ರಾಜ್ಯದ 5 ಕಡೆಗಳಲ್ಲಿ ಉರ್ದು ಮನೆ: ಮಲಿಕ್


Team Udayavani, Jul 1, 2021, 1:10 PM IST

anivasi kannadiga

ಮುಂಬಯಿ: ರಾಜ್ಯದಲ್ಲಿ ಉರ್ದು ಭಾಷೆಯ ಪ್ರಗತಿಗೆ, ಮರಾಠಿ ಮತ್ತು ಉರ್ದು ಭಾಷೆಯ ಬರಹಗಾರರು, ಕವಿಗಳು, ಚಿಂತಕರು ಮೊದಲಾದವರಲ್ಲಿ ಸೃಜನಶೀಲ ವಿಚಾರಗಳ ವಿನಿಮಯಕ್ಕಾಗಿ ರಾಜ್ಯದ 5 ಸ್ಥಳಗಳಲ್ಲಿ ಉರ್ದು ಮನೆಗಳ ನಿರ್ಮಾಣ ಕಾರ್ಯ ಅಲ್ಪಸಂಖ್ಯಾಕ ಅಭಿವೃದ್ಧಿ ಇಲಾಖೆಯು ಕೈಗೆತ್ತಿಕೊಂಡಿದೆ. ಈ ಉರ್ದು ಮನೆಗಳ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣ ಗೊಳಿಸಲು ಕ್ರಮಕೈಗೊಳ್ಳಲಾಗುತ್ತಿದ್ದು, ಅವುಗಳ ನಿರ್ವಹಣೆಗೆ ನೀತಿ ನಿರ್ಧರಿ ಸಲಾಗಿದೆ ಎಂದು ಇಲಾಖೆಯ ಸಚಿವ ನವಾಬ್‌ ಮಲಿಕ್‌ ಹೇಳಿದ್ದಾರೆ.

ನಾಂದೇಡ್‌ ಉರ್ದು ಮನೆಗಾಗಿ 8.16 ಕೋಟಿ ರೂ.ಗಳ ನಿಧಿಯನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ  ಸೊಲ್ಲಾಪುರದಲ್ಲಿ  ಉರ್ದು ಮನೆಯ ನಿರ್ಮಾಣ ಅಂತಿಮ ಹಂತದಲ್ಲಿದೆ. ಮಾಲೆಗಾಂವ್‌ ಉರ್ದು ಮನೆಯ ಕಾಮಗಾರಿ ಪೂರ್ಣಗೊಂಡಿದ್ದು, ಅದರ ಕಾರ್ಯಾರಂಭ ನಡೆಯುತ್ತಿದೆ. ಮುಂಬಯಿ ವಿಶ್ವವಿದ್ಯಾನಿಲಯದ ಕಲಿನಾ ಪ್ರದೇಶದಲ್ಲಿ ಉರ್ದು ಮನೆ ನಿರ್ಮಿಸಲು ಉದ್ದೇಶಿಸಲಾಗಿದ್ದು, ಈ ನಿಟ್ಟಿನಲ್ಲಿ ಮುಂಬಯಿ ವಿಶ್ವವಿ ದ್ಯಾನಿಲಯವು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ. ನಾಗಪುರದಲ್ಲಿ ಇಸ್ಲಾಮಿಕ್‌

ಸಾಂಸ್ಕೃತಿಕ ಕೇಂದ್ರದ ಕಟ್ಟಡವನ್ನು ಉರ್ದು ಮನೆಯಾಗಿ ಅಭಿವೃದ್ಧಿಪಡಿ ಸಲಾಗುತ್ತಿದೆ. ಇದಕ್ಕಾಗಿ 50 ಲಕ್ಷ ರೂ.ಗಳ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಸಚಿವ ಮಲಿಕ್‌ ಹೇಳಿದ್ದಾರೆ.

