“ಭಗವಂತನ ನಾಮಸ್ಮರಣೆಯಿಂದ ಕೊರೊನಾ ಭಯ ದೂರ”
Team Udayavani, Jun 30, 2021, 1:04 PM IST
ಮುಂಬಯಿ: ಕಳೆದ ಹಲವಾರು ವರ್ಷಗಳಿಂದ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಸೇವೆಗಳನ್ನು ಮಾಡುತ್ತಾ ಬಂದಿರುವ, ಮಲಾಡ್ ಪೂರ್ವದ ವೇ| ಮೂ| ಸತೀಶ್ ಭಟ್ ಸ್ಥಾಪಿಸಿರುವ ತಥಾಸ್ತು ಫೌಂಡೇಶನ್ ವತಿಯಿಂದ ಕೊರೊನಾ ಸಂದರ್ಭದಲ್ಲಿ ಅಗತ್ಯವಿರುವವರಿಗೆ ಅನ್ನದಾನ, ದಿನೋಪಯೋಗಿ ವಸ್ತುಗಳ ಕಿಟ್ ಮತ್ತು ಕಡುಬಡತನದ ಕುಟುಂಬಗಳಿಗೆ ಆರ್ಥಿಕ ಸಹಾಯ ನೀಡಿ ಸಹಕರಿಸುತ್ತಾ ಬಂದಿದ್ದು, ಕಳೆದ ಹಲವಾರು ತಿಂಗಳುಗಳಿಂದ ಹುಣ್ಣಿಮೆಯ ದಿನ ಶ್ರೀ ಸತ್ಯನಾರಾಯಣ ಪೂಜೆಯನ್ನು ನಡೆಸಿ ಕೊರೊನಾ ಮಹಾಮಾರಿಯು ದೂರವಾಗಬೇಕೆಂದು ವಿಶೇಷ ಪೂಜೆಯನ್ನು ಸಲ್ಲಿಸುತ್ತಾ ಬಂದಿದೆ.
ಈ ಬಾರಿಯ ಹುಣ್ಣಿಮೆಯ ಜೂ. 22ರಂದು ಸತ್ಯನಾರಾಯಣ ಪೂಜೆಯು ಮಲಾಡ್ ಕುರಾರ ವಿಲೇಜ್ನ ಶ್ರೀ ಮಂತ್ರದೇವತೆ ಸನ್ನಿಧಿಯಲ್ಲಿ ನಡೆಯಿತು. ಧಾರ್ಮಿಕ ಕಾರ್ಯಕ್ರಮವಾಗಿ ಸಂಜೆ ಭಜನೆ, ಬಳಿಕ ಸತ್ಯನಾರಾಯಣ ಮಹಾಪೂಜೆ, ಸಾರ್ವಜನಿಕ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಪೂಜೆಯಲ್ಲಿ ಪಾಲ್ಗೊಂಡ ಭಕ್ತರೆಲ್ಲರಿಗೂ ವೇ| ಮೂ| ಸತೀಶ ಭಟ್ ಆಶೀರ್ವಚಿಸಿ, ಬದುಕಿನಲ್ಲಿ ಸತ್ಕಾರ್ಯಗಳನ್ನು ನಡೆಸಬೇಕು. ನಿತ್ಯ ನಿರಂತರ ದೇವರ ನಾಮಸ್ಮರಣೆಯನ್ನು ಮಾಡಬೇಕು. ಕೊರೊನಾ ರೋಗದ ಬಗ್ಗೆ ಚಿಂತಿಸುತ್ತಾ ಮನಸ್ಸಿನಲ್ಲಿ ದುಃಖ ಇರಬಾರದು. ಆರೋಗ್ಯವನ್ನು ಕಾಪಾಡುತ್ತಾ ದೇವರ ಸ್ಮರಣೆಯಲ್ಲಿ ಇರಬೇಕು. ಎಲ್ಲ ಸಮಸ್ಯೆಗಳಿಗೂ ಭಗವಂತ ಮಾರ್ಗವನ್ನು ಸೂಚಿಸಿದ್ದಾನೆ. ಮುಂದೆ ಒಳ್ಳೆಯ ದಿನಗಳು ಬರಲಿದೆ ಎಂದು ತಿಳಿಸಿದರು.
ಪೂಜೆಗೆ ಆಗಮಿಸಿ ಭಕ್ತರು ಗಂಧ ಪ್ರಸಾದವನ್ನು ಹಾಗೂ ಶ್ರೀ ಸತ್ಯನಾರಾಯಣ ಪೂಜೆಯ ಪ್ರಸಾದವನ್ನು ಸ್ವೀಕರಿಸಿದ ಮಹಾಪ್ರಸಾದ ಅನ್ನದಾನವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಂತ್ರ ದೇವತಾ ಮಂದಿರದ ನರೇಶ್ ಪೂಜಾರಿ, ಕುಮಾರಸ್ವಾಮಿ, ತಥಾಸ್ತು ಫೌಂಡೇಶನ್ನ ಪದಾಧಿಕಾರಿಗಳು, ಮತ್ತಿತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು