ಎಲ್ಲಿ ನಾರಿಗೆ ಗೌರವವಿದೆಯೋ ಅಲ್ಲಿ ಭಗವಂತನ ಕೃಪೆ ಇರುತ್ತದೆ: ದಿವಾಕರ ಸಾಲ್ಯಾನ್‌


Team Udayavani, Mar 21, 2021, 1:08 PM IST

anivasi kannadiga

ಮುಂಬಯಿ: ಕರ್ನಾಟಕ ಮಿತ್ರ ಮಂಡಳ ಕಲ್ಯಾಣ್‌ ಇದರ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯು ಮಾ. 14ರಂದು ಸಂಘದ ಕಚೇರಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಸಂಘದ ಪದಾಧಿಕಾರಿಗಳು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಿಳಾ ಸದಸ್ಯೆಯರು ಪ್ರಾರ್ಥನೆಗೈದರು. ವೇದಿಕೆಯಲ್ಲಿ ಕರ್ನಾಟಕ ಮಿತ್ರ ಮಂಡಳ ಕಲ್ಯಾಣ್‌ ಇದರ ಗೌರವಾಧ್ಯಕ್ಷ ಶ್ರೀಧರ ಪೂಜಾರಿ, ಅಧ್ಯಕ್ಷ ದಿವಾಕರ ಸಾಲ್ಯಾನ್‌, ಗೌರವ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಗೌರವ ಕೋಶಾಧಿಕಾರಿ ಪ್ರಶಾಂತ್‌ ಪೂಜಾರಿ, ರಾಜೇಶ್‌ ಪೂಜಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೇವಕಿ ಪೂಜಾರಿ, ಮಾಜಿ ಕಾರ್ಯಾಧ್ಯಕ್ಷೆ ಶ್ರೀಮತಿ ಕೋಟ್ಯಾನ್‌, ಪ್ರೀತಿ ಪೂಜಾರಿ, ಸುಜಾತಾ ಕೋಟ್ಯಾನ್‌ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ದಿವಾಕರ ಸಾಲ್ಯಾನ್‌ ಅವರು ಮಾತನಾಡಿ, ಅನಾದಿ ಕಾಲದಿಂದಲೂ ಸನಾತನ ಧರ್ಮದ ಪ್ರತೀಕವಾದ ಅರಸಿನ ಕುಂಕುಮ ಕಾರ್ಯಕ್ರಮ ನಡೆದುಕೊಂಡು ಬಂದಿದೆ. ಇದು ಮಹಿಳೆಯರಿಗೆ ಮಂಗಳ ಭಾಗ್ಯ, ಸುಖ, ಸಂಪತ್ತು, ಆರೋಗ್ಯ ಭಾಗ್ಯವನ್ನು ಕರುಣಿಸುತ್ತದೆ. ನಾರಿಯು ನಾರಾಯಣಿಗೆ ಸಮಾನವಾಗಿದ್ದು, ತಮ್ಮ ವಿವಿಧ ಕರ್ತವ್ಯಗಳನ್ನು ನಿಭಾಯಿಸುತ್ತಾ ಸದೃಢ ಸಮಾಜ ನಿರ್ಮಾಣಕ್ಕೆ ಕಾರಣಿಕರ್ತರಾಗುತ್ತಾಳೆ. ಎಲ್ಲಿ ನಾರಿಗೆ ಗೌರವವಿದೆಯೋ ಅಲ್ಲಿ ಭಗವಂತನ
ಕೃಪೆ ಇರುತ್ತದೆ. ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದು, ಪುರುಷರಿಗೆ ಸಮಾನವಾಗಿ ನಿಂತಿದ್ದಾಳೆ. ಮಹಿಳೆಯರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರಿಗೆ ಆಯಾಯ ಕ್ಷೇತ್ರಗಳಲ್ಲಿ ಬೆಳೆಯಲು ಸಾಧ್ಯ. ಕರ್ನಾಟಕ ಮಿತ್ರ ಮಂಡಳಿಯು ಕಳೆದ ಹಲವಾರು ವರ್ಷಗಳಿಂದ ಮಹಿಳೆಯರಿಗೆ ಪ್ರಾಧಾನ್ಯತೆಯನ್ನು ನೀಡಿ ಅವರನ್ನು ಬೆಳೆಸುವ ಕಾರ್ಯದಲ್ಲಿ ತೊಡಗಿದೆ ಎಂದು ನುಡಿದು ಮಹಿಳಾ ದಿನದ ಶುಭಾಶಯ ತಿಳಿಸಿದರು.

ಮಹಿಳಾ ವಿಭಾಗದ ವತಿಯಿಂದ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರನ್ನು ಗೌರವಿಸಲಾಯಿತು. ಸಂಘಕ್ಕಾಗಿ ನಿಸ್ವಾರ್ಥ ಸೇವೆಗೈದ ಉಮಾನಾಥ್‌ ಸಫಲಿಗ ದಂಪತಿಯನ್ನು ಸಂಘದ ಪರವಾಗಿ ಗಣ್ಯರು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೇವಕಿ ಪೂಜಾರಿ ಅವರು ಮಾತನಾಡಿ, ಮಹಿಳೆಯು ಮನೆ ಮಗಳಾಗಿ, ಸಹೋದರಿಯಾಗಿ, ಪತ್ನಿಯಾಗಿ, ಸೊಸೆಯಾಗಿ, ತಾಯಿಯಾಗಿ ತನ್ನ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಸುಸಂಸ್ಕೃತ ಕುಟುಂಬ ಕಟ್ಟಲು ಮುಂಚೂಣಿಯಲ್ಲಿರುತ್ತಾಳೆ. ಮಹಿಳೆಯ ತ್ಯಾಗ, ನಿಷ್ಠೆ ಅಪಾರವಾಗಿದೆ. ಮಹಿಳೆಯರನ್ನು ಸಮಾಜ ಗೌರವದಿಂದ ಕಾಣಬೇಕು. ಕೇವಲ ಒಂದು ದಿನದ ಆಚರಣೆಗೆ ಮಾತ್ರ ಮಹಿಳಾ ದಿನ ಮೀಸಲಾಗಬಾರದು. ಕರ್ನಾಟಕ ಮಿತ್ರ ಮಂಡಳಿಯು ಮಹಿಳೆಯರನ್ನು ಸದಾ ಪ್ರೋತ್ಸಾ ಹಿಸುತ್ತಿರುವುದು ಅಭಿಮಾನದ ವಿಷಯವಾಗಿದೆ ಎಂದು ನುಡಿದು ಶುಭಹಾರೈಸಿದರು.
ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಶ್ರೀಮತಿ ಕೋಟ್ಯಾನ್‌ ಅವರು ಮಾತನಾಡಿ, ಅರಸಿನ ಕುಂಕುಮವು ಎಲ್ಲ ಮಹಿಳೆಯರಿಗೆ ಗೌರವದ ವಿಷಯ. ಮಂಗಳದ ಪ್ರತೀಕವಾದ ಅರಸಿನ ಕುಂಕುಮವು ಆರೋಗ್ಯ ಭಾಗ್ಯವನ್ನು ವೃದ್ಧಿಸುತ್ತದೆ. ಮಹಿಳೆಯರು ನಿಸ್ವಾರ್ಥವಾಗಿ ಸಮಾಜ ಸೇವೆಯಲ್ಲಿ ತೊಡಗಬೇಕು. ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರವನ್ನು ಕಲಿಸಿಕೊಡುವಲ್ಲಿ ಮಹಿಳೆಯರ ಪಾತ್ರ ಮಹತ್ತರವಾಗಿದೆ ಎಂದರು.
ಸಂಸ್ಥೆಯ ಗೌರವಾಧ್ಯಕ್ಷ ಶ್ರೀಧರ ಪೂಜಾರಿ ಅವರು ಮಾತನಾಡಿ, ಮಹಿಳೆಯರು ಸಂಸಾರದ ಕಣ್ಣು. ಅವರಿಂದಲೇ ಒಂದು ಕುಟುಂಬ ಬೆಳಗುತ್ತದೆ. ಆದ್ದರಿಂದ ಪ್ರಾಮಾಣಿಕತೆ, ನಿಷ್ಠೆ, ಇನ್ನಿತರ ಮಾನವೀಯ ಗುಣಗಳನ್ನು ಮಹಿಳೆಯರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ರಾಜೇಶ್‌ ಪೂಜಾರಿ ಕಾರ್ಯಕ್ರಮ ನಿರ್ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳೆಯರಲ್ಲಿ ವಿಶೇಷ ಪ್ರತಿಭೆಯಿದ್ದು, ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಮಕ್ಕಳಿಗೆ ಒಳ್ಳೆಯ
ಸಂಸ್ಕಾರ ನೀಡಿ ಸದೃಢ ಸಮಾಜ ನಿರ್ಮಾಣ ಮಾಡಬೇಕು ಎಂದರು.

ಸುಜಾತಾ ಕೋಟ್ಯಾನ್‌ ವಂದಿಸಿದರು. ಮಹಿಳೆಯರು ಪರಸ್ಪರ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಶುಭಹಾರೈಸಿಕೊಂಡರು. ಯುವ ವಿಭಾಗದ ಪ್ರತೀಶ್‌ ಪೂಜಾರಿ, ಕಾರ್ತಿಕ್‌ ಪೂಜಾರಿ, ಧೀರಾಜ್‌ ಪೂಜಾರಿ, ಸಂಘದ ಹಿರಿಯ, ಕಿರಿಯ ಸದಸ್ಯರು, ಮಹಿಳಾ ವಿಭಾಗದ ಸರ್ವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಭೋಜನದ ವ್ಯವಸ್ಥೆ ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.