂದು ಅನಿಕಾ ಸಿಎನ್‌ಎನ್‌ಗೆ ನೀಡಿದ ಸಂದರ್ಶನದಲ್ಲಿ  ತಿಳಿಸಿದ್ದಾರೆ.

ವೈದ್ಯಕೀಯ ಕ್ಷೇತ್ರದಲ್ಲಿ ಪರಿಣಿತಳಾಗುವ ಆಸೆ

ಮುಂದೊಂದು ದಿನ ವೈದ್ಯಕೀಯ ಕ್ಷೇತ್ರದಲ್ಲಿ ಪರಿಣಿತಳಾಗಬೇಕೆಂಬ ಎಂಬ ಮಹದಾಸೆಯನ್ನಿಟ್ಟುಕೊಂಡಿರುವ ಅನಿಕಾಳಿಗೆ  ವಿಜ್ಞಾನದ ಮೇಲೆ ಪ್ರೀತಿ ಮತ್ತು ಉತ್ಸಾಹ  ಬರಲು ಅವರ ತಾತ ಕಾರಣ ಎನ್ನುತ್ತಾಳೆ.  ತಾತಾ ನನಗೆ ಆವರ್ತಕ ಕೋಷ್ಟಕ ಮತ್ತು ಇತರ ವೈಜ್ಞಾನಿಕ ಮಾಹಿತಿಗಳನ್ನು ತಿಳಿದುಕೊಳ್ಳುವಂತೆ ಮಾಡಿದರು. ನಾನು ಬೆಳೆಯುತ್ತ ವಿಜ್ಞಾನದೆಡೆಗೆ ಆಸಕ್ತಿ ಬೆಳೆಸಿಕೊಂಡೆ ಎನ್ನುತ್ತಾಳೆ ಯುವ ವಿಜ್ಞಾನಿ ಅನಿಕಾ.

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.