ಹಿಂದ್ಮಾತಾ ತಗ್ಗು ಪ್ರದೇಶದ ರಸ್ತೆ ಎತ್ತರ ಹೆಚ್ಚಳ ಕಾರ್ಯಕ್ಕೆ ಚಾಲನೆ
Team Udayavani, Jun 26, 2021, 1:09 PM IST
ಮುಂಬಯಿ : ನಗರದ ಡಾ| ಬಾಬಾಸಾಹೇಬ್ ಅಂಬೇಡ್ಕರ್ ರಸ್ತೆಯಲ್ಲಿರುವ ಹಿಂದ್ಮಾತಾ ಫ್ಲೈಓವರ್ ಮತ್ತು ಪರೇಲ್ ಟಿಟಿ ಫ್ಲೈಓವರ್ ನಡುವಿನ ರಸ್ತೆಯ ಎತ್ತರವನ್ನು ಹೆಚ್ಚಿಸುವ ಕಾರ್ಯಕ್ಕೆ ಪರಿಸರ ಸಚಿವ ಆದಿತ್ಯ ಠಾಕ್ರೆ ಅವರು ಶುಕ್ರವಾರ ಚಾಲನೆ ನೀಡಿದರು.
ಈ ಸ್ಥಳದಲ್ಲಿ ರಸ್ತೆಯ ಎತ್ತರ ಹೆಚ್ಚಿಸುವುದರಿಂದ ತಗ್ಗು ಪ್ರದೇಶ ಜಲಾವೃತಗೊಳ್ಳುವ ಸಮಸ್ಯೆ ಪರಿಹರಿ ಸಲು ಸಹಾಯವಾಗುವುದು ಎಂದು ಸಚಿವ ಆದಿತ್ಯ ಠಾಕ್ರೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಂಬಯಿ ಮೇಯರ್ ಕಿಶೋರಿ ಪೆಡೆ°àಕರ್, ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಪಿ. ವೇಲರಸು, ಜಿÇÉಾಧಿಕಾರಿ ವಿಜಯ್ ಬಾಲಂವಾರ್ ಮೊದಲಾದವರು ಉಪಸ್ಥಿತರಿದ್ದರು.
ಹಿಂದ್ಮಾತಾ ತಗ್ಗು ಪ್ರದೇಶಗಳಲ್ಲಿ ಡಾ| ಬಾಬಾಸಾಹೇಬ್ ಅಂಬೇಡ್ಕರ್ ರಸ್ತೆಯಲ್ಲಿ
ಭಾರೀ ಮಳೆಯಿಂದಾಗಿ ಸಂಚಾರ ದಟ್ಟಣೆ ಸಮಸ್ಯೆ ಯಾಗಿತ್ತು. ಆದುದರಿಂದ ನಿಗಮವು 180 ಮೀಟರ್ ರಸ್ತೆಯ ಎತ್ತರವನ್ನು ಪ್ರಸ್ತುತ ಮಟ್ಟದಿಂದ 1.2 ಮೀಟರ್ ಹೆಚ್ಚಿಸಲಿದೆ.
ಈ ವೇಳೆ ಮಹಾತ್ಮಾ ಗಾಂಧಿ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಮಿನಿ ಪಂಪಿಂಗ್ ಸ್ಟೇಷನ್ ಕಾಮಗಾರಿಗಳನ್ನೂ ಸಚಿವರು ಪರಿಶೀಲಿಸಿದರು. ಇದರ ಸಾಮರ್ಥ್ಯ ನಿಮಿಷಕ್ಕೆ 2.33 ಲಕ್ಷ ಲೀಟರ್ ಆಗಿದೆ. ಈ ಪಂಪಿಂಗ್ ಸ್ಟೇಷನ್ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸಲು ನಿರ್ದೇಶನ ನೀಡಿದ್ದು, ಪ್ರವಾಹ ಪರಿಸ್ಥಿತಿಯಿಂದ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ ಎಂದು ಸಚಿವ ಆದಿತ್ಯ ಠಾಕ್ರೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