ಇಲಾಖೆಯು ಕಾಮಗಾರಿ ಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಉರ್ದು ಮನೆಗಳನ್ನು ತೆರೆಯುವ ಸಿದ್ಧತೆಯಲ್ಲಿದೆ. ಈ ಮನೆಗಳ ಬಳಕೆ, ನಿರ್ವಹಣೆ, ದುರಸ್ತಿ ಮತ್ತು ನಿರ್ವಹಣೆಗೆ ಮೂಲ ನೀತಿಯನ್ನು ಸರಕಾರದ ನಿರ್ಣಯದಿಂದ ಸೂಚಿಸ ಲಾಗಿದೆ. ಈ ಉರ್ದು ಮನೆಗಳಲ್ಲಿ ಆಯೋಜಿಸಬೇಕಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯೋಜಿಸಲು ಜಿÇÉಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಸಮಿತಿಯನ್ನು ರಚಿಸಲಾಗಿದೆ ಎಂದು ಸಚಿವ ಮಲಿಕ್‌ ಹೇಳಿದ್ದಾರೆ.

ಉರ್ದು ಮನೆಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಭಾಷೆಗಳಲ್ಲಿ ಪುಸ್ತಕಗಳ ಪ್ರಕಟನೆ ಇತ್ಯಾದಿ ನಡೆಯಲಿದೆ. ಉರ್ದು ಮನೆ ಗ್ರಂಥಾಲಯ, ಉರ್ದು, ಮರಾಠಿ ಮತ್ತು ಹಿಂದಿ ಭಾಷೆಯ ಪತ್ರಿಕೆಗಳು, ಉರ್ದು ಭಾಷಾ ನಿಯತಕಾ ಲಿಕೆಗಳು, ಪುಸ್ತಕಗಳು ಗ್ರಂಥಾಲ

ಯದಲ್ಲಿ ಲಭ್ಯವಿರುತ್ತವೆ. ಹೊಸದಿಲ್ಲಿ ಯಲ್ಲಿ  ಉರ್ದು ಭಾಷೆಯ ಪ್ರಚಾರಕ್ಕಾಗಿ ರಾಷ್ಟ್ರೀಯ ಮಂಡಳಿಯು ನಡೆಸುತ್ತಿರುವ ವಿವಿಧ ತರಬೇತಿ ಕಾರ್ಯಕ್ರಮಗಳ ಮಾದರಿಯಲ್ಲಿ ಉರ್ದು ಮನೆಗಳಲ್ಲಿ ತರಬೇತಿ ನೀಡ ಲಾಗುವುದು. ಇದಕ್ಕಾಗಿ ಪರಿಷತ್‌ನಿಂದ ಅನುದಾನ ಮತ್ತು ಮಾರ್ಗದರ್ಶನ ಪಡೆಯಲಾಗುವುದು. ಕೌನ್ಸಿಲ್‌ ನಡೆಸುವ ಕಾರ್ಯಕ್ರಮದ ಪ್ರಕಾರ ಉರ್ದು ಭಾಷೆ ಮಾತನಾಡಲು ಸಮು ದಾಯಕ್ಕೆ ಕಲಿಸಲು ಉರ್ದು ಮನೆಗಳಲ್ಲಿ ತರಗತಿಗಳನ್ನು ನಡೆಸಲಾಗು ವುದು ಎಂದು ಸಚಿವ ನವಾಬ್‌ಮಲಿಕ್‌ ಹೇಳಿದ್ದಾರೆ.

ಉರ್ದು ಭಾಷೆಯ ಬೆಳವ ಣಿಗೆಯನ್ನು ಉತ್ತೇಜಿಸುವುದರ ಜತೆಗೆ ಮರಾಠಿ ಮತ್ತು ಉರ್ದು ಭಾಷೆಗಳ ನಡುವಿನ ವಿನಿಮಯ ಹೆಚ್ಚಿಸುವ ಮೂಲಕ ರಾಜ್ಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹೆಚ್ಚಿಸುವಲ್ಲಿ ಉರ್ದು ಮನೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಸಚಿವ ಮಲಿಕ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.