ಕುಲ್ಗಾಂವ್‌-ಬದ್ಲಾಪುರ ಪುರಸಭೆ ಶಾಲೆಗಳಲ್ಲಿ ಹೊಸದಾಗಿ 336 ವಿದ್ಯಾರ್ಥಿಗಳ ಪ್ರವೇಶ  


Team Udayavani, Jul 21, 2021, 1:19 PM IST

anivasi kannada news

ಬದ್ಲಾಪುರ: ಒಂದೆಡೆ ಪುರಸಭೆ ಶಾಲೆಗಳ ಗುಣಮಟ್ಟ ಕ್ಷೀಣಿಸುತ್ತಿದ್ದು, ಮರಾಠಿ ಶಾಲೆಗಳನ್ನು ಮುಚ್ಚಲಾಗುತ್ತಿದ್ದರೆ, ಈ ವರ್ಷ ಕುಲ್ಗಾಂವ್‌-ಬದ್ಲಾಪುರ ಪುರಸಭೆಯ ಶಾಲೆಗಳಲ್ಲಿ ಹೊಸದಾಗಿ 336 ವಿದ್ಯಾರ್ಥಿಗಳು ಪ್ರವೇಶ ಪಡೆದಿರುವುದು ವಿಶೇಷತೆಯಾಗಿದೆ.

ಈ ಪೈಕಿ 27 ವಿದ್ಯಾರ್ಥಿಗಳು ಪ್ರತಿಷ್ಠಿತ ಆಂಗ್ಲ ಮಾಧ್ಯಮ ಶಾಲೆಗಳಿಂದ ಬಂದವರಾಗಿದ್ದಾರೆ. ಲಾಕ್‌ಡೌನ್‌ ಆರ್ಥಿಕ ಸಂಕಷ್ಟದಿಂದಾಗಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಹೆಚ್ಚಿದ ಶುಲ್ಕಗಳಿಂದ ವಿದ್ಯಾರ್ಥಿಗಳ ವಜಾ ಮತ್ತು ಆರ್ಥಿಕ ಸಂಕಷ್ಟದ ಕಾರಣದಿಂದಾಗಿ ನಗರದಲ್ಲಿ ಹೆತ್ತವರು ಮಕ್ಕಳನ್ನು ಪುರಸಭೆಯ ಶಾಲೆಗಳಿಗೆ ಪ್ರವೇಶ ಬಯಸುತ್ತಿರು

ವುದು ಕಂಡುಬರುತ್ತಿದೆ. ಪುರಸಭೆ ಆಡಳಿತವು ಆನ್‌ಲೈನ್‌ ಶಿಕ್ಷಣದ ಜತೆಗೆ ಪರ್ಯಾಯ ಅಭ್ಯಾಸ ಪುಸ್ತಕಗಳನ್ನು ವಿತರಿಸುವ ಮೂಲಕ ಕೋರ್ಸ್‌ ಅನ್ನು ಪ್ರಾರಂಭಿಸಿದೆ.

ಮನೆಗೆ ಮನೆಗೆ ಭೇಟಿ ನೀಡಿ ಅಭಿಯಾನ

ಪುರಸಭೆಯ ಶಿಕ್ಷಕರು ಇತ್ತೀಚೆಗೆ ನಗರಾದ್ಯಂತ ವಿದ್ಯಾರ್ಥಿಗಳ ಪ್ರವೇಶಕ್ಕೆ ಅಭಿಯಾನವನ್ನು ಪ್ರಾರಂಭಿಸಿದರು. ಪ್ರತಿಯೊಬ್ಬ ಶಿಕ್ಷಕರನ್ನು ಅವರ ಶಾಲಾವಾರು ತರಗತಿಗೆ ನಿಯೋಜಿಸಲಾಯಿತು. ಅದರಂತೆ ಶಿಕ್ಷಕನು ತನ್ನ ತರಗತಿಯ ಪ್ರತಿಯೊಬ್ಬ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಬೇಕಾಗಿತ್ತು. ಲಾಕ್‌ಡೌನ್‌ ಬಳಿಕ ಅನೇಕ ಹೆತ್ತವರು ನಗರವನ್ನು ತೊರೆದಿರುವುದರಿಂದ ಕುಲ್ಗಾಂವ್‌-ಬದ್ಲಾಪುರ ನಗರದಲ್ಲಿ ಪುರಸಭೆಯ ಶಾಲೆಯ ಎಷ್ಟು ವಿದ್ಯಾರ್ಥಿಗಳು ವಾಸವಾಗಿ¨ªಾರೆ ಎಂಬುದನ್ನು ಪರಿಶೀಲಿ ಸುವುದು ಅಗತ್ಯವಾಗಿತ್ತು. ನಾಲ್ಕು ವಾರಗಳ ಅಭಿಯಾನದ ಬಳಿಕ ಹೆಚ್ಚಿನ ಸಂಖ್ಯೆಯ ಹೊಸ ವಿದ್ಯಾರ್ಥಿಗಳು ಕಂಡುಬಂದಿದ್ದಾರೆ.

2,000 ಮೀರಿದ ವಿದ್ಯಾರ್ಥಿಗಳ ಸಂಖ್ಯೆ

ಲಾಕ್‌ಡೌನ್‌ ಸಮಯದಲ್ಲಿ ಹುಟ್ಟೂ ರಿಗೆ ಹೋದ ವಿದ್ಯಾರ್ಥಿಗಳನ್ನೂ ಈ ಅವಧಿಯಲ್ಲಿ ಸಂಪರ್ಕಿಸಲಾಗಿದೆ. ಸಮೀಕ್ಷೆ ಯಲ್ಲಿ ಪುರಸಭೆಯ ಶಾಲೆಗಳಿಗೆ ಹೊಸದಾಗಿ 336 ವಿದ್ಯಾರ್ಥಿಗಳನ್ನು ದಾಖಲಿಸಲಾಗಿದೆ. ಪುರಸಭೆಯ ಶಾಲೆಯಲ್ಲಿ ಈ ವರ್ಷ ಆಂಗ್ಲ ಮಾಧ್ಯಮ ಮತ್ತು ಖಾಸಗಿ ಶಾಲೆಗಳ 27 ವಿದ್ಯಾರ್ಥಿಗಳು ಪ್ರವೇಶ ಪಡೆದಿ¨ªಾರೆ. ಇದರಿಂದಾಗಿ ಪುರಸಭೆಯ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಸಂಖ್ಯೆ 2,000ಕ್ಕಿಂತ ಹೆಚ್ಚಾಗಿದೆ. ಪುರಸಭೆಯ ಶಿಕ್ಷಣ ವಿಭಾಗವು ಈ ವಿದ್ಯಾರ್ಥಿಗಳ ಸಂಖ್ಯೆಯನ್ನು 3,000ಕ್ಕೆ ಹೆಚ್ಚಿಸುವ ಗುರಿ ಹೊಂದಿದೆ.

336 ವಿದ್ಯಾರ್ಥಿಗಳ ಸೇರ್ಪಡೆ

ಒಂದೆಡೆ ಪುರಸಭೆಯ ಶಾಲೆಗಳಲ್ಲಿ ಕಳಪೆ ಸ್ಥಿತಿಯ ಬಗ್ಗೆ ದೂರುಗಳಿದ್ದು, ಮರಾಠಿ ಮಾಧ್ಯಮ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಅನೇಕ ಹೆತ್ತವರು ಆಂಗ್ಲ ಮಾರ್ಧಯಮ ಮತ್ತು ಅರೆ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಪ್ರವೇಶ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಕುಲ್ಗಾಂವ್‌-ಬದ್ಲಾಪುರ ಪುರಸಭೆ ಸಿಬಂದಿ ಮತ್ತು ಶಿಕ್ಷಕರ ಪ್ರಯತ್ನದಿಂದಾಗಿ ಒಂದೇ ವರ್ಷದಲ್ಲಿ 336 ಹೊಸ ವಿದ್ಯಾರ್ಥಿಗಳನ್ನು ಶಾಲೆಯಲ್ಲಿ ದಾಖಲಿಸಲಾಗಿದೆ.

ನವೀಕರಣಗೊಂಡ 16 ಶಾಲೆಗಳು

ಕುಲ್ಗಾಂವ್‌-ಬದ್ಲಾಪುರ ಪುರಸಭೆ ಇತ್ತೀಚೆಗೆ ನಗರದ ಎಲ್ಲ 16 ಶಾಲೆಗಳಿಗೆ ಬಣ್ಣ ಬಳಿದಿದೆ. ಎರಡು ಹೊಸ ಶಾಲಾ ಕಟ್ಟಡಗಳನ್ನು ನಿರ್ಮಿಸಿದೆ. ಮೂರು ವರ್ಷಗಳ ಹಿಂದೆ ಪುರಸಭೆ ಒಂಬತ್ತನೇ ಮತ್ತು ಹತ್ತನೇ ತರಗತಿಗಳನ್ನು ಪ್ರಾರಂಭಿಸಿತು. ಆದ್ದರಿಂದ 1ರಿಂದ 10ನೇ ತರಗತಿಯವರೆಗೆ ಶಿಕ್ಷಣವು ನಗರದಲ್ಲಿ ಉಚಿತವಾಗಿ ಲಭ್ಯವಿದೆ. ಕಾಲಕಾಲಕ್ಕೆ ಪುರಸಭೆಯ ಶಾಲೆಗಳ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದ್ದು, ಇದು ಅವರ ದಕ್ಷತೆಯನ್ನು ಹೆಚ್ಚಿಸಿರುವುದಲ್ಲದೆ, ಅವರು ಹೊಸ ಬೋಧನಾ ವಿಧಾನಗಳನ್ನು ಅಭಿವೃದ್ಧಿಪಡಿಸಿದ್ದಾರೆ ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.